Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಸೋಂಕಿತರ ಸಂಖ್ಯೆ, ಸಾವಿನ ಮಾಹಿತಿ...

ಕೊರೋನ ಸೋಂಕಿತರ ಸಂಖ್ಯೆ, ಸಾವಿನ ಮಾಹಿತಿ ಬಚ್ಚಿಡುತ್ತಿರುವ ಸರಕಾರ: ಸಿದ್ದರಾಮಯ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ30 Sept 2020 5:12 PM IST
share
ಕೊರೋನ ಸೋಂಕಿತರ ಸಂಖ್ಯೆ, ಸಾವಿನ ಮಾಹಿತಿ ಬಚ್ಚಿಡುತ್ತಿರುವ ಸರಕಾರ: ಸಿದ್ದರಾಮಯ್ಯ ಆರೋಪ

ಬೆಂಗಳೂರು, ಸೆ. 30: `ಕೊರೋನ ವೈರಸ್ ಸೋಂಕು ನಿಯಂತ್ರಣದಲ್ಲಿ ತನ್ನ ವೈಫಲ್ಯವನ್ನು ಮುಚ್ಚಿಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರ ಕೋವಿಡ್-19 ಸೋಂಕಿತರ ಸಾವು ಮತ್ತು ಸೋಂಕಿನ ಮಾಹಿತಿಯನ್ನು ಬಚ್ಚಿಡುತ್ತಿದ್ದಾರೆ ಎಂಬ ಸಾರ್ವಜನಿಕರಲ್ಲಿನ ಅನುಮಾನಕ್ಕೆ ಕೋಲಾರ ಜಿಲ್ಲೆಯ ಸಾವುಗಳ ಬಗ್ಗೆ ಆರೋಗ್ಯ ಇಲಾಖೆಯ ಸುಳ್ಳುಗಳೇ ಪುರಾವೆ' ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಬುಧವಾರ ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, `ಕೋಲಾರದಲ್ಲಿ ಕೊರೋನದಿಂದ ಸೆ.19ರಂದು 4 ಮತ್ತು ಸೆ.20ರಂದು 1 ಸಾವು ಸಂಭವಿಸಿದೆ ಎಂದು ಅಲ್ಲಿನ ಜಾಲಪ್ಪ ಆಸ್ಪತ್ರೆ ವರದಿ ಮಾಡಿದೆ. ಆದರೆ, ಆರೋಗ್ಯ ಇಲಾಖೆ ಆ ದಿನಗಳಲ್ಲಿ ಕೊರೋನ ಸೋಂಕಿನಿಂದ ಸಾವು ಸಂಭವಿಸಿಲ್ಲ ಎಂದು ಪ್ರಕಟಣೆ ಹೊರಡಿಸಿದೆ. ಇದು ಯಡಿಯೂರಪ್ಪ ನೇತೃತ್ವದ ಸರಕಾರದ ಕೊರೋನ ಸೋಂಕು ನಿಯಂತ್ರಣದ ಪರಿ!' ಎಂದು ದಾಖಲೆ ಸಮೇತ ಆರೋಪಿಸಿದ್ದಾರೆ.

'ಭ್ರಷ್ಟಾಚಾರದಿಂದಾಗಿ ಹದಗೆಟ್ಟಿರುವ ಹಣಕಾಸು ಸ್ಥಿತಿಯನ್ನು ನಿಯಂತ್ರಿಸಲಾಗದೆ ಅನಿರ್ಬಂಧಿತವಾಗಿ ಎಲ್ಲ ವ್ಯಾಪಾರ-ವಹಿವಾಟನ್ನು ತೆರೆದು ಕೂತಿದ್ದೀರಿ. ಈಗಲೂ ಎಚ್ಚೆತ್ತುಕೊಂಡು ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದೆ ಇದ್ದರೆ ಜನರ ಶಾಪದಿಂದ ಯಾವ ಹೈಕಮಾಂಡ್ ಕೂಡಾ ನಿಮ್ಮನ್ನು ರಕ್ಷಿಸಲಾರದು' ಎಂದು ಸಿದ್ದರಾಮಯ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

'ಕೊರೋನ ಸೋಂಕಿನ ಮಾಹಿತಿ ಕೇಳಿ ಪತ್ರದ ಮೇಲೆ ಪತ್ರ ಬರೆದರೂ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಮತ್ತು ಸಚಿವರು ಯಾಕೆ ಉತ್ತರಿಸುತ್ತಿಲ್ಲ ಎನ್ನುವುದನ್ನು ಕೋಲಾರ ಜಿಲ್ಲೆಯ ಸಾವಿನ ವರದಿಯಲ್ಲಿನ ಸುಳ್ಳುಗಳಿಂದ ಅರ್ಥ ಮಾಡಿಕೊಳ್ಳಬಹುದು. ಕೊರೋನ ಸೋಂಕು ಮತ್ತು ಸಾವಿನ ಸಂಖ್ಯೆಯನ್ನು ಬಚ್ಚಿಟ್ಟರೂ, ನೊಂದ ಕುಟುಂಬಗಳ ಶಾಪದಿಂದ ನೀವು ಪಾರಾಗಲಾರಿರಿ' ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X