Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಘ-ಸಂಸ್ಥೆಗಳ ಧನಸಹಾಯ ಯೋಜನೆ ಮರು...

ಸಂಘ-ಸಂಸ್ಥೆಗಳ ಧನಸಹಾಯ ಯೋಜನೆ ಮರು ಜೀವಕ್ಕೆ ಸರಕಾರ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ30 Sept 2020 6:30 PM IST
share

ಬೆಂಗಳೂರು, ಸೆ.30: ಕೋವಿಡ್‍ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಸಂಘ-ಸಂಸ್ಥೆಗಳಲ್ಲಿ ಕಲಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸರಕಾರ ಧನಸಹಾಯ ಯೋಜನೆಗೆ ಮರು ಜೀವ ನೀಡಲು ಮುಂದಾಗಿದೆ.

ಹಲವಾರು ಸಂಘ-ಸಂಸ್ಥೆಗಳು ಸರಕಾರದ ಅನುದಾನವನ್ನು ನಂಬಿಕೊಂಡೇ ಕೆಲಸ ಮಾಡುತ್ತಿವೆ. ಕಲೆಯನ್ನೇ ನಂಬಿಕೊಂಡವರಿಗೆ ವರ್ಷದ ಬಹುತೇಕ ದಿನ ಉದ್ಯೋಗ ಪಡೆಯಲು ಸಹಕಾರಿಯಾಗಿದೆ. 2018-19ನೇ ಸಾಲಿನಲ್ಲಿ ಧನಸಹಾಯಕ್ಕೆ ತಜ್ಞರು ಅಂತಿಮ ಮಾಡಿದ ಪಟ್ಟಿಯಲ್ಲಿ ಕೆಲ ಸಂಘ–ಸಂಸ್ಥೆಗಳು ನಕಲಿ ಬಿಲ್‍ಗಳನ್ನು ಸಲ್ಲಿಕೆ ಮಾಡಿವೆ ಎಂಬ ಆರೋಪ ಎದುರಾಗಿತ್ತು. ಈ ಕಾರಣಕ್ಕೆ  ಧನಸಹಾಯ ಪ್ರಕ್ರಿಯೆ ತಡೆಹಿಡಿದಿದ್ದ ಹಿಂದಿನ ಮೈತ್ರಿ ಸರಕಾರ, ಈ ಯೋಜನೆ ಸ್ಥಗಿತ ಮಾಡಿ, ಕರ್ನಾಟಕ ವೈಭವ ಯೋಜನೆ ರೂಪಿಸಿತ್ತು.

ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ 2018-19 ನೆ ಸಾಲಿನಲ್ಲಿನ 11.60 ಕೋಟಿ ಅನುದಾನವನ್ನು ಸರಕಾರ ಪ್ರತ್ಯೇಕವಾಗಿರಿಸಿ, ಸಂಘ-ಸಂಸ್ಥೆಗಳಿಗೆ ಹಂಚಿತ್ತು. ಆದರೆ, ಹಿಂದಿನ ಸಾಲಿನಲ್ಲಿ ಈ ಯೋಜನೆಗೆ ಅನುದಾನವನ್ನು ಸರಕಾರ ನಿಗದಿ ಮಾಡಿರಲಿಲ್ಲ. ಇದರಿಂದಾಗಿ ಕೆಲ ಸಂಘ-ಸಂಸ್ಥೆಗಳು ಸಾಂಸ್ಕೃತಿಕ ಚಟುವಟಿಕೆಯಿಂದ ದೂರವಾಗಿದ್ದವು.

17 ಕೋಟಿ ರೂ. ಅನುದಾನ: 2020–21ನೇ ಸಾಲಿನಲ್ಲಿ ಸಾಂಸ್ಕೃತಿಕ ಸಂಘ–ಸಂಸ್ಥೆಗಳಿಗೆ ಅನುದಾನ ನೀಡಲು ಸರಕಾರವು ಒಟ್ಟು 17 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಇದರಲ್ಲಿ 10 ಕೋಟಿ ಸಾಮಾನ್ಯ ವರ್ಗದ ಸಂಘ–ಸಂಸ್ಥೆಗಳಿಗೆ, 7 ಕೋಟಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಂಘ–ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗಿದೆ.

2018–19ನೇ ಸಾಲಿನ ಧನಸಹಾಯ ಪ್ರಕ್ರಿಯೆ ಹಲವು ಗೊಂದಲಕ್ಕೆ ಎಡೆಮಾಡಿಕೊಟ್ಟಿತ್ತು. ಆ ವೇಳೆ ಎರಡು ಲಕ್ಷಕ್ಕಿಂತ ಮೇಲ್ಪಟ್ಟು ಅನುದಾನ ಪಡೆಯುವ ಸಂಘ–ಸಂಸ್ಥೆಗಳ ಕಾರ್ಯಚಟುವಟಿಕೆಯನ್ನು ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. ಈ ಬಾರಿ ಆಯ್ಕೆ ಪ್ರಕ್ರಿಯೆಯಲ್ಲಿನ ಗೊಂದಲ ನಿವಾರಣೆಗೆ ನಿಯಮದಲ್ಲಿ ಕೆಲ ಮಾರ್ಪಾಡು ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಯ್ಕೆ ಪ್ರಕ್ರಿಯೆ ಸರಳೀಕರಣಕ್ಕೆ ಚಿಂತನೆ: ಧನಸಹಾಯದ ನಿಯಮದ ಪ್ರಕಾರ ಸಂಘ–ಸಂಸ್ಥೆಗಳು ಅಗತ್ಯ ದಾಖಲೆಗಳೊಂದಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಆಯಾ ಜಿಲ್ಲೆಯ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ದಾಖಲೆ ಪರಿಶೀಲಿಸಿ, ಸಂಘ–ಸಂಸ್ಥೆಗಳ ಪಟ್ಟಿಯನ್ನು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಗೆ ಕಳುಹಿಸಬೇಕು.

ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಅಕಾಡೆಮಿ ಅಧ್ಯಕ್ಷರನ್ನು ಒಳಗೊಂಡ ತಜ್ಞರ ಸಮಿತಿ ಧನಸಹಾಯಕ್ಕೆ ಪಟ್ಟಿಯನ್ನು ಅಂತಿಮಗೊಳಿಸಲಿದೆ. ಇಲಾಖೆ ಕಾರ್ಯದರ್ಶಿ ಹಾಗೂ ನಿರ್ದೇಶಕರು ಮಗದೊಮ್ಮೆ ಪರಿಶೀಲಿಸಿ, ಸಚಿವರಿಗೆ ಕಡತ ರವಾನಿಸಲಿದ್ದಾರೆ. ಆದರೆ, ಪ್ರಸಕ್ತ ಸಾಲಿನಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಸಂಘ–ಸಂಸ್ಥೆಗಳ ಕಾರ್ಯಚಟುವಟಿಕೆಯನ್ನು ಪರಿಶೀಲನೆ ನಡೆಸಿ, ಅವರ ಮೂಲಕವೇ ಅನುದಾನ ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X