Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಸಿಕೆ ಬರುವವರೆಗೆ ‘ನಮ್ಮ ಲಸಿಕೆ ಫೇಸ್...

ಲಸಿಕೆ ಬರುವವರೆಗೆ ‘ನಮ್ಮ ಲಸಿಕೆ ಫೇಸ್ ಮಾಸ್ಕ್’: ಡಾ.ಸುದರ್ಶನ್

ವಾರ್ತಾಭಾರತಿವಾರ್ತಾಭಾರತಿ1 Oct 2020 5:22 PM IST
share

ಬೆಂಗಳೂರು, ಅ.1: ಕೋವಿಡ್-19 ಸೋಂಕಿಗೆ ಲಸಿಕೆ ಬರುವವರೆಗೆ ನಮ್ಮ ಲಸಿಕೆ ಫೇಸ್ ಮಾಸ್ಕ್ ಆಗಿದೆ ಎಂದು ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್ ತಿಳಿಸಿದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬೆಂಗಳೂರಿನ ವಾರ್ತಾ ಶಾಖೆಯ ಪಿಐಬಿ ಆಯೋಜಿಸಿದ್ದ “ಕೊರೋನ ಸೋಂಕು: ಮುನ್ನೆಚ್ಚರಿಕೆಯೆ ಚಿಕಿತ್ಸೆ” ವೆಬಿನಾರ್ ನಲ್ಲಿ ವಿಷಯ ತಜ್ಞರಾಗಿ ಪಾಲ್ಗೊಂಡು ‘ಸಮುದಾಯದಲ್ಲಿ ಸೋಂಕು : ಸಾರ್ವಜನಿಕ ಕ್ರಮಗಳು’ ಬಗ್ಗೆ ಅವರು ಮಾತನಾಡಿದರು.

ನಮ್ಮ ಸುತ್ತಮುತ್ತ ಇರುವ ಪ್ರತಿಯೊಬ್ಬರನ್ನು ಲಕ್ಷಣ ರಹಿತರೆಂದು ಭಾವಿಸಿ ನಮ್ಮ ಎಚ್ಚರಿಕೆಯಲ್ಲಿ ನಾವು ಇರಲೇಬೇಕು. ಸೋಂಕು ಇರುವ ವ್ಯಕ್ತಿಯೊಂದಿಗೆ ಒಂದು ಮೀಟರ್ ಗಿಂತ ಕಡಿಮೆ ಅಂತರ, 20 ನಿಮಿಷಕ್ಕಿಂತ ಹೆಚ್ಚು ಹೊತ್ತು ಹಾಗೂ ಅವರೊಂದಿಗೆ ಮಾತನಾಡುವಾಗ ಮುಖಗವಸು ಹಾಕಿಲ್ಲವೆಂದರೆ ಸೋಂಕು ತಗಲುವ ಸಾಧ್ಯತೆ ಅತಿ ಹೆಚ್ಚು ಎಂದು ಅವರು ಹೇಳಿದರು.

ಹಾಗಾಗಿ ಮೂರು ‘ಸಿ’ ಗಳಾದ ಕ್ರೌಡೆಡ್, ಕ್ಲೋಸಡ್, ಕ್ಲೋಸ್ ಕಾಂಟಾಕ್ಟ್ ಅನ್ನು ಅವಶ್ಯಕವಾಗಿ ತಡೆಯಬೇಕು. ಅಂದರೆ ಅತಿ ಹೆಚ್ಚು ಜನಸಂದಣಿಯಲ್ಲಿ ಇರಬಾರದು, 6 ಗಜ ಸುರಕ್ಷಿತ ಅಂತರದ ಪಾಲನೆ ಹಾಗೂ ಬಸ್ ಮುಂತಾದ ವಾಹನ, ಹೆಚ್ಚು ಜನರಿರುವ ಕೋಣೆ ಮೊದಲಾದವುಗಳಲ್ಲಿ ಸಾಧ್ಯವಾದಷ್ಟೂ ಇರಬೇಡಿ ಎಂದು ಸುದರ್ಶನ್ ತಿಳಿಸಿದರು.

ವೆಬಿನಾರ್ ನಲ್ಲಿ ‘ಸೋಂಕು ತಡೆಯುವ ಬಗೆ ಮತ್ತು ನಿರ್ವಹಣೆ’ ಕುರಿತು ಮಾತನಾಡಿದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಶ್ವಾಸಕೋಶ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಾಧ್ಯಾಪಕ ಡಾ.ಶಶಿಭೂಷಣ್, ಕೊರೋನ ವೈರಾಣು ಸೋಂಕಿಗೆ ಸದ್ಯಕ್ಕೆ ಲಸಿಕೆ ಇಲ್ಲ, ಹಾಗಾಗಿ ಸುರಕ್ಷಿತ ಅಂತರದ ಪಾಲನೆ, ಮಾಸ್ಕ್ ಬಳಸುವಿಕೆ ಮತ್ತು ಸಾನಿಟೈಸರ್ ಅಥವಾ ಸೋಪು ದ್ರಾವಣದಲ್ಲಿ ಆಗಾಗ ಕೈತೊಳೆಯುವುದು ಅತ್ಯಂತ ಅವಶ್ಯಕ ಎಂದರು.

ನಾವು ಕೆಮ್ಮಿದಾಗ, ಸೀನಿದಾಗ ವೈರಾಣು ಗಾಳಿಯಲ್ಲಿ ಸೇರಿ ನೆಲದ ಮೇಲೆ ಬೀಳುವುದು, ನಾವಿರುವ ಸ್ಥಳದಲ್ಲಿ ಪುಸ್ತಕ, ಪೆನ್ನು ಅಥವಾ ಇನ್ನಾವುದೇ ವಸ್ತುವಿನ ಮೇಲೆ ಬೀಳುವ ಸಾಧ್ಯತೆ ಇರುವುದರಿಂದ ಎಲ್ಲೆಂದರಲ್ಲಿ ಮುಟ್ಟಿರುವ ಸಾಧ್ಯತೆ ಕಾರಣ ಆಗಾಗ ಕೈ ತೊಳೆಯುವುದು ಮುಖ್ಯ. ಹಾಗೆಯೇ ಮುಖಗವಸನ್ನು ಸರಿಯಾದ ರೀತಿಯಲ್ಲಿ ತೆಗೆಯುವುದು, ಕನಿಷ್ಠ ಇಪ್ಪತ್ತು ಸೆಕೆಂಡುಗಳ ಕಾಲ ಸೋಪು ನೀರಿನಲ್ಲಿ ಕೈ ತೊಳೆಯುವುದು ಅತಿ ಅವಶ್ಯಕ ಎಂದು ಅವರು ಹೇಳಿದರು.

ಜನ ಇದರ ಬಗ್ಗೆ ಉಡಾಫೆ ಬಿಟ್ಟು ನಿಯಮಗಳ ಪಾಲನೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಅಷ್ಟೇ ಅಲ್ಲ ಎಲ್ಲೆಂದರಲ್ಲಿ ಉಗುಳುವುದು, ಸೀನಿದಾಗ ಟಿಶ್ಯು ಪೇಪರ್ ಬಳಸಿದರೆ ಅದನ್ನು ಮುಚ್ಚಿದ ಕಸದ ಡಬ್ಬದಲ್ಲಿಯೇ ಹಾಕಬೇಕು ಎಂದು ಅವರು ಕಿವಿಮಾತು ಹೇಳಿದರು.

ರಾಜ್ಯ ಸರಕಾರ ಕೈಗೊಡಿರುವ ಐದು ‘ಟಿ’ಗಳ ಅಂದರೆ ಟ್ರೇಸ್(ಸೋಂಕು ಪತ್ತೆ), ಟ್ರಾಕ್(ಸೋಂಕು ಹರಡಿದ್ದು ಹೇಗೆ?), ಟೆಸ್ಟ್(ಸೋಂಕು ಪತ್ತೆಗೆ ಪರೀಕ್ಷೆ), ಟ್ರೀಟ್(ಚಿಕಿತ್ಸೆ) ಮತ್ತು ಟೆಕ್ನಾಲಜಿ(ತಾಂತ್ರಿಕತೆ) ಬಗ್ಗೆ ಅವರು ವಿವರ ನೀಡಿದರು.

‘ಕೊರೋನ ವೈರಾಣು-ಸೋಂಕು ಹರಡುವಿಕೆ’ ಬಗ್ಗೆ ವೈರಾಣು ಸಂಶೋಧನೆ ಮತ್ತು ರೋಗ ನಿರ್ಣಯ ಪ್ರಯೋಗಾಲಯದ ಸಹ ಪ್ರಧಾನ ತನಿಖಾಧಿಕಾರಿ ಡಾ.ಸತ್ಯನಾರಾಯಣ ಮಾತನಾಡಿ, ಕೊರೋನ ವೈರಾಣುವಿನ ರಚನೆ, ಅದರ ಸ್ವರೂಪ, ಹರಡುವ ರೀತಿ, ಸೋಂಕಿನ ಲಕ್ಷಣಗಳು ಬಗ್ಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಕೇಂದ್ರ ವಾರ್ತಾ ಶಾಖೆಯ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X