Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ...

ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ವಿರುದ್ಧದ ಎಲ್ಲ ಪ್ರಕರಣಗಳನ್ನು ಖುಲಾಸೆಗೊಳಿಸಿದ ಕೋರ್ಟ್

ನಕ್ಸಲ್ ಚಟುವಟಿಕೆ ಆರೋಪ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ1 Oct 2020 8:48 PM IST
share
ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ವಿರುದ್ಧದ ಎಲ್ಲ ಪ್ರಕರಣಗಳನ್ನು ಖುಲಾಸೆಗೊಳಿಸಿದ ಕೋರ್ಟ್

ಬೆಂಗಳೂರು/ರಾಯಚೂರು, ಅ. 1: ನಕ್ಸಲ್ ಚಟುವಟಿಕೆ ಆರೋಪದಲ್ಲಿ ಬಂಧಿತರಾಗಿ 70ಕ್ಕೂ ಹೆಚ್ಚು ದಿನಗಳ ಕಾಲ ಕಾರಾಗೃಹದಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಹಾಗೂ ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ವಿರುದ್ಧ ದಾಖಲಾಗಿದ್ದ ಎಲ್ಲ ಪ್ರಕರಣಗಳನ್ನು ರಾಯಚೂರು ಜಿಲ್ಲಾ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ, `ವಿನೋದ್' ಎಂಬ ಹೆಸರಿನಲ್ಲಿ ನಕ್ಸಲ್ ಚಟುವಟಿಕೆಗಳನ್ನು ನಡೆಸಿದ್ದರು ಎಂದು ಆರೋಪಿಸಿ ರಾಯಚೂರು ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಅವರನ್ನು ಬಂಧಿಸಲಾಗಿತ್ತು. ಈ ಎಲ್ಲ ಪ್ರಕರಣಗಳು 25 ವರ್ಷಗಳ ಹಿಂದೆ ನಡೆದಿದ್ದವು. ಅವುಗಳನ್ನು ಆಧರಿಸಿ ನರಸಿಂಹಮೂರ್ತಿ ಅವರನ್ನು ಕಳೆದ ವರ್ಷದ ಅಕ್ಟೋಬರ್ ನಲ್ಲಿ ಬಂಧಿಸಲಾಗಿತ್ತು.

ಕಲಂ 143, 147, 148, 307, 355, 385, 120(ಬಿ) 124(ಎ) ಸೇರಿದಂತೆ ಹಲವು ಸೆಕ್ಷನ್‍ಗಳಡಿ ಪ್ರಕರಣ ದಾಖಲಿಸಿದ್ದು, 25 ವರ್ಷಗಳಿಂದ ಇವರು ತಲೆ ಮರೆಸಿಕೊಂಡಿದ್ದರು ಎಂದು ಆರೋಪಿಸಲಾಗಿತ್ತು. 2019ರ ಅಕ್ಟೋಬರ್ 24ರಂದು ರಾಯಚೂರಿನಲ್ಲಿ ನಡೆದ ಗೌರಿ ಲಂಕೇಶ್ ಬಳಗದ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ನಂತರ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅವರ ಬಿಡುಗಡೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಇದೀಗ ಕೋರ್ಟ್ ವಿಚಾರಣೆಯಲ್ಲಿ ನರಸಿಂಹಮೂರ್ತಿ ಅವರ ವಿರುದ್ಧ ಯಾವುದೇ ಸಾಕ್ಷ್ಯಧಾರ ಇಲ್ಲದ ಕಾರಣ ಅವರನ್ನು `ವಿನೋದ್' ಎಂದು ಅಭಿಪ್ರಾಯಪಡುವುದು ಸರಿಯಲ್ಲ ಎಂದು ಹೇಳಿದೆ. ಅಲ್ಲದೆ, ನರಸಿಂಹಮೂರ್ತಿ ಅವರನ್ನು ದೋಷಮುಕ್ತಗೊಳಿಸಿರುವ ನ್ಯಾಯಾಲಯ ಅವರ ಮೇಲಿದ್ದ ಎಲ್ಲ ಪ್ರಕರಣಗಳನ್ನು ಖುಲಾಸೆಗೊಳಿಸಿದೆ.

ಸತ್ಯಕ್ಕೆ ಸಿಕ್ಕ ಗೆಲುವು: `ಸತ್ಯ ಮತ್ತು ನ್ಯಾಯಕ್ಕೆ ಜಯ ಸಿಗುತ್ತದೆ ಎಂಬುದು ಇಂದು ಬಂದ ನ್ಯಾಯಾಲಯದ ತೀರ್ಪಿನಿಂದ ಸಾಬೀತಾಗಿದೆ. ಸಂದಿಗ್ಧ ಮತ್ತು ಕಗ್ಗತ್ತಲ ಕಾಲದಲ್ಲಿ ಜನಪರ ಹೋರಾಟಗಾರರನ್ನು ಕಪೋಲಕಲ್ಪಿತ ಪ್ರಕರಣಗಳಲ್ಲಿ ಸಿಲುಕಿಸಿದ್ದ ಕುತಂತ್ರವನ್ನು ಕೋರ್ಟ್ ಅದರ ವಾಸ್ತವತೆ ಅರಿತು ನನ್ನನ್ನು ನಿರ್ದೋಷಿ ಎಂದು ಖುಲಾಸೆಗೊಳಿಸಿದೆ. ನ್ಯಾಯಾಲಯಕ್ಕೆ ಕೃತಜ್ಞತೆ ಸಲ್ಲಿಸುವೆ. ಗೌರಿ ಮಿಡಿಯಾ ಟ್ರಸ್ಟ್ ನ ಕಾರ್ಯ ಚಟುವಟಿಕೆಗಳನ್ನು ಮತ್ತು ಶೋಷಿತರ ಪರವಾಗಿ ನನ್ನ ಹೋರಾಟವನ್ನು ದೃಢವಾಗಿ ಮುಂದುವರಿಸುತ್ತೇನೆ' ಎಂದು ದೊಡ್ಡಿಪಾಳ್ಯ ನರಸಿಂಹಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X