Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಎಇ, ಅಮೆರಿಕ ಸಹಿತ 16 ರಾಷ್ಟ್ರಗಳಿಗೆ...

ಯುಎಇ, ಅಮೆರಿಕ ಸಹಿತ 16 ರಾಷ್ಟ್ರಗಳಿಗೆ ವಿಮಾನಯಾನಕ್ಕೆ ಭಾರತೀಯರಿಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ1 Oct 2020 9:33 PM IST
share
ಯುಎಇ, ಅಮೆರಿಕ ಸಹಿತ 16 ರಾಷ್ಟ್ರಗಳಿಗೆ ವಿಮಾನಯಾನಕ್ಕೆ ಭಾರತೀಯರಿಗೆ ಅವಕಾಶ

ಹೊಸದಿಲ್ಲಿ, ಅ.1: ಅನ್‌ಲಾಕ್ 5.0 ಅನ್ನು ಪ್ರಕಟಿಸಿರುವ ಸರಕಾರವು ಅ.31ರವರೆಗೆ ನಿಗದಿತ ಅಂತರ್ ರಾಷ್ಟ್ರೀಯ ವಿಮಾನಯಾನಗಳ ಮೇಲಿನ ನಿಷೇಧವನ್ನು ಮುಂದುವರಿಸಿದೆ. ದೇಶದಲ್ಲಿ ಮಾಮೂಲು ಚಟುವಟಿಕೆಗಳು ಹಂತಹಂತವಾಗಿ ಪುನರಾರಂಭಗೊಂಡಿದ್ದರೂ ನಿಗದಿತ ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಈಗಲೂ ಮುಂದುವರಿದಿದೆ. ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಯಲು ಇತರ ರಾಷ್ಟ್ರಗಳು ವಿಮಾನ ಸಂಚಾರವನ್ನು ನಿಷೇಧಿಸಿರುವ ಕ್ರಮಗಳೂ ಈ ನಿರ್ಬಂಧ ಮುಂದುವರಿಯುವಂತೆ ಮಾಡಿವೆ. ಆದರೆ ಹಲವಾರು ವಿಷಯಗಳು ಅ.1ರಿಂದ ಪರಿಣಾಮಕಾರಿ ಬದಲಾವಣೆಗಳನ್ನು ಕಂಡಿದ್ದು,ಕೆಲವು ದೇಶಗಳಿಗೆ ಭಾರತೀಯರು ಈಗ ವಿಮಾನಪ್ರಯಾಣಗಳನ್ನು ಕೈಗೊಳ್ಳಬಹುದು..

ಭಾರತವು 16 ರಾಷ್ಟ್ರಗಳೊಂದಿಗೆ ಹೊಸ ದ್ವಿಪಕ್ಷೀಯ ಒಪ್ಪಂದಗಳನ್ನು ಮಾಡಿಕೊಂಡಿರುವುದರಿಂದ ಭಾರತೀಯರು ಈಗ ಈ ದೇಶಗಳಿಗೆ ವಿಮಾನಯಾನವನ್ನು ಕೈಗೊಳ್ಳಬಹುದು. ಅಫ್ಘಾನಿಸ್ತಾನ, ಬಹರೈನ್, ಭೂತಾನ್, ಕೆನಡಾ, ಫ್ರಾನ್ಸ್, ಜರ್ಮನಿ, ಇರಾಕ್, ಜಪಾನ್, ಕೆನ್ಯಾ, ಮಾಲ್ದೀವ್ಸ್, ನೈಜೀರಿಯಾ, ಒಮಾನ್, ಖತರ್, ಯುಎಇ, ಬ್ರಿಟನ್ ಮತ್ತು ಅಮೆರಿಕ ಈ ಪಟ್ಟಿಯಲ್ಲಿರುವ ರಾಷ್ಟ್ರಗಳಾಗಿವೆ. ಈ ಒಪ್ಪಂದಗಳು ಸದ್ಯಕ್ಕೆ ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಿರುವ ಏಕೈಕ ಗವಾಕ್ಷಿಗಳಾಗಿವೆ. ಒಪ್ಪಂದಗಳಡಿ ಉಭಯ ದೇಶಗಳು ಪ್ರಯಾಣಿಕರನ್ನು ಸಾಗಿಸಬಹುದು.

ಆದರೆ ವಾರದ ಆರಂಭದಲ್ಲಿ ಜರ್ಮನಿಯೊಂದಿಗೆ ಉಂಟಾಗಿರುವ ತಕರಾರು ಪ್ರಯಾಣಿಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಜರ್ಮನಿಯ ಲುಫ್ತಾನ್ಸಾ ತನ್ನ ಅಕ್ಟೋಬರ್ ಯಾನಗಳ ನಿಗದಿತ ಪಟ್ಟಿಯಲ್ಲಿ ಜರ್ಮನಿಯಿಂದ ಭಾರತಕ್ಕೆ ಹೆಚ್ಚು ವಿಮಾನಯಾನಗಳಿಗೆ ಅವಕಾಶ ನೀಡಿ ತನ್ನ ದೇಶವನ್ನು ಪ್ರವೇಶಿಸುವ ಭಾರತೀಯ ವಿಮಾನಗಳ ಯಾನಗಳ ಸಂಖ್ಯೆಯನ್ನು ನಿರ್ಬಂಧಿಸಿದ್ದು,ಇದನ್ನು ಭಾರತವು ತಿರಸ್ಕರಿಸಿದೆ. ಇದಕ್ಕೆ ಪ್ರತಿಯಾಗಿ ಲುಫ್ತಾನ್ಸಾ ಭಾರತಕ್ಕೆ ತನ್ನ ಎಲ್ಲ ಯಾನಗಳನ್ನು ಅಕ್ಟೋಬರ್‌ವರೆಗೆ ಅಮಾನತುಗೊಳಿಸಿದೆ. ಈ ಸಂಬಂಧ ಮಾತುಕತೆಗಳು ಈಗ ನಡೆಯುತ್ತಿವೆ.

ಇನ್ನೊಂದೆಡೆ ಕೊರೋನ ವೈರಸ್ ಲಾಕ್‌ಡೌನ್‌ನಿಂದಾಗಿ ವಿದೇಶಗಳಲ್ಲಿ ಅತಂತ್ರರಾಗಿರುವ ಭಾರತೀಯರನ್ನು ಸ್ವದೇಶಕ್ಕೆ ಮರಳಿ ಕರೆತರಲು ಮೇ ಮೊದಲ ವಾರದಲ್ಲಿ ಆರಂಭಗೊಂಡಿದ್ದ ವಂದೇಭಾರತ ಅಭಿಯಾನ ಈಗಲೂ ಮುಂದುವರಿದಿದೆ. ವಂದೇ ಭಾರತದಲ್ಲಿ ಈಗ ಹೆಚ್ಚು ಯಾನಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಏರ್‌ಇಂಡಿಯಾ ಎಕ್ಸ್‌ಪ್ರೆಸ್ ಅಕ್ಟೋಬರ್‌ನಲ್ಲಿ ಮಂಗಳೂರಿನಿಂದ ದುಬೈಗೆ ನೇರ ಹಾರಾಟವನ್ನು ಆರಂಭಿಸಲಿದೆ.

ಇದೇ ವೇಳೆ ವಿಮಾನಯಾನ ಸಂಸ್ಥೆಗಳು ಕೋವಿಡ್‌ಗೆ ಮೊದಲಿನ ಲಗೇಜ್ ನಿಯಮಾವಳಿಗಳಿಗೆ ಮರಳಲು ಸರಕಾರವು ಅನುಮತಿಯನ್ನು ನೀಡಿದೆ. ಹೀಗಾಗಿ ಈ ತಿಂಗಳು ಪ್ರಯಾಣಿಕರು ಹೆಚ್ಚು ಲಗೇಜ್ ಒಯ್ಯಲು ಸಾಧ್ಯವಾಗಲಿದೆ. ಏರ್‌ಇಂಡಿಯಾದ ವಿಮಾನಗಳಲ್ಲಿ ಬಿಸಿನೆಸ್ ಕ್ಲಾಸ್ ಪ್ರಯಾಣಿಕರು 35 ಕೆಜಿ ಮತ್ತು ಇಕಾನಮಿ ಕ್ಲಾಸ್ ಪ್ರಯಾಣಿಕರು 25 ಕೆಜಿ ಲಗೇಜ್‌ನ್ನು ತಮ್ಮ ಜೊತೆಗೆ ಸಾಗಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X