Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಗರಿಕ ಸಮಾಜದ ಉಳಿವಿನಲ್ಲಿ ನದಿಗಳ ಪಾತ್ರ...

ನಾಗರಿಕ ಸಮಾಜದ ಉಳಿವಿನಲ್ಲಿ ನದಿಗಳ ಪಾತ್ರ ಮುಖ್ಯ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ2 Oct 2020 5:40 PM IST
share
ನಾಗರಿಕ ಸಮಾಜದ ಉಳಿವಿನಲ್ಲಿ ನದಿಗಳ ಪಾತ್ರ ಮುಖ್ಯ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಅ.2: ನಾಗರಿಕ ಸಮಾಜದ ಉಳಿವಿನಲ್ಲಿ ನದಿಗಳು ಬಹು ದೊಡ್ಡ ಪಾತ್ರ ವಹಿಸುತ್ತವೆ. ಸ್ವರ್ಣಾ ನದಿ ಉಡುಪಿ ಜಿಲ್ಲೆಯ ಜೀವನದಿಯಾಗಿ ಗುರುತಿಸಿಕೊಂಡಿದೆ. ಆದುದರಿಂದ ಅದನ್ನು ಉಳಿಸುವ ಕೆಲಸಕ್ಕೆ ಎಲ್ಲರೂ ಮುಂದಾಗಬೇಕಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪರ್ಯಾವರಣ ಸಂರಕ್ಷಣಾ ಗತಿವಿಧಿ, ಸಂವೇದನಾ ಫೌಂಡೇಶನ್ ಉಡುಪಿ ಮತ್ತು ಸ್ವಚ್ಛ ಭಾರತ್ ಫ್ರೆಂಡ್ಸ್ ಸಹಯೋಗದಲ್ಲಿ ಶುಕ್ರವಾರ ಸ್ವರ್ಣಾ ನದಿ ತೀರದ ಶೀಂಬ್ರ ಶ್ರೀಸಿದ್ಧಿವಿನಾಯಕ ದೇವಸ್ಥಾನದ ಬಳಿ ಆಯೋಜಿಸಲಾಗಿದ್ದ ‘ಸ್ವರ್ಣಾರಾಧನಾ’ ಕಾರ್ಯಕ್ರಮಕ್ಕೆ ಚಾಲೆ ನೀಡಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಸ್ವರ್ಣಾ ನೀರನ್ನು ಅತ್ಯಧಿಕ ಪ್ರಮಾಣದಲ್ಲಿ ಬಳಸಲಾಗುತ್ತದೆ. ಉಡುಪಿ ನಗರ ಸೇರಿದಂತೆ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಇದು ಕುಡಿಯುವ ನೀರಿನ ಮೂಲವಾಗಿದೆ. ಕಲುಷಿತಗೊಂಡಿದ್ದ ಜಲಮೂಲಗಳು ಇತ್ತೀಚೆಗೆ ಬಂದ ನೆರೆಯಿಂದ ಸಂಪೂರ್ಣ ಶುದ್ಧಗೊಂಡಿವೆ.

ಸ್ವಚ್ಛತೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ಈಗ ನಮ್ಮೆಲ್ಲರ ಮೇಲಿದೆ. ನದಿ ತೀರದಲ್ಲಿ ಹೆಚ್ಚೆಚ್ಚು ಗಿಡಮರಗಳನ್ನು ನೆಡುವ ಮೂಲಕ ನದಿಯನ್ನು ಉಳಿಸುವ ಜೊತೆಗೆ ಜೀವವೈವಿಧ್ಯತೆಯನ್ನು ಪೋಷಿಸಬಹುದು ಎಂದರು.

ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಉಡುಪಿಯ ಇಂದ್ರಾಣಿ ನದಿ ಕಲುಷಿತಗೊಂಡಿದೆ. ನಗರದಲ್ಲಿ ಹರಿಯುವ ಇಂದ್ರಾಣಿ ಶುದ್ಧವಾಗಿದ್ದರೆ ಮಾತ್ರ ನಗರದ ಜನರ ಆರೋಗ್ಯ ಚೆನ್ನಾಗಿರುತ್ತದೆ. ಈ ನಿಟ್ಟಿನಲ್ಲಿ ಸುಮಾರು 400 ಕೋಟಿ ರೂ.ವೆಚ್ಚದ ಒಳಚರಂಡಿ ವ್ಯವಸ್ಥೆ ಗಾಗಿ ಡಿಪಿಆರ್‌ನ್ನು ಸಿದ್ಧಪಡಿಸಲಾಗಿದೆ ಎಂದವರು ಹೇಳಿದರು.

ಎಂಐಟಿಯ ಪ್ರಾಧ್ಯಾಪಕ ಡಾ.ನಾರಾಯಣ ಶೆಣೈ ಮಾತನಾಡಿ, ಸ್ವರ್ಣಾ ನದಿ ಪಾತ್ರದ 60 ಕಿ.ಮೀ.ವ್ಯಾಪ್ತಿಯಲ್ಲಿ ಗಿಡಗಳನ್ನು ಬೆಳೆಸುವ ಯೋಜನೆ ಹಮ್ಮಿ ಕೊಳ್ಳಲಾಗಿದೆ. ಈ ನದಿ ಕೊಡಂಗಳ ಗುಡ್ಡದಲ್ಲಿ ಹುಟ್ಟಿ ಕೋಡಿಬೆಂಗ್ರೆ ಹಂಗಾರಕಟ್ಟೆಯಲ್ಲಿ ಸಮುದ್ರ ಸೇರುತ್ತದೆ. ಇದರ ವಿಸ್ತೀರ್ಣ 603 ಚದರ ಕಿ.ಮೀ. ಇದೆ. ವಾರ್ಷಿಕ ಸರಾಸರಿ 3,600 ಮಿ.ಮೀ. ಮಳೆಯಾಗುತ್ತದೆ. ಸ್ವರ್ಣಾವನ್ನು ಉಳಿಸುವ ನಿಟ್ಟಿನಲ್ಲಿ ಸ್ವರ್ಣಾರಾಧನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದು ಎಪ್ರಿಲ್ 13ರವರೆಗೆ ನಿರಂತರವಾಗಿ ನಡೆಯಲಿದೆ ಎಂದರು.

ಸ್ವರ್ಣಾ ನದಿಗೆ ಜಿಲ್ಲಾಧಿಕಾರಿಗಳು ಆರತಿ ಬೆಳಗಿ, ಸನಿಹದಲ್ಲಿ ಸಸಿಯನ್ನು ನೆಟ್ಟರು. ಬಳಿಕ ನದಿ ತೀರದಲ್ಲಿ ವಿವಿಧ ಜಾತಿಯ ಹಣ್ಣುಹಂಪಲು ಹಾಗೂ ಔಷಧೀಯ ಸಸಿಗಳನ್ನು ನೆಡಲಾಯಿತು.

ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನದ ಟ್ರಸ್ಟಿ ರಮೇಶ್ ರಾವ್, ಅಜಿತ್ ಪೈ, ಕೃಷ್ಣಮೂರ್ತಿ ಶಿವತ್ತಾಯ, ಶಶಾಂಕ ಶಿವತ್ತಾಯ ಉಪಸ್ಥಿತರಿದ್ದರು. ಸಂವೇದನಾ ಫೌಂಡೇಶನ್ ಪ್ರಕಾಶ ಮಲ್ಪೆ ಕಾರ್ಯಕ್ರಮ ನಿರ್ವಹಿಸಿದರು, ರಾಘವೇಂದ್ರ ಪ್ರಭು ಸ್ವಾಗತಿಸಿದರೆ, ಗಣೇಶ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X