Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹತ್ರಸ್ ಅತ್ಯಾಚಾರ, ಅಮಾನವೀಯ...

ಹತ್ರಸ್ ಅತ್ಯಾಚಾರ, ಅಮಾನವೀಯ ಅಂತ್ಯಸಂಸ್ಕಾರ ಖಂಡಿಸಿ ಡಿವೈಎಫ್ಐನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Oct 2020 9:49 PM IST
share
ಹತ್ರಸ್ ಅತ್ಯಾಚಾರ, ಅಮಾನವೀಯ ಅಂತ್ಯಸಂಸ್ಕಾರ ಖಂಡಿಸಿ ಡಿವೈಎಫ್ಐನಿಂದ ಪ್ರತಿಭಟನೆ

ದೇರಳಕಟ್ಟೆ : ಉತ್ತರ ಪ್ರದೇಶದ ಹತ್ರಸ್ ಎಂಬಲ್ಲಿ ದಲಿತ ಯುವತಿಯ ಮೇಲೆ ನಡೆದ ಮನುಷ್ಯತ್ವ ತಲೆತಗ್ಗಿಸುವಂತಹ ಅತ್ಯಾಚಾರ , ಕೊಲೆ ಮತ್ತು ಉತ್ತರ ಪ್ರದೇಶದ ಪೊಲೀಸರು ನಡೆಸಿದ ಅಮಾನವೀಯ ಅಂತ್ಯಸಂಸ್ಕಾರದ ಕ್ರಮವನ್ನು ಖಂಡಿಸಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ವತಿಯಿಂದ ಇಂದು ದೇರಳಕಟ್ಟೆ ಜಂಕ್ಷನ್ ನಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆಸಿ ರೋಡ್ ದೇಶದಲ್ಲಿ ನಂಬರ್ ಒನ್ ರಾಜ್ಯ ಎಂದು ಬಿಜೆಪಿ ಬೆಂಬಲಿಗರು ಹೇಳಿಕೊಳ್ಳುತ್ತಿರುವ ಉತ್ತರ ಪ್ರದೇಶದಲ್ಲಿ 2019 ರಲ್ಲಿ 59853 ಅತ್ಯಾಚಾರ ಪ್ರಕರಣಗಳು ಮತ್ತು 7444 ಮಕ್ಕಳ ಮೇಲಿನ ಲೈಂಗಿಕ ಅಪರಾಧ ಸಂಬಂಧ ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಇದು ಒಂದು ರಾಜ್ಯದಲ್ಲಿ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದ್ದು ರಾಷ್ಟ್ರಪತಿಗಳು ಈ ದೇಶದ ಮಹಿಳೆ ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಯೋಗಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಹೇರಲು ಮುಂದಾಗಬೇಕು ಎಂದು ಒತ್ತಾಯಿಸಿದರು. 

ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ಮುಖಂಡ ಅಡ್ವಕೇಟ್ ನಿತಿನ್ ಕುತ್ತಾರ್ ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರು ಇದೇ ರೀತಿ ಭಗತ್ ಸಿಂಗ್, ಸುಖ್ ದೇವ್ ಮತ್ತು ರಾಜ್ ಗುರು ಅವರ ಪ್ರಾರ್ಥಿವ ಶರೀರಗಳನ್ನು ಕುಟುಂಬದವರಿಗೆ ಕೊಡದೇ ಜೈಲಿನ ಹಿಂಬಾಗಿಲಿನಿಂದ ಹೊರತೆಗೆದುಕೊಂಡು ಹೋಗಿ ಹೊಲದಲ್ಲಿ ದಹಿಸಿದ್ದರು. ಇಂದು ಯೋಗಿಯ ಪೊಲೀಸರು ಅದೇ ರೀತಿ ದಲಿತ ಬಾಲಕಿ ಮನೀಷಾ ಅವರ ಪ್ರಾರ್ಥಿವ ಶರೀರವನ್ನು ಕುಟುಂಬದವರಿಗೆ ಕೊಡದೇ ಅಮಾನವೀಯವಾಗಿ ದಹಿಸಿರುವುದು ಬ್ರಿಟೀಷ್ ದಬ್ಬಾಳಿಕೆಯ ಮನಸ್ಥಿತಿ ಇನ್ನೂ ಯೋಗಿ ರಾಜ್ಯದ ಪೊಲೀಸರಲ್ಲಿ ಜೀವಂತವಿರುವುದರ ಸಂಕೇತ ಎಂದರು.

ಪ್ರತಿಭಟನೆಯಲ್ಲಿ ಡಿವೈಎಫ್ಐ ಜಿಲ್ಲಾ ಮುಖಂಡ ರಫೀಕ್ ಹರೇಕಳ, ಕಾರ್ಯದರ್ಶಿ ಸುನಿಲ್ ತೇವುಲ, ಜೀವನ್ ರಾಜ್ ಕುತ್ತಾರ್, ಅಶ್ರಫ್ ಹರೇಕಳ, ರಝಾಕ್ ಮೊಂಟೆಪದವು, ಸಂತೋಷ್ ಶೆಟ್ಟಿ ಪಿಲಾರ್, ಜನವಾದಿ ಮಹಿಳಾ ಸಂಘಟನೆಯ ಪದ್ಮಾವತಿ ಶೆಟ್ಟಿ, ವಿಲಾಸಿನಿ ತೊಕ್ಕೊಟ್ಟು, ದಲಿತ ಹಕ್ಕುಗಳ ಸಮಿತಿಯ ನಾರಾಯಣ ತಲಪಾಡಿ , ಸಿಪಿಐಎಂ ಮುಖಂಡ ಮಹಾಬಲ ದೆಪ್ಪಲಿಮಾರ್, ಕಟ್ಟಡ ಕಾರ್ಮಿಕರ ಸಂಘದ ಜನಾರ್ದನ್ ಕುತ್ತಾರ್ , ರೋಹಿ ಭಟ್ನಗರ, ಜಯಂತ್ ನಾಯ್ಕ್ , ಇಬ್ರಾಹಿಂ ಮದಕ, ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಕಾರ್ಯದರ್ಶಿ ಜಗದೀಶ್ ನಾಯ್ಕ್, ಡಿವೈಎಫ್ಐ ಮುಡಿಪು ಘಟಕದ ಅಧ್ಯಕ್ಷ ರಝಾಕ್ ಮುಡಿಪು, ದೇರಳಕಟ್ಟೆ ಘಟಕದ ಅಧ್ಯಕ್ಷ ನವಾಜ್ ಉರುಮಣೆ, ಕುತ್ತಾರ್ ಘಟಕದ ಸಂಕೇತ್ ಕಂಪ, ಕಾರ್ತಿಕ್, ಸುರೇಶ್ ತಳನೀರು, ಅಕ್ಷಿತ್ ಕುತ್ತಾರ್, ಭರತ್ ಕುತ್ತಾರ್, ಕರುಣಾಕರ ಕಂಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X