Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಝರ್ಬೈಜಾನ್ ಪಡೆಗಳಿಂದ ಸ್ಟೆಪೆನಾಕಾರ್ಟ್...

ಅಝರ್ಬೈಜಾನ್ ಪಡೆಗಳಿಂದ ಸ್ಟೆಪೆನಾಕಾರ್ಟ್ ನಗರದ ಮೇಲೆ ಭೀಕರ ದಾಳಿ: ಭಾರೀ ಸಾವುನೋವು?

ವಾರ್ತಾಭಾರತಿವಾರ್ತಾಭಾರತಿ2 Oct 2020 11:18 PM IST
share
ಅಝರ್ಬೈಜಾನ್ ಪಡೆಗಳಿಂದ ಸ್ಟೆಪೆನಾಕಾರ್ಟ್ ನಗರದ ಮೇಲೆ ಭೀಕರ ದಾಳಿ: ಭಾರೀ ಸಾವುನೋವು?

ಯೆರೆವಾನ್ (ಆರ್ಮೇನಿಯ),ಅ.2: ಆರ್ಮೇನಿಯ ಹಾಗೂ ಅಝರ್‌ಬೈಝನ್ ಸೇನಾಪಡೆಗಳ ನಡುವೆ ನಡೆಯುತ್ತಿರುವ ಕಾಳಗವು ಶುಕ್ರವಾರ 6 ನೇ ದಿನಕ್ಕೆ ಕಾಲಿರಿಸಿದ್ದು, ಅಝರ್‌ಬೈಝಾನಿ ಪಡೆಗಳು ನಾಗೊರ್ನಿ ಕರ್ಬಾಖ್ ಪ್ರಾಂತದ ಮುಖ್ಯ ನಗರವಾದ ಸ್ಟೆಪೆನಾಕಾರ್ಟ್ ನಗರದ ಮೇಲೆ ದಾಳಿ ನಡೆಸಿ, ಹಲವಾರು ಮಂದಿ ನಾಗರಿಕರನ್ನು ಗಾಯಗೊಳಿಸಿವೆ. ನಾಗೊರ್ನಿ ಕರ್ಬಾಖ್, ಆಝರ್‌ಬೈಝಾನ್‌ನಿಂದ ಸಿಡಿದುಹೋದ ಪ್ರಾಂತವಾಗಿದ್ದು, ಅದರ ಮೇಲೆ ಹಿಡಿತ ಸಾಧಿಸಲು ಉಭಯ ದೇಶಗಳು ಕೆಲವು ದಶಕಗಳಿಂದ ಸಂಘರ್ಷ ದಲ್ಲಿ ತೊಡಗಿವೆ. ಆದಾಗ್ಯೂ ಕಳೆದ ರವಿವಾರದಿಂದ ಭುಗಿಲೆದ್ದಿರುವ ಘರ್ಷಣೆಯು ದಶಕಗಳಲ್ಲೇ ಅತ್ಯಂತ ಭೀಕರವಾದುದೆನ್ನಲಾಗಿದೆ.

  ಆಝಾರ್‌ಬೈಝಾನ್ ಪಡೆಗಳ ದಾಳಿಯಲ್ಲಿ ಸ್ಟೆಪೆನಾಕಾರ್ಟ್ ಪಟ್ಟಣದ ಹಲವು ನಾಗರಿಕರು ಗಾಯಗೊಂಡಿದ್ದು, ಮೂಲಸೌಕರ್ಯಗಳಿಗೆ ಹಾನಿಯಾಗಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಆರ್ಟ್ಸ್‌ರನ್ ಹೊವಾಹ್‌ನಿಸ್ಯಾನ್ ಫೇಸ್‌ಬುಕ್‌ನಲ್ಲಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

 ನಗರದಲ್ಲಿ ಶುಕ್ರವಾರ ಭಾರೀ ಸ್ಫೋಟದ ಸದ್ದುಗಳು ಕೇಳಿಬಂದಿದ್ದು ರಕ್ಷಣಾಪಡೆಗಳ ಸೈರನ್‌ಗಳು ಮೊಳಗುತ್ತಿದ್ದುದು ಕೇಳಿಬರುತ್ತಿತ್ತೆಂದು ಸ್ಟೆಪೆನಾಕಾರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಎಫ್‌ಪಿ ಸುದ್ದಿಸಂಸ್ಥೆಯ ಪತ್ರಕರ್ತರು ತಿಳಿಸಿದ್ದಾರೆ.

ಈ ಮಧ್ಯೆ ಅಝರ್‌ಬೈಜಾನಿ ಪಡೆಗಳು ಆರ್ಮೇನಿಯ ಹಾಗೂ ಕರ್ಬಾಖ್ ಪ್ರಾಂತವನ್ನು ಸಂಪರ್ಕಿಸುವ ಸೇತುವೆಯೊಂದನ್ನು ನಾಶಪಡಿಸಿರುವುದಾಗಿ ಸ್ಟೆಪೆನಾಕಾರ್ಟ್‌ನ ಪ್ರತ್ಯೇಕತಾವಾದಿ ಸರಕಾರವು ತಿಳಿಸಿದೆ.

 ಹೊಸದಾಗಿ ಸಂಘರ್ಷ ಭುಗಿಲೆದ್ದಿರುವುದಕ್ಕೆ ಉಭಯ ದೇಶಗಳೂ ಪರಸ್ಪರರನ್ನು ದೂಷಿಸಿದ್ದು, ಯಾವುದೇ ಸಂಭಾವ್ಯ ಶಾಂತಿ ಮಾತುಕತೆಗಳನ್ನು ನಡೆಸಲು ನಿರಾಕರಿಸಿವೆ.

ನಗೋರ್ನಾ ಕರ್ಬಾಖ್ ಪ್ರಾಂತ್ಯದ ಕುರಿತಾಗಿ ದೀರ್ಘಕಾಲದಿಂದ ನೆನೆಗುದಿಯಲ್ಲಿರುವ ವಿವಾದಕ್ಕೆ ಅಂತ್ಯಹಾಡಲು ಉಭಯದೇಶಗಳು ಮಾತುಕತೆಯ ಮೇಜಿಗೆ ಬರಬೇಕೆಂದು ಆರ್ಮೇನಿಯ ಹಾಗೂ ಅಝರ್‌ಬೈಜಾನ್ ದೇಶಗಳಿಗೆ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಜಂಟಿ ಮನವಿ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X