ಉಡುಪಿ ಜಿಲ್ಲಾ ಕಾಂಗ್ರೆಸ್ನಿಂದ ಗಾಂಧೀ, ಶಾಸ್ತ್ರೀ ಜಯಂತಿ

ಉಡುಪಿ, ಅ.3: ಅಹಿಂಸಾ ತತ್ವದ ಮೂಲಕವೇ ದೇಶಕ್ಕೆ ಸ್ವಾತಂತ್ರ ತರುವಲ್ಲಿ ಗಾಂಧೀಜಿ ಯಶಸ್ಸು ಕಂಡಿದ್ದರೆ, ಶಾಸ್ತ್ರೀಜಿ ಶಿಸ್ತು, ಬದ್ದತೆ, ದೂರದರ್ಶಿತ್ವ, ರೈತರ ಮತ್ತು ಯೋಧರ ಬಗ್ಗೆ ಇದ್ದ ಕಾಳಜಿ ಜನರಲ್ಲಿ ಸ್ಪೂರ್ತಿ ತುಂಬುವಲ್ಲಿ ಯಶಸ್ವಿ ಯಾಯಿತು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ಕುಮಾರ್ ಕೊಡವೂರು ಹೇಳಿದ್ದಾರೆ.
ಉಡುಪಿ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಜಂಟಿಯಾಗಿ ಹಮ್ಮಿಕೊಂಡ ಗಾಂಧೀಜಿ ಅವರ 151ನೇ ಜನ್ಮದಿನೋತ್ಸವ ಹಾಗೂ ಲಾಲ್ಬಹದ್ದೂರ್ ಶಾಸ್ತ್ರಿ ಅವರ 116ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡುತಿದ್ದರು.
ಚಿಂತಕ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ಗಾಂಧೀಜಿ ಸ್ವಚ್ಚತೆ ಕುರಿತು ನೀಡಿದ ಸಂದೇಶ ಇಂದು ಒಂದು ದಿನ ಪರಿಸರವನ್ನು ಸ್ವಚ್ಚಗೊಳಿಸು ವುದಕ್ಕೆ ಸೀಮಿತವಾಗಿದೆ. ಕೇವಲ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದರಿಂದ ಈ ದೇಶ ಬದಲಾಗಲ್ಲ, ಅನ್ಯಾಯದ ವಿರುದ್ಧ ಎದ್ದು ನಿಂತರೆ ಮಾತ್ರ ಬದಲಾವಣೆ ಕಾಣಲು ಸಾಧ್ಯ ಎಂದರು.
ಜ್ಯೋತಿ ಹೆಬ್ಬಾರ್ ಸ್ವಾಗತಿಸಿ, ಜನಾರ್ದನ ಭಂಡಾರ್ಕಾರ್ ವಂದಿಸಿದರು. ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ಯಾನಲಿಸ್ಟ್ ಸುಧೀರ್ ಕುಮಾರ್ ಮರೋಳಿ, ವಂ. ವಿಲಿಯಂ ಮಾರ್ಟಿಸ್, ಮುಖಂಡರಾದ ಬಿ.ನರಸಿಂಹ ಮೂರ್ತಿ, ಮೈರ್ಮಾಡಿ ಸುಧಾಕರ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಶಬ್ಬೀರ್ ಅಹ್ಮದ್, ಹರೀಶ್ ಕಿಣಿ, ಹರೀಶ್ ಶೆಟ್ಟಿ ಪಾಂಗಾಳ, ಶಶಿಧರ ಶೆಟ್ಟಿ ಎಲ್ಲೂರು, ಕೇಶವ ಕೋಟ್ಯಾನ್, ಇಸ್ಮಾಯಿಲ್ ಆತ್ರಾಡಿ, ಹಬೀಬ್ ಅಲಿ, ಯತೀಶ್ ಕರ್ಕೇರಾ, ಲೂಯಿಸ್ ಲೋಬೊ, ವೆರೋನಿಕಾ ಕರ್ನೇಲಿಯೊ, ಗೀತಾ ವಾಗ್ಳೆ, ಚಂದ್ರಿಕಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ರೋಶನಿ ಒಲಿವರ್, ಡಾ. ಸುನೀತಾ ಶೆಟ್ಟಿ, ಕುಶಲ್ ಶೆಟ್ಟಿ, ಕೀರ್ತಿ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಪ್ರಶಾಂತ್ ಜತ್ತನ್ನ, ಕೃಷ್ಣಮೂರ್ತಿ ಆಚಾರ್ಯ, ಮಹಾಬಲ ಕುಂದರ್, ಉಪೇಂದ್ರ ಮೆಂಡನ್, ರಮೇಶ್ ಕಾಂಚನ್, ಪ್ರಭಾಕರ ಆಚಾರಿ, ಸೌರಭ್ ಬಲ್ಲಾಳ್ ಉಪಸ್ಥಿತರಿದ್ದರು.







