Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಬರಿ ಮಸೀದಿ ತನ್ನಷ್ಟಕ್ಕೆ ಬಿತ್ತೇ ?:...

ಬಾಬರಿ ಮಸೀದಿ ತನ್ನಷ್ಟಕ್ಕೆ ಬಿತ್ತೇ ?: ಸಾಹಿತಿ ದೇವನೂರ ಮಹಾದೇವ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ3 Oct 2020 8:26 PM IST
share
ಬಾಬರಿ ಮಸೀದಿ ತನ್ನಷ್ಟಕ್ಕೆ ಬಿತ್ತೇ ?: ಸಾಹಿತಿ ದೇವನೂರ ಮಹಾದೇವ ಪ್ರಶ್ನೆ

ಮೈಸೂರು,ಅ.3: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್ಲರೂ ನಿರ್ದೋಷಿಗಳು ಎಂದು ತೀರ್ಪು ನೀಡಲಾಗಿದೆ. ಹಾಗಾದರೆ ಮಸೀದಿ ಧ್ವಂಸವಾಗಿದ್ದು ಹೇಗೆ ? ತನಗೆ ತಾನೇ ಬಿತ್ತೆ? ನ್ಯಾಯ ಎಲ್ಲಿದೆ? ಅಡ್ವಾಣಿ ಕೊನೆಗಾಲದಲ್ಲಿ ಖುಷಿ ಕಳೆದುಕೊಂಡಿದ್ದರು. ಇದರಿಂದ ಅವರ ಮನಸ್ಸಿಗೆ ಕೊಂಚ ಸಮಾಧಾನವಾಗಿದೆಯಷ್ಟೆ ಎಂದು ಸಾಹಿತಿ ದೇವನೂರ ಮಹಾದೇವ ತಿಳಿಸಿದರು.

ಜನಾಂದೋಲನಗಳ ಮಹಾಮೈತ್ರಿ ವತಿಯಿಂದ ಜನತಂತ್ರ ಪ್ರಯೋಗ ಶಾಲಾ, ಜನ ಸಂಗ್ರಾಮ ಪರಿಷತ್, ಸಿಟಿಜನ್ ಫಾರ್ ಡೆಮಾಕ್ರಸಿ ಮತ್ತಿತರ ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ನಡೆದ ಸಮುದಾಯಗಳ ಕಡೆಗೆ ಜನಾಂದೋಲನ ಮಹಾ ಮೈತ್ರಿಯ ಉದ್ಘಾಟನಾ ಸಮಾರಂಭದ ವೆಬಿನಾರ್ ನಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಬಲಿಯಾದ ಯುವತಿಯ ಶವವನ್ನು ಅವರ ತಾಯಿಯ ಮಾತನ್ನೂ ಕೇಳದೆ ಪೊಲೀಸರು ದಹನ ಮಾಡಿ ಮಾನವ ಕುಲಕ್ಕೆ ಅವಮಾನ ಮಾಡಿದ್ದರೆ. ಅತ್ಯಾಚಾರಕ್ಕೆ ಯಾವ ದಾಖಲೆಯೂ ಸಿಗಬಾರದೆಂದು ಎಲ್ಲರವನ್ನೂ ನಾಶ ಮಾಡಿದ್ದಾರೆ. ಆ ಹುಡುಗಿಯೇ 3 ಜನರ ಹೆಸರು ಹೇಳಿದ್ದಳು. ಇದನ್ನೆಲ್ಲಾ ನೋಡಿದರೆ ದುಃಖವಾಗುತ್ತದೆ ಎಂದರು.

ಇದೇ ವೇಳೆ ರಾಜೇಂದ್ರ ಚೆನ್ನಿ ಅವರ 'ಲೋಕ ವಿಮರ್ಶೆ' ಹಾಗೂ ಸಸಿಕಾಂತ್ ಸೆಂಥಿಲ್ ಅವರ 'ನಾನೇಕೆ ಅಧಿಕಾರ ಕಳೆದುಕೊಂಡೆ' ನಿಗೂಢ ಪುಸ್ತಕವನ್ನು ಬಿಡುಗಡೆ ಮಾಡಿದ ಅವರು, ''ಶಶಿಕಾಂತ್ ಸೆಂಥಿಲ್ ಅವರು ಅವರೇಕೆ ರಾಜೀನಾಮೆ ನೀಡಿದರು ಎಂಬುದರ ಬಗ್ಗೆ ನಿಗೂಢ ಎಂಬ ಪುಸ್ತಕ ಬರೆದಿದ್ದಾರೆ. ಇದರಲ್ಲಿ ಇಂದಿನ ವ್ಯವಸ್ಥೆಯನ್ನು ಬಹಳ ಸೂಚ್ಯವಾಗಿ ವಿವರಿಸಲಾಗಿದೆ. ಈ ಎಲ್ಲಾ ವಿಚಾರವನ್ನೂ ಪುಸ್ತಕದಲ್ಲಿ ಅದ್ಭುತವಾಗಿ ನಿರೂಪಿಸಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಆದ ಕಾಯ್ದೆಗಳ ಮಹತ್ವ ನಮಗೆ ಈಗ ತಿಳಿಯುತ್ತಿದೆ. ಕಾಂಗ್ರೆಸ್ ಇದ್ದಾಗ ಅದರ ಬೆಲೆ ನಮಗೆ ತಿಳಿಯಲಿಲ್ಲ. ಈಗಿರುವ ಸರ್ಕಾರ ಎಲ್ಲಾ ಕಾಯ್ದೆಗಳನ್ನೂ ತಿದ್ದುಪಡಿ ಮಾಡುತ್ತಿದೆ. ತಿದ್ದುಪಡಿಗೂ ಮುನ್ನ ಇದ್ದ ಕಾಯ್ದೆಗಳ ಮಹತ್ವ ನಮಗೆ ಈಗ ತಿಳಿಯುತ್ತಿದೆ. ಪ್ರಸಕ್ತ ದೇಶದಲ್ಲಿ ನಡೆಯುತ್ತಿರುವ ಘಟನೆಗಳಿಂದ ಮನಸ್ಸಿಗೆ ಭಾರೀ ಬೇಸರವಾಗುತ್ತಿದೆ. ಆದ್ದರಿಂದಲೇ ಆರ್ಥಿಕತೆ ಹಿಂದೆ ಹೋಗುತ್ತಿದೆ. ಕಂಪೆನಿಗಳ ಕೈಗೆ ಭಾರತ ಮಾರುವಂತಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್, ಚಿಂತಕ ಶಿವಸುಂದರ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಧ್ಯಕ್ಷ ಬಡಗಲಪುರ ನಾಗೇಂದ್ರ, ಅಭಿರುಚಿ ಗಣೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X