ಮೂವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಅ. 4: ಮೂವರು ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಎ.ಎಂ.ಯೋಗೇಶ್-ಹೆಚ್ಚುವರಿ ಪ್ರಾದೇಶಿಕ ಆಯುಕ್ತ(ಭೂ ನಿರ್ವಹಣೆ ಯೋಜನೆ ಮತ್ತು ಇತರೆ) ಮೈಸೂರು ವಿಭಾಗ, ಮೈಸೂರು, ಡಾ.ಬೂದೆಪ್ಪ ಎಚ್.ಬಿ.- ಮುಖ್ಯ ಆಡಳಿತಾಧಿಕಾರಿ ಕೆಆರ್ಐಡಿಎಲ್ ಬೆಂಗಳೂರು, ಶಾಂತ ಎಲ್. ಹುಲ್ಮನಿ-ಕುಲ ಸಚಿವರು ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯ ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
Next Story





