Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ನಾಟಕ ರೂಪದಲ್ಲಿ ಮೊಕಾಶಿ ಕಾದಂಬರಿ

ನಾಟಕ ರೂಪದಲ್ಲಿ ಮೊಕಾಶಿ ಕಾದಂಬರಿ

-ಕಾರುಣ್ಯ-ಕಾರುಣ್ಯ5 Oct 2020 12:10 AM IST
share
ನಾಟಕ ರೂಪದಲ್ಲಿ ಮೊಕಾಶಿ ಕಾದಂಬರಿ

ಡಾ.ಶಂಕರ ಮೊಕಾಶಿ ಪುಣೇಕರ ಅವರು ಕನ್ನಡ ಸಾಹಿತ್ಯದ ಮುಖ್ಯ ಕಾದಂಬರಿಕಾರರು ಮತ್ತು ಬಹುಮುಖಿ ವ್ಯಕ್ತಿತ್ವದ ಸಾಹಿತಿ. ಭಾರತೀಯ ಹಾಗೂ ಪಾಶ್ಚಾತ್ಯ ತತ್ವಶಾಸ್ತ್ರದಲ್ಲಿನ ಬಹುದೊಡ್ಡ ಸ್ಕಾಲರ್. ಅವರ ಮೂರು ಕಾದಂಬರಿಗಳು ಕನ್ನಡ ಸಾಹಿತ್ಯದಲ್ಲಿ ಗಮನಾರ್ಹವಾದುದು. ಇವುಗಳಲ್ಲಿ 'ನಟನಾರಾಯಣಿ' ತನ್ನ ನಾಟಕೀಯ ಗುಣಗಳಿಂದಲೇ ಗಮನ ಸೆಳೆದ ಕಾದಂಬರಿ.

ಇಲ್ಲಿ ಬರುವ ಪಾತ್ರಗಳ ಅಂತರಂಗ ಹಾಗೂ ಬಹಿರಂಗದ ಚಿತ್ರಣ, ಪತ್ತೇದಾರಿ ಕಥನ ತಂತ್ರ ಎಲ್ಲವೂ ಕನ್ನಡಕ್ಕೆ ಹೊಸತು. ಅನಾಥನಾದ ಅಡಿಗೆಯ ಹುಡುಗನೊಬ್ಬ ಆಕಸ್ಮಿಕವಾಗಿ ರಂಗನಟನಾಗಿ ಬೆಳೆದು, ಹಲವು ರೂಪಾಂತರಗಳಿಗೆ ಒಳಗಾಗುವ ಮತ್ತು ಅವನ ಬದುಕಿನಲ್ಲಿ ನಡೆದ ವಿಚಿತ್ರ ಒತ್ತಡಗಳನ್ನು ಕಾದಂಬರಿ ಚಿತ್ರಿಸುತ್ತದೆ. ಈ ಕಾದಂಬರಿಯನ್ನು ಆಧಾರವಾಗಿಟ್ಟುಕೊಂಡು ನಟರಾಜ್ ಹೊನ್ನವಳ್ಳಿ ಮತ್ತು ಡಾ. ಎಚ್. ವಿ. ವೇಣುಗೋಪಾಲ್ 'ಅಭಿನವ ಬೃಹನ್ನಳಾ ವಿಳಾಸ' ನಾಟಕವನ್ನು ರಚಿಸಿದ್ದಾರೆ. ಇಪತ್ತನೆಯ ಶತಮಾನದ ಪೂರ್ವಾರ್ಧದ ಕಾಲಮಾನದಲ್ಲಿ ನಡೆಯುವ ಕಥಾನಕವನ್ನು ಈ ನಾಟಕ ಒಳಗೊಂಡಿದೆ.

ನಾಣ ಎಂಬ ಪಾತ್ರದ ಸುತ್ತ ಹೆಣೆಯಲಾಗಿರುವ ಈ ಕೃತಿ, ನಾಣನ ವೈಯಕ್ತಿಕ ಜೀವನದ ಹಲವು ಮಜಲುಗಳನ್ನು ಚಿತ್ರಿಸುವಂತೆ ಆ ಕಾಲದ ಹಲವು ಮುಖ್ಯ ಸಾಮಾಜಿಕ, ಸಾಂಸ್ಕೃತಿಕ ರಾಜಕೀಯ ವಿದ್ಯಮಾನಗಳನ್ನು ನಮ್ಮ ಮುಂದಿಡುತ್ತದೆ. ಒಟ್ಟು ಹದಿನೇಳು ದೃಶ್ಯಗಳುಳ್ಳ ಈ ನಾಟಕವನ್ನು ನಟರಾಜ್ ಹೊನ್ನವಳ್ಳಿ ಅವರು ನೀನಾಸಂಗಾಗಿ ರಚಿಸಿದ್ದಾರೆ. 'ನಾಟಕದೊಳಗೊಂದು ನಾಟಕ' ಎನ್ನುವ ಸನ್ನಿವೇಶದೊಂದಿಗೆ ಬೆಳೆಯುವ ಈ ಕೃತಿ, ನಟನೊಬ್ಬನ ಒಳ ಹೊರಗಿನ ಸಂಘರ್ಷವನ್ನು ಪರಿಣಾಮಕಾರಿಯಾಗಿ ತೆರೆದಿಡುತ್ತದೆ. ನೀನಾಸಂ ಕಂಪೆನಿ ನಾಟಕವಲ್ಲ. ಅದೊಂದು ಪ್ರಯೋಗ ಶಾಲೆ. ಪ್ರಾಚೀನ ರಂಗಭೂಮಿಯ ಜೊತೆಗೆ ಆಧುನಿಕ ಪರಿಕಲ್ಪನೆಗಳನ್ನು ಸಮರ್ಥವಾಗಿ ಹೊಂದಾಣಿಸುತ್ತಾ, ಈ ಕಂಪೆನಿ ಬೆಳೆದು ಬಂದಿದೆ.

ಹಳೆಯ ನಾಟಕಗಳನ್ನು ಹೊಸ ಪರಿಕರಗಳ ಜೊತೆಗೆ ಪ್ರಯೋಗ ಮಾಡುತ್ತಾ, ಆ ಮೂಲಕ ಹೊಸ ಹೊಳಹುಗಳನ್ನು ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ, ನಟನಾರಾಯಣಿ ಕಾದಂಬರಿಯ ವಸ್ತು ಬಹಳ ಹಿಂದಿನದು. ಅದನ್ನು ಹೊಸ ತಂತ್ರಗಳ ಮೂಲಕ ಹೊಸದಾಗಿ ಹೇಳುವ ಪ್ರಯತ್ನ ಈ ನಾಟಕ ಕೃತಿಯಲ್ಲಿದೆ. ಮಿಸ್ರೆಡ್ ಬುಕ್ ಹೊರತಂದಿರುವ 90 ಪುಟಗಳ ಈ ಕೃತಿಯ ಮುಖಬೆಲೆ 120 ರೂಪಾಯಿ. ಆಸಕ್ತರು ದೂರವಾಣಿ 9606546903 ಅನ್ನು ಸಂಪರ್ಕಿಸಬಹುದು.

share
-ಕಾರುಣ್ಯ
-ಕಾರುಣ್ಯ
Next Story
X