Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತಿನಲ್ಲಿ ಉಪ್ಪಿನ ಉತ್ಪಾದನೆ...

ಗುಜರಾತಿನಲ್ಲಿ ಉಪ್ಪಿನ ಉತ್ಪಾದನೆ ಕುಂಠಿತ: ಮುಂದಿನ ವರ್ಷ ಕೊರತೆಯ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ4 Oct 2020 11:58 PM IST
share
ಗುಜರಾತಿನಲ್ಲಿ ಉಪ್ಪಿನ ಉತ್ಪಾದನೆ ಕುಂಠಿತ: ಮುಂದಿನ ವರ್ಷ ಕೊರತೆಯ ಸಾಧ್ಯತೆ

ಅಹ್ಮದಾಬಾದ್,ಅ.4: ಕಳೆದ ಎರಡು ವರ್ಷಗಳಲ್ಲಿ ಅತಿಯಾಗಿ ಸುರಿದ ಮಳೆ ಮತ್ತು ಕೋವಿಡ್ ಲಾಕ್‌ಡೌನ್‌ನಿಂದಾಗಿ ಗುಜರಾತಿನಲ್ಲಿ ಉಪ್ಪಿನ ಉತ್ಪಾದನೆ ಕುಂಠಿತಗೊಂಡಿದ್ದು,ಮುಂದಿನ ವರ್ಷ ಭಾರತೀಯ ಮಾರುಕಟ್ಟೆಗಳಲ್ಲಿ ಉಪ್ಪಿನ ಕೊರತೆಯುಂಟಾಗುವ ಸಾಧ್ಯತೆಯಿದೆ. ಗುಜರಾತ್ ಭಾರತದಲ್ಲಿ ಅತ್ಯಂತ ಹೆಚ್ಚು ಉಪ್ಪು ಉತ್ಪಾದಿಸುವ ರಾಜ್ಯವಾಗಿದೆ. ವಿಶ್ವದಲ್ಲಿ ಅತ್ಯಂತ ಹೆಚ್ಚು ಉಪ್ಪು ಉತ್ಪಾದಿಸುವ ಸ್ಥಳಗಳಲ್ಲಿ ಗುಜರಾತ್ ಸೇರಿದೆ.

2018-19ನೇ ಸಾಲಿನಲ್ಲಿ ಭಾರತವು 300 ಲಕ್ಷ ಟನ್ ಉಪ್ಪಿನ ಬಂಪರ್ ಉತ್ಪಾದನೆಯನ್ನು ಸಾಧಿಸಿತ್ತು. ಈ ಪೈಕಿ ಗುಜರಾತವೊಂದೇ 260 ಲ.ಟ.ಉಪ್ಪನ್ನು ಉತ್ಪಾದಿಸಿತ್ತು.

ಸಾಮಾನ್ಯವಾಗಿ ಮಳೆಯ ಬಳಿಕ ಸೆಪ್ಟೆಂಬರ್‌ನಲ್ಲಿ ಉಪ್ಪಿನ ಉತ್ಪಾದನೆ ಆರಂಭಗೊಳ್ಳುತ್ತದೆ ಮತ್ತು ಜೂನ್-ಜುಲೈನಲ್ಲಿ ಮುಂದಿನ ಮಳೆಗಾಲದವರೆಗೂ ಮುಂದುವರಿಯುತ್ತದೆ. ಆದರೆ 2019ರಲ್ಲಿ ಭಾರೀ ಮಳೆ ನವಂಬರ್‌ವರೆಗೂ ಸುರಿದಿದ್ದು, ಡಿಸೆಂಬರ್-ಜನವರಿಯಲ್ಲಷ್ಟೇ ಉತ್ಪಾದನೆ ಆರಂಭಗೊಂಡಿತ್ತು. ನಂತರ ಕೋವಿಡ್ ಲಾಕ್‌ಡೌನ್‌ನಿಂದಾಗಿ ಉಪ್ಪಿನ ಉತ್ಪಾದನೆ ನಿಗದಿತ ಸಮಯಕ್ಕಿಂತ ಮೊದಲೇ ಸ್ಥಗಿತಗೊಂಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಉಪ್ಪಿನ ಉತ್ಪಾದನೆಯ ಪ್ರಮಾಣ ಶೇ.35ರಷ್ಟು ಕುಸಿದಿದೆ ಎಂದು ಭಾರತೀಯ ಉಪ್ಪು ತಯಾರಕರ ಸಂಘದ ಅಧ್ಯಕ್ಷ ಬಿ.ಸಿ.ರಾವಲ್ ತಿಳಿಸಿದರು.

ಭಾರತವು ವಿಶ್ವದಲ್ಲಿ ಮೂರನೇ ಬೃಹತ್ ಉಪ್ಪು ತಯಾರಿಕೆ ದೇಶವಾಗಿದೆ. ಗುಜರಾತ್ ಅಲ್ಲದೆ ತಮಿಳುನಾಡು,ರಾಜಸ್ಥಾನ,ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ರಾಜ್ಯಗಳೂ ಹೆಚ್ಚಿನ ಪ್ರಮಾಣದಲ್ಲಿ ಉಪ್ಪನ್ನು ಉತ್ಪಾದಿಸುತ್ತವೆ.

  ಭಾರತದಲ್ಲಿ ಗೃಹಬಳಕೆಗಾಗಿ ವಾರ್ಷಿಕ ಸುಮಾರು 90 ಲಕ್ಷ ಟನ್ ಉಪ್ಪು ಅಗತ್ಯವಾಗಿದ್ದು,ಅಷ್ಟೇ ಪ್ರಮಾಣದ ಉಪ್ಪು ಕೈಗಾರಿಕೆಗಳಲ್ಲಿ ಬಳಕೆಯಾಗುತ್ತಿದೆ. 50 ಲಕ್ಷ ಟನ್ ಉಪ್ಪು ರಫ್ತಾಗುತ್ತಿದ್ದು,ಬೇಡಿಕೆಯನ್ನು ಅವಲಂಬಿಸಿ ಹೆಚ್ಚುವರಿ 30-40 ಟನ್ ಉಪ್ಪು ವಿದೇಶಗಳಿಗೆ ರವಾನೆಯಾಗುತ್ತದೆ ಎಂದು ರಾವಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X