Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ...

ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ: ಲೆಕ್ಕ ಪರಿಶೋಧನಾ ವರದಿಯಲ್ಲಿ 104 ಕೋಟಿ ರೂ. ಮೊತ್ತಕ್ಕೆ ಆಕ್ಷೇಪಣೆ

ವಾರ್ತಾಭಾರತಿವಾರ್ತಾಭಾರತಿ5 Oct 2020 8:01 PM IST
share

ಬೆಂಗಳೂರು, ಅ.5: ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ(ಬಯಪಾ)ದ ಲೆಕ್ಕ ಪರಿಶೋಧನಾ ವರದಿಯಲ್ಲಿ 104.27 ಕೋಟಿ ರೂ. ಮೊತ್ತಕ್ಕೆ ಆಕ್ಷೇಪಣೆ ವ್ಯಕ್ತವಾಗಿದೆ.

ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಆರ್ಥಿಕ ವ್ಯವಹಾರಗಳಲ್ಲಿ ಕೋಟ್ಯಂತರ ರೂ. ಮೊತ್ತದ ಲೋಪದೋಷ, ತಪ್ಪುಗಳಾಗಿರುವ ಬಗ್ಗೆ ಲೆಕ್ಕಪರಿಶೋಧನಾ ವರದಿ ಹೇಳಿದೆ. ಇತ್ತೀಚೆಗೆ ಸಲ್ಲಿಕೆಯಾದ 2018-2019ರ ಲೆಕ್ಕಪರಿಶೋಧನಾ ವರದಿಯ ಪ್ರಕಾರ ಬಯಪಾದಲ್ಲಿ 104.27 ಕೋಟಿ ರೂ. ಮೊತ್ತದ ವಹಿವಾಟಿನಲ್ಲಿ ಅನೇಕ ಲೋಪದೋಷಗಳು ಪತ್ತೆಯಾಗಿವೆ ಎನ್ನಲಾಗಿದೆ.

ಕೆರೆಗಳ ಪುನಶ್ಚೇತನ ಶುಲ್ಕ ವಸೂಲಿ ಮೊತ್ತ, ಬಡಾವಣೆ ನಕ್ಷೆ ಅನುಮೋದನೆ ನೀಡುವಾಗ ಕಡಿಮೆ ಬೆಟರ್‍ಮೆಂಟ್ ಶುಲ್ಕ ವಸೂಲಿ ಹಾಗೂ ಬಯಪಾ ಬಜೆಟ್‍ಗೆ ಅನುಮೋದನೆ ಪಡೆಯದೇ ಇರುವುದು, ಸಿಎ ನಿವೇಶನ ವಿವರಗಳನ್ನು ಹೊಂದಿರುವ ರಿಜಿಸ್ಟರ್ ಬುಕ್ ನಿರ್ವಹಿಸದೇ ಇರುವ ಬಗ್ಗೆ ಲೆಕ್ಕಪರಿಶೋಧನಾ ವರದಿಯಲ್ಲಿ ಆಕ್ಷೇಪಣೆ ಸಲ್ಲಿಸಲಾಗಿದೆ.

ಕೆರೆಗಳ ಪುನಶ್ಚೇತನ ಶುಲ್ಕದಲ್ಲಿನ ಲೋಪ: 2018-19ನೇ ಸಾಲಿನಲ್ಲಿ ಯೋಜನಾ ಪ್ರಾಧಿಕಾರದ ವ್ಯಾಪ್ತಿಗೆ ಅಭಿವೃದ್ಧಿ ನಕ್ಷೆ ಅನುಮೋದನೆ ನೀಡುವಾಗ ಖಾಸಗಿ ವಿನ್ಯಾಸ ಮಾಲಕರಿಂದ ಕೆರೆಗಳ ಪುನಶ್ಚೇತನ ಶುಲ್ಕ ರೂಪದಲ್ಲಿ ಪ್ರತಿ ಎಕರೆಗೆ 1 ಲಕ್ಷ ರೂ.ನಂತೆ ವಸೂಲಿಯಾಗಿದೆ. ಅದರಂತೆ 2019ರವರೆಗೆ ಒಟ್ಟು 8 ಕೆರೆಗಳ ಅಭಿವೃದ್ಧಿಗಾಗಿ 95.42 ಕೋಟಿ ರೂ. ವಸೂಲಿಯಾಗಿದೆ.

2018-19ರಲ್ಲಿ ಸ್ವೀಕರಿಸಿರುವ 2.64 ಕೋಟಿ ರೂ. ಕೆರೆ ಪುನಶ್ಚೇತನ ಶುಲ್ಕ ವಸೂಲಿಯಾಗಿದೆ. ಅದಕ್ಕನುಗುಣವಾಗಿ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿಲ್ಲ. ಈ ಮೊತ್ತಕ್ಕೆ ಯಾವುದೇ ವೆಚ್ಚಗಳನ್ನು ಕೈಗೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಲಾಗಿದೆ.

ಬೆಟರ್‍ಮೆಂಟ್ ಶುಲ್ಕ ವಸೂಲಿಯಲ್ಲಿ ನಷ್ಟ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪರಿವರ್ತಿತ ಭೂಮಿಯಲ್ಲಿ ಅಭಿವೃದ್ಧಿದಾರರಿಂದ ಬಡಾವಣೆ ಅಭಿವೃದ್ಧಿಗೊಳಿಸಲು ತಗಲುವ ವಾಸ್ತವಿಕ ವಿವರಗಳನ್ನು ಪಡೆಯದೆ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಭೂಮಿಯ ಮೌಲ್ಯ ಮತ್ತು ಅಭಿವೃದ್ಧಿಗೆ ತಗಲುವ ವೆಚ್ಚವನ್ನು ಪರಿಗಣಿಸಿ ಆಯಾ ಸಾಲಿನ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿಯನ್ನು ಆಧರಿಸಿ ನಿವೇಶನಗಳ ಮೌಲ್ಯ ನಿರ್ಧರಣೆ ಲೆಕ್ಕಾಚಾರ ಮಾಡಬೇಕು. ಅದರಿಂದ ಭೂಮಿಯ ಮೌಲ್ಯ ಮತ್ತು ಭೂ ಅಭಿವೃದ್ಧಿ ವೆಚ್ಚ ಕಳೆದು ಉಳಿದ ಮೊತ್ತವು ಭೂಮಿಯ ಬೆಟರ್‍ಮೆಂಟ್ ಶುಲ್ಕವಾಗಿರುತ್ತದೆ.

ಹಳೆಯ ದರವನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ. ಭೂಮಿಯ ಮೌಲ್ಯವರ್ಧನೆಗೆ ಅನುಗುಣವಾಗಿ ಆಯಾ ವರ್ಷದ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿಯನ್ನು ಅನುಸರಿಸಿ ಬೆಟರ್‍ಮೆಂಟ್ ಶುಲ್ಕ ದರವನ್ನು ಪರಿಷ್ಕರಣೆ ಮಾಡಿಲ್ಲ. ಜೊತೆಗೆ ಸರ್ಕಾರದ ಗಮನ ಸೆಳೆದು ಪರಿಷ್ಕೃತ ದರ ನಿಗದಿ ಮಾಡಿ ಅನುಮೋದನೆ ಪಡೆಯುವಲ್ಲಿಯೂ ಯಾವುದೇ ಕ್ರಮ ವಹಿಸಿಲ್ಲ ಎಂದು ಆಕ್ಷೇಪಿಸಿದೆ.

2017-18ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ 104.97 ಕೋಟಿ ರೂ. ಮೊತ್ತವನ್ನು ಆಕ್ಷೇಪಣೆಯಲ್ಲಿಡಲಾಗಿರುತ್ತದೆ. ಈ ಬಗ್ಗೆನೂ ಬಯಪಾ ಯಾವುದೇ ಕ್ರಮ ವಹಿಸಿರುವುದು ಕಂಡು ಬಂದಿಲ್ಲ. ಕಡಿಮೆ ಬೆಟರ್‍ಮೆಂಟ್ ಶುಲ್ಕ ವಸೂಲಿಯಿಂದ ಪ್ರಾಧಿಕಾರಕ್ಕೆ ನಷ್ಟ ಉಂಟಾಗಿದ್ದು, ಒಟ್ಟು 102.34 ಕೋಟಿ ರೂ.ಗೆ ಲೆಕ್ಕಪರಿಶೋಧನೆಯಲ್ಲಿ ಆಕ್ಷೇಪಣೆ ವ್ಯಕ್ತಪಡಿಸಲಾಗಿದೆ.

ಆಡಿಟ್ ರಿಪೋರ್ಟ್‍ನಲ್ಲಿನ ಇತರೆ ಆಕ್ಷೇಪಣೆ: 2017-18ರ ಆಡಿಟ್ ರಿಪೋರ್ಟ್‍ಗೆ ಅನುಸರಣಾ ವರದಿ ಸಲ್ಲಿಸದಿರುವುದು, ಬಯಪಾ ಬಜೆಟ್‍ಗೆ ಅನುಮೋದನೆ ಪಡೆಯಲು ವಿಫಲ, ರಸೀದಿ ಪುಸ್ತಕಗಳಲ್ಲಿನ ಲೋಪದೋಷ, ಸಿಎ ನಿವೇಶನಗಳ ವಿವರಗಳನ್ನು ನಿರ್ವಹಿಸದಿರುವುದು ಕಂಡು ಬಂದಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X