Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷಿ ಕೋಟಾದಡಿ ಸೀಟು: ದಾಖಲೆಗಳಿಲ್ಲದ...

ಕೃಷಿ ಕೋಟಾದಡಿ ಸೀಟು: ದಾಖಲೆಗಳಿಲ್ಲದ ಅರ್ಜಿಗಳೇ ಅಧಿಕ !

ವಾರ್ತಾಭಾರತಿವಾರ್ತಾಭಾರತಿ5 Oct 2020 10:25 PM IST
share

ಬೆಂಗಳೂರು, ಅ.5: ಕೃಷಿ ವಿವಿಗಳಲ್ಲಿ ಕೃಷಿ ಕೋಟಾದಡಿಯಲ್ಲಿ ಸೀಟು ಪಡೆಯಲು ಯತ್ನಿಸಿದ ಅಭ್ಯರ್ಥಿಗಳು ಖುಷ್ಕಿ ಭೂಮಿಯಲ್ಲಿಯೂ ಲಕ್ಷಾಂತರ ರೂ.ಗಳ ಲಾಭ ತೋರಿಸಿ ಸಿಕ್ಕಿಬಿದ್ದಿದ್ದು, ಬಹುತೇಕರು ಕೃಷಿ ಆದಾಯ ಪ್ರಮಾಣ ಪತ್ರವನ್ನೇ ಸಲ್ಲಿಸಿಲ್ಲ. ಇನ್ನು ದಾಖಲೆಗಳೇ ಇಲ್ಲದಿರುವ ಅರ್ಜಿಗಳೇ ಅಧಿಕವಾಗಿವೆ.

ಒಬ್ಬ ವ್ಯಕ್ತಿ ಕೃಷಿ ಜತೆ ನೌಕರಿ ಮಾಡಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ತೋರಿಸಿದರೆ ಕೃಷಿಯನ್ನೇ ಪ್ರಧಾನ ವೃತ್ತಿ ಎಂದು ಪರಿಗಣಿಸಲಾಗುತ್ತದೆ. ಅಂಥವರ ಮಕ್ಕಳು ಕೃಷಿಕರ ಸೀಟು ಪಡೆಯಲು ಅರ್ಹತೆ ಪಡೆಯುತ್ತಾರೆ. ಈ ಹಿನ್ನೆಲೆಯಲ್ಲಿ ವೇತನಕ್ಕಿಂತ ಕೃಷಿ ಆದಾಯವನ್ನೇ ಹೆಚ್ಚು ತೋರಿಸುತ್ತಿರುವುದು ಕಂಡುಬಂದಿದೆ. ಪರಿಣಾಮ, ಕೃಷಿಕರ ಕೋಟಾದ ಸೀಟುಗಳು ಶ್ರೀಮಂತರ ಪಾಲಾಗುತ್ತಿದೆ.

ಪ್ರಾಯೋಗಿಕ ಪರೀಕ್ಷೆ ನಡೆಸದೆ ಆಯ್ಕೆ ಪಟ್ಟಿ ಪ್ರಕಟಿಸಿದೆ ಎಂಬ ಆರೋಪ ರೈತರ ಮಕ್ಕಳು ಮತ್ತು ರೈತ ಸಂಘಟನೆಗಳಿಂದ ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರು ಕೃಷಿ ವಿವಿಯು (ಜಿಕೆವಿಕೆ) ತನ್ನ ವೆಬ್‍ಸೈಟ್‍ನಲ್ಲಿ ಅನರ್ಹ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಅನರ್ಹಗೊಳಿಸಿರುವುದೇಕೆ ಎಂಬ ಕಾರಣಸಹಿತ ವಿವರಣೆ ಇದೆ.

ಸಿಇಟಿಯಲ್ಲಿ ಬಿ.ಎಸ್ಸಿ ಕೃಷಿಗೆ 1,27,627 ಮತ್ತು ಪಶುಸಂಗೋಪನೆ ಕೋರ್ಸ್ ಗೆ 1,29,611 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದರು. ಪ್ರತಿ ವರ್ಷ ಈ ಎರಡು ವಿಭಾಗದಲ್ಲಿ 3 ಸಾವಿರ ಸೀಟುಗಳು ಲಭ್ಯವಿರಲಿದ್ದು, ಶೇ.40 ಸೀಟುಗಳು ಕೃಷಿಕರ ಕೋಟಾಕ್ಕೆ ಮೀಸಲಿಡಲಾಗಿರುತ್ತದೆ. ಈ ಪೈಕಿ ಜಿಕೆವಿಕೆ ಆನ್‍ಲೈನ್‍ನಲ್ಲಿ ದಾಖಲೆಗಳನ್ನು ಅಪ್‍ಲೋಡ್ ಮಾಡುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಿ, ಆನಂತರ ಪರಿಶೀಲಿಸಲು ಪ್ರಯತ್ನಿಸಿದಾಗ ವಿದ್ಯಾರ್ಥಿಗಳ ಬಂಡವಾಳ ಬಯಲಾಗಿದೆ. 3,916 ಅಭ್ಯರ್ಥಿಗಳು ಅನರ್ಹಗೊಂಡಿದ್ದಾರೆ.

ಏಕೆ ಪ್ರಾಯೋಗಿಕ ಪರೀಕ್ಷೆ ಇಲ್ಲ?: ಕೃಷಿಕರ ಕೋಟಾದ ಸೀಟಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲು ಆಯೋಜಿಸುವ ಪ್ರಾಯೋಗಿಕ ಪರೀಕ್ಷೆಗೆ ಕೋಚಿಂಗ್ ಕೇಂದ್ರಗಳ ಹಾವಳಿ ಕಾರಣವಾಯಿತೇ ಎಂಬ ಅನುಮಾನ ವ್ಯಕ್ತವಾಗಿದೆ. ಏಕೆಂದರೆ, ಕೆಲ ಕೋಚಿಂಗ್ ಕೇಂದ್ರಗಳು ಕ್ರ್ಯಾಷ್ ಕೋರ್ಸ್ ಆಯೋಜಿಸಿ ಕೃಷಿ ಬಗ್ಗೆ ಜ್ಞಾನ ಇಲ್ಲದವರಿಗೂ ಪ್ರಾಯೋಗಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಜ್ಞಾನ ತುಂಬಿ ಕಳುಹಿಸುವ ಕೆಲಸ ಮಾಡುತ್ತಿವೆ.

15-20 ದಿನದ ಕೋರ್ಸ್‍ಗೆ ವಿದ್ಯಾರ್ಥಿಗಳಿಂದ 18-20 ಸಾವಿರ ರೂ. ಪಡೆದು ರಾಗಿ, ಜೋಳ, ಭತ್ತ, ಕಡಲೆಬೀಜ ಬಿತ್ತನೆ, ಅವುಗಳನ್ನು ಗುರುತಿಸುವ ತರಬೇತಿ ನೀಡುತ್ತವೆ. ಈ ಸೀಸನ್‍ನಲ್ಲಿ ಪ್ರತಿ ತರಬೇತಿ ಕೇಂದ್ರ ಕನಿಷ್ಠ 15 ಲಕ್ಷ ರೂ. ಸಂಪಾದನೆ ಮಾಡಿದೆ. ಆದ್ದರಿಂದ ಪರೀಕ್ಷೆ ರದ್ದು ಮಾಡಲು ತೀರ್ಮಾನಿಸಿರುವ ವಿವಿ, ಈ ವಿಷಯವನ್ನು ಸರಕಾರದ ಮುಂದಿಡಲು ನಿರ್ಧರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏನೆಲ್ಲ ಸಲ್ಲಿಸಬೇಕಿತ್ತು?: ಕೃಷಿಕರ ಕೋಟಾದ ಸೀಟು ಪಡೆಯುವ ವಿದ್ಯಾರ್ಥಿಗಳು ಸಿಇಟಿ ಪ್ರವೇಶಪತ್ರ, ವ್ಯವಸಾಯಗಾರರ ಪ್ರಮಾಣಪತ್ರ-3, ವ್ಯವಸಾಯದ ಆದಾಯ ಪ್ರಮಾಣಪತ್ರ, ವೇತನ ದೃಢೀಕರಣ ಪತ್ರ (ಪಾಲಕರು ಉದ್ಯೋಗಿಯಾಗಿದ್ದರೆ ಮಾತ್ರ), ಖಾಸಗಿ ಆದಾಯ ಪ್ರಮಾಣ ಪತ್ರ (ಜತೆಗೆ), ಅಫಿಡವಿಟ್ ಸಲ್ಲಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X