Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮನ್ವಯ ಕೊರತೆ: ರಾಜ್ಯದಲ್ಲಿ ಶೇ.23...

ಸಮನ್ವಯ ಕೊರತೆ: ರಾಜ್ಯದಲ್ಲಿ ಶೇ.23 ಸ್ಮಾರ್ಟ್ ಸಿಟಿ ಕಾಮಗಾರಿಗಳಷ್ಟೇ ಪೂರ್ಣ

ವಾರ್ತಾಭಾರತಿವಾರ್ತಾಭಾರತಿ5 Oct 2020 10:28 PM IST
share

ಬೆಂಗಳೂರು, ಅ.5: ಸ್ಮಾರ್ಟ್ ಸಿಟಿ ಯೋಜನೆಗೆ ಸಮನ್ವಯ ಕೊರತೆ ಎದುರಾಗಿದ್ದು, ಐದು ವರ್ಷಗಳಲ್ಲಿ ಮುಗಿಯಬೇಕಿದ್ದ 537 ಕಾಮಗಾರಿಗಳ ಪೈಕಿ ಈವರೆಗೆ ಕೇವಲ 124 ಕಾಮಗಾರಿಗಳಷ್ಟೇ ಪೂರ್ಣಗೊಂಡಿವೆ.

ಮೂಲಸೌಕರ್ಯ ಅಭಿವೃದ್ಧಿ, ತಂತ್ರಜ್ಞಾನ ಅಳವಡಿಕೆ, ಪರಿಸರ ಸಂರಕ್ಷಣೆಯಂತಹ ಅಂಶಯಗಳನ್ನಿಟ್ಟುಕೊಂಡು ಕೇಂದ್ರ ಸರಕಾರ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಿದೆ. ರಾಜ್ಯದ 7 ನಗರಗಳು ಈ ಯೋಜನೆಯಡಿ ಆಯ್ಕೆಯಾಗಿದ್ದು, ಅವುಗಳಲ್ಲಿ ಸ್ಮಾರ್ಟ್ ರಸ್ತೆ ನಿರ್ಮಾಣ, ಸಮುದ್ರ ತೀರ, ನದಿ ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ, ಮಾರುಕಟ್ಟೆಗಳನ್ನು ಮೇಲ್ದರ್ಜೆಗೆ ಏರಿಸುವ ಹಲವು ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ.

ಅದರಂತೆ ಏಳು ನಗರಗಳಲ್ಲಿ ಒಟ್ಟು 537 ಕಾಮಗಾರಿಗಳ ಅನುಷ್ಠಾನಕ್ಕೆ ನಿರ್ಧರಿಸಲಾಗಿದ್ದು, ಈವರೆಗೆ ಶೇ.23 ಕಾಮಗಾರಿಗಳಷ್ಟೇ ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳ ಅನುಷ್ಠಾನ, ಅನುಮೋದನೆ ಡಿಪಿಆರ್ ಹಂತದಲ್ಲಿವೆ.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿನ ಕಾಮಗಾರಿಗಳ ಅನುಷ್ಠಾನಕ್ಕೆ ಸ್ಥಳೀಯ ನೀರು ಸರಬರಾಜು, ಒಎಫ್‍ಸಿ ಅಳವಡಿಕೆದಾರರು, ವಿದ್ಯುತ್ ಸರಬರಾಜು ಸಂಸ್ಥೆಗಳು ಸೇರಿ ಇನ್ನಿತರ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳ ನೆರವಿನ ಅಗತ್ಯವಿದೆ. ಅವುಗಳು ಅಳವಡಿಸಿರುವ ಪೈಪ್, ತಂತಿಗಳು ಸೇರಿ ಇನ್ನಿತರ ಯುಟಿಲಿಟಿಗಳ ಸ್ಥಳಾಂತರ ವಿಳಂಬವಾಗುತ್ತಿದೆ. ಈ ವಿಚಾರದಲ್ಲಿ ಗುತ್ತಿಗೆ ಪಡೆದಿರುವ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುವಲ್ಲಿ ಸಮಸ್ಯೆಗಳು ಎದುರಾಗಿದೆ.

7 ನಗರಗಳಲ್ಲಿ ಅನುಷ್ಠಾನ: ರಾಜ್ಯದ 7 ನಗರಗಳಲ್ಲಿ 8, 642.23 ಕೋಟಿ ರೂ.ಮೊತ್ತದ 537 ಯೋಜನೆಗಳ ಜಾರಿಗೆ ನಿರ್ಧರಿಸಲಾಗಿದೆ. ಅದರಲ್ಲಿ ಈಗಾಗಲೇ 310.97 ಕೋಟಿ ರೂ. ಮೊತ್ತದ 124 ಯೋಜನೆಗಳು ಅನುಷ್ಠಾನಗೊಂಡಿವೆ. ಉಳಿದಂತೆ 5,703.32 ಕೋಟಿ ರೂ. ಮೊತ್ತದ 334 ಯೋಜನೆಗಳ ಕಾಮಗಾರಿ ಚಾಲ್ತಿಯಲ್ಲಿದೆ. 1,653 ಕೋಟಿ ರೂ. ಮೊತ್ತದ 51 ಯೋಜನೆ ಟೆಂಡರ್ ಹಂತದಲ್ಲಿದ್ದರೆ, 974.69 ಕೋಟಿ ರೂ. ಮೊತ್ತದ 28 ಯೋಜನೆಗಳಿಗೆ ಡಿಪಿಆರ್ ಸಿದ್ಧಪಡಿಸಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X