Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿನೆಮಾ ಹಾಲ್‌ಗಳ ಪುನರಾರಂಭಕ್ಕೆ ಕೇಂದ್ರ...

ಸಿನೆಮಾ ಹಾಲ್‌ಗಳ ಪುನರಾರಂಭಕ್ಕೆ ಕೇಂದ್ರ ಸರಕಾರದ ಮಾರ್ಗಸೂಚಿ

ವಾರ್ತಾಭಾರತಿವಾರ್ತಾಭಾರತಿ6 Oct 2020 2:56 PM IST
share
ಸಿನೆಮಾ ಹಾಲ್‌ಗಳ ಪುನರಾರಂಭಕ್ಕೆ ಕೇಂದ್ರ ಸರಕಾರದ ಮಾರ್ಗಸೂಚಿ

ಹೊಸದೆಲ್ಲಿ,ಅ.6: ಅಕ್ಟೋಬರ್ 15ರಿಂದ ಪುನರಾರಂಭವಾಗಲಿರುವ ಸಿನಿಮಾ ಹಾಲ್‌ಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳಿಗೆ ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

 ಸಿನಿಮಾ ಹಾಲ್‌ಗಳಿಗೆ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದ್ದು ಸುರಕ್ಷಿತ ಅಂತರಗಳ ನಿಯಮವನ್ನು ಪಾಲಿಸಬೇಕಾಗಿದೆ.

ಕೇಂದ್ರ ಸರಕಾರ ಸೆಪ್ಟೆಂಬರ್ 30ರಂದು 5ನೇ ಹಂತದ ಅನ್‌ಲಾಕ್ ಭಾಗವಾಗಿ ಸಿನೆಮಾ ಹಾಲ್‌ಗಳ ಪುನರಾರಂಭಕ್ಕೆ ಅವಕಾಶ ನೀಡಿತ್ತು. ಕೊರೋನ ಸಂಬಂಧಿತ ಸಾಮಾನ್ಯ ಮಾರ್ಗಸೂಚಿಗಳಾದ ಸುರಕ್ಷಿತ ಅಂತರ ಕಾಪಾಡುವಿಕೆ, ಮಾಸ್ಕ್ ಧಾರಣೆ ಹಾಗೂ ಸ್ಯಾನಿಟೈಸರ್‌ಗಳ ಬಳಕೆಯನ್ನು ಸಿನೆಮಾ ಹಾಲ್‌ಗಳಲ್ಲಿ ಪಾಲಿಸಬೇಕಾಗಿದೆ.

ಸಿನೆಮಾ ಹಾಲ್‌ಗಳಲ್ಲಿ ಸೀಟುಗಳನ್ನು ಆಕ್ರಮಿಸಿಕೊಳ್ಳುವಂತಿಲ್ಲ ಎಂಬ ಸಂದೇಶವನ್ನು ಹಾಕಬೇಕು. ಕಂಟೇನ್ಮಂಟ್ ರೆನ್‌ಗಳಲ್ಲಿ ಚಿತ್ರಗಳನ್ನು ಪ್ರದರ್ಶಿಸುವಂತಿಲ್ಲ. ಇನ್ನಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ರಾಜ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸಾಮಾನ್ಯ ಮಾರ್ಗಸೂಚಿ ಪ್ರಕಾರ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಜನರು ಆರೋಗ್ಯಸೇತು ಆ್ಯಪ್ ಅಳವಡಿಸಿಕೊಂಡು ಬಳಸುವಂತೆ ಸಲಹೆ ನೀಡಲಾಗಿದೆ. ಕೇವಲ ಲಕ್ಷಣ ರಹಿತರಿಗೆ ಮಾತ್ರ ಸಿನೆಮಾ ಮಂದಿರದ ಆವರಣಕ್ಕೆ ಪ್ರವೇಶಿಸಲು ಅವಕಾಶವಿದೆ. ಪ್ರವೇಶದ್ವಾರದಲ್ಲಿ ಸಂದರ್ಶಕರು ಹಾಗೂ ಸಿಬ್ಬಂದಿಯನ್ನು ಥರ್ಮಲ್ ಸ್ಕಾನರ್‌ಗಳಿಂದ ಸ್ಕ್ರೀನಿಂಗ್ ಮಾಡಬೇಕು. ನಿರ್ಗಮನ ದ್ವಾರದಲ್ಲಿ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು. ಕಟ್ಟಡದ ಪ್ರವೇಶ ಹಾಗೂ ನಿರ್ಗಮನ ಸ್ಥಳಗಳಲ್ಲಿ ಸರದಿ ಸಾಲುಗಳ ಚಿಹ್ನೆಗಳನ್ನು ಹಾಕಬೇಕು.

ಆಸನಗಳ ವ್ಯವಸ್ಥೆಗಳು : 1. ಸುರಕ್ಷಿತ ಅಂತರ ನಿಯಮಗಳನುಸಾರ ಆಸನಗಳ ವ್ಯವಸ್ಥೆಗಳನ್ನು ಮಾಡಬೇಕು. ಜನರು ಆಸನಗಳನ್ನು ಆಕ್ರಮಿಸುವುದನ್ನು ತಪ್ಪಿಸಲು ಆಸನ ಆಕ್ರಮಿಸುವಂತಿಲ್ಲ ಎಂಬ ಸಂದೇಶವನ್ನು ಬರೆದಿರಬೇಕು.

ಸುರಕ್ಷಿತ ಅಂತರ ನಿಯಮಗಳು :ಹಾಲ್‌ಗಳು, ಆವರಣಗಳು ಹಾಗೂ ಕಾರು ಪಾರ್ಕಿಂಗ್ ಸ್ಥಳಗಳಲ್ಲಿ ಸುರಕ್ಷಿತ ಅಂತರ ನಿಯಮಗಳನ್ನು ಪಾಲಿಸಬೇಕು. ಟಿಕೆಟ್ ಕೌಂಟರ್‌ಗಳಲ್ಲಿ ಜನದಟ್ಟಣೆ ತಪ್ಪಿಸಲು ಗುರುತುಗಳನ್ನು ಹಾಕಬೇಕು.

ಲಾಬಿಗಳು, ವಾಶ್‌ರೂಮ್‌ಗಳು ಹಾಗೂ ಸಾಮಾನ್ಯ ಪ್ರದೇಶಗಳಲ್ಲಿ ಜನದಟ್ಟಣೆ ಇರದಂತೆ ಖಚಿತಪಡಿಸಿಕೊಳ್ಳಬೇಕು. ಮಧ್ಯಂತರದಲ್ಲಿ ಪ್ರೇಕ್ಷಕರು ಹೊರಹೋಗದಂತೆ ಪ್ರೋತ್ಸಾಹಿಸಬೇಕು.

ಬುಕ್ಕಿಂಗ್ ಹಾಗೂ ಪೇಮೆಂಟ್:ಟಿಕೆಟ್‌ಗಳ ಕಾಯ್ದಿರಿಸಲು ಹಾಗೂ ಆಹಾರ ಮತ್ತು ಪಾನೀಯಗಳ ಖರೀದಿಸಲು ಡಿಜಿಟಲ್ ಮಾದರಿಯ ಪಾವತಿಗೆ ಆದ್ಯತೆ ನೀಡಬೇಕು.

ಸಂಪರ್ಕವನ್ನು ಪತ್ತೆಹಚ್ಚಲು ಪ್ರೇಕ್ಷಕರ ಮೊಬೈಲ್ ಸಂಖ್ಯೆಗಳನ್ನು ತೆಗೆದುಕೊಳ್ಳಬೇಕು.

ಜನದಟ್ಟಣೆ ತಪ್ಪಿಸಲು ದಿನಪೂರ್ತಿ ಸಿನೆಮಾ ಟಿಕೆಟ್ ಕೌಂಟರ್‌ಗಳನ್ನು ತೆರೆದಿಡಬೇಕು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X