Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್ಟಿ ಮೀಸಲಾತಿಗಾಗಿ ಹೋರಾಟ: ಅ.11ಕ್ಕೆ...

ಎಸ್ಟಿ ಮೀಸಲಾತಿಗಾಗಿ ಹೋರಾಟ: ಅ.11ಕ್ಕೆ ಕುರುಬ ಸಮುದಾಯದ ಜನಪ್ರತಿನಿಧಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ6 Oct 2020 6:54 PM IST
share
ಎಸ್ಟಿ ಮೀಸಲಾತಿಗಾಗಿ ಹೋರಾಟ: ಅ.11ಕ್ಕೆ ಕುರುಬ ಸಮುದಾಯದ ಜನಪ್ರತಿನಿಧಿಗಳ ಸಭೆ

ಬೆಂಗಳೂರು, ಅ. 6: ರಾಜ್ಯದಲ್ಲಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸೇರಿಸಬೇಕೆಂಬುದು ನಮ್ಮ ಸಮುದಾಯದ ಬಹಳ ದಿನಗಳ ಬೇಡಿಕೆ. ಆ ಹಿನ್ನೆಲೆಯಲ್ಲಿ ಹೋರಾಟ ರೂಪಿಸಲು ಅ.11ಕ್ಕೆ ಎಲ್ಲ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ಕರೆಯಲಾಗಿದೆ ಎಂದು ಕಾಗಿನೆಲೆ ಮಠದ ನಿರಂಜನಾನಂದ ಪುರಿ ಸ್ವಾಮೀಜಿ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಎಸ್ಟಿ ಹೋರಾಟ ಸಮಿತಿಯಿಂದ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದರಿಂದ ಈಗಾಗಲೇ ಎಸ್ಟಿ ಪಟ್ಟಿಯಲ್ಲಿರುವ ಯಾವುದೇ ಸಮುದಾಯಕ್ಕೆ ನಮ್ಮಿಂದ ತೊಂದರೆ ಆಗುವುದಿಲ್ಲ. ಎಲ್ಲ ಹಿಂದುಳಿದ ಸಮುದಾಯಗಳನ್ನು ಮೇಲಕ್ಕೆತ್ತಬೇಕು ಎಂಬುದೇ ನಮ್ಮ ಉದ್ದೇಶ ಎಂದು ಸ್ಪಷ್ಟನೆ ನೀಡಿದರು.

ರಾಜ್ಯದಲ್ಲಿರುವ ಎಸ್ಟಿ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಇದೆ. ಇದಕ್ಕೆ ನಮ್ಮ ಸಂಪೂರ್ಣ ಸಹಮತವಿದೆ ಎಂದ ಅವರು, ವಾಲ್ಮೀಕಿ ಸಮುದಾಯದ ಮೀಸಲಾತಿಗೆ ನಾವು ಯಾವುದೇ ತೊಂದರೆಯನ್ನುಂಟು ಮಾಡುವುದಿಲ್ಲ. ಹಿಂದುಳಿದ ವರ್ಗದ ನಮ್ಮ ಮೀಸಲಾತಿಯೊಂದಿಗೆ ನಾವು ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸೇರ್ಪಡೆಯಾಗಲು ಹೋರಾಟ ನಡೆಸಲಿದ್ದೇವೆ ಎಂದರು.

ಕುರುಬ ಸಮುದಾಯ ಬುಡಕಟ್ಟು ಜನಾಂಗವಾಗಿ ಗುರುತಿಸಿಕೊಂಡಿದೆ. ಬೀದರ್, ಕಲಬುರಗಿ, ಯಾದಗಿರಿ ಮೂರು ಜಿಲ್ಲೆಗಳಿಂದ ಈ ಸಮುದಾಯವನ್ನು ಎಸ್ಟಿಗೆ ಸೇರಿಸುವ ಪ್ರಸ್ತಾಪ ಕೇಂದ್ರ ಸರಕಾರಕ್ಕೆ ಹೋಗಿದೆ. ಕೊಡಗಿನ ಪ್ರಸ್ತಾಪ ವಾಪಸ್ ಬಂದಿದೆ. ಈ ಎರಡೂ ಪ್ರಸ್ತಾವನೆಗಳೊಂದಿಗೆ ಇಡೀ ಕರ್ನಾಟಕದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಹೋರಾಟ ನಡೆಸಲು `ಕುರುಬ ಎಸ್ಟಿ ಹೋರಾಟ ಸಮಿತಿ' ರಚನೆ ಮಾಡಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿದ್ದ ಮಾಜಿ ಸಚಿವ ಎಚ್.ಎಂ.ರೇವಣ್ಣ ಮಾತನಾಡಿ, ಮೊದಲಿನಿಂದಲೂ ಎಸ್ಟಿಗೆ ಸೇರಿಸುವಂತೆ ಹೋರಾಟ ನಡೆಯುತ್ತಿದೆ. ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಅದು ಆಗಿರಲಿಲ್ಲ. ಇದೀಗ ಸಚಿವ ಕೆ.ಎಸ್.ಈಶ್ವರಪ್ಪ ಇದರ ನೇತೃತ್ವ ವಹಿಸಿದ್ದಾರೆ. ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರಕಾರವಿದೆ. ನಮ್ಮ ಹಕ್ಕು ಪಡೆಯಲು ವೇದಿಕೆ ಮಾಡಿಕೊಂಡಿದ್ದೇವೆ ಎಂದರು.

ಈಶ್ವರಾನಂದಪುರಿ ಸ್ವಾಮಿ, ಸಿದ್ದರಾಮಾನಂದಪುರಿ ಸ್ವಾಮಿ, ಶಿವಾನಂದಪುರಿ ಸ್ವಾಮಿ, ಅಮರೇಶ್ವಸರ ಸ್ವಾಮಿ, ಮುಖಂಡರಾದ ಮುಕುಡಪ್ಪ, ರಘುನಾಥ ರಾವ್ ಮಲ್ಕಾಪುರೆ, ವಿರೂಪಾಕ್ಷಪ್ಪ, ವೆಂಕಟೇಶ್ ಮೂರ್ತಿ, ರಾಜೇಂದ್ರ ಸಣ್ಣಕ್ಕಿ, ಶಾಂತಮ್ಮ, ಪುಟ್ಟಸ್ವಾಮಿ ಸೇರಿದಂತೆ ಇನ್ನಿತರರು ಸುದ್ದಿಗೋಷ್ಟಿಯಲ್ಲಿ ಹಾಜರಿದ್ದರು.

ಅ.11ರಂದು ಸಭೆ

ರಾಜ್ಯ ಹಾಗೂ ಕೇಂದ್ರ ಸರಕಾರ ಕೇಳುವ ಅಂಶಗಳನ್ನು ಕೊಡುತ್ತೇವೆ. ಇನ್ನು ಕೆಲ ಹಿಂದುಳಿದ ವರ್ಗಗಳು ಬಂದು ನಮಗೂ ಬೆಂಬಲ ನೀಡಿ ಎನ್ನುತ್ತಿವೆ. ಕೋಲಿ, ಸವಿತಾ ಸಮಾಜ, ಕಾಡುಗೊಲ್ಲ ಸಮುದಾಯ ಸಹಕಾರ ಕೇಳುತ್ತಿವೆ. ಅವರಿಗೂ ನಾವು ಬೆಂಬಲ ನೀಡಲಿದ್ದೇವೆ. ಅ.11ರ ಬೆಳಗ್ಗೆ 11 ಗಂಟೆಗೆ ಅರಮನೆ ಮೈದಾನದಲ್ಲಿ ಸಮುದಾಯದ ಜನಪ್ರತಿನಿಧಿಗಳ ಸಭೆ ನಡೆಸಿ ಮುಂದಿನ ತೀರ್ಮಾನ ಮಾಡಲಾಗುವುದು.

-ಕೆ.ಎಸ್.ಈಶ್ವರಪ್ಪ, ಗ್ರಾಮೀಣಾಭೀವೃದ್ಧಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X