ರತ್ನಕಾಳೇಗೌಡ ಹಾಗೂ ರಾಜಶೇಖರ ಮುಲಾಲಿ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ
ಬೆಂಗಳೂರು, ಅ.6: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಲೇಖಕಿ ಎ.ಜಿ.ರತ್ನಕಾಳೇಗೌಡಗೆ ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಮಾಹಿತಿ ಹಕ್ಕು ತಜ್ಞ ಜೆ.ಎಂ.ರಾಜಶೇಖರ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪಂಕಜಶ್ರೀ ಸಾಹಿತ್ಯದತ್ತಿ ಪ್ರಶಸ್ತಿಯು 10 ಸಾವಿರ ರೂ.ನಗದು ಹಾಗೂ ಮಾಹಿತಿ ಹಕ್ಕು ತಜ್ಞ ಜೆ.ಎಂ.ರಾಜಶೇಖರ ದತ್ತಿ ಪ್ರಶಸ್ತಿಯು 5 ಸಾವಿರ ರೂ.ನಗದು, ಪುರಸ್ಕಾರವನ್ನು ಒಳಗೊಂಡಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story