Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರೀಯ ನವೋದ್ಯಮ ಸ್ಪರ್ಧೆ-2020...

ರಾಷ್ಟ್ರೀಯ ನವೋದ್ಯಮ ಸ್ಪರ್ಧೆ-2020 ಪ್ರಶಸ್ತಿ: 15 ಪ್ರಶಸ್ತಿಗಳೊಂದಿಗೆ ಕರ್ನಾಟಕಕ್ಕೆ ಅಗ್ರಸ್ಥಾನ

ಡಿಸಿಎಂ ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ7 Oct 2020 6:35 PM IST
share
ರಾಷ್ಟ್ರೀಯ ನವೋದ್ಯಮ ಸ್ಪರ್ಧೆ-2020 ಪ್ರಶಸ್ತಿ: 15 ಪ್ರಶಸ್ತಿಗಳೊಂದಿಗೆ ಕರ್ನಾಟಕಕ್ಕೆ ಅಗ್ರಸ್ಥಾನ

ಬೆಂಗಳೂರು, ಅ.7: ರಾಷ್ಟ್ರೀಯ ನವೋದ್ಯಮ ಪ್ರಶಸ್ತಿಗಳಿಗಾಗಿ ‘ನವೋದ್ಯಮ ಭಾರತ’ ವತಿಯಿಂದ ಇತ್ತೀಚೆಗೆ ನಡೆಸಲಾಗಿದ್ದ ಸ್ಪರ್ಧೆಗೆ ರಾಜ್ಯದಿಂದ ಅತ್ಯಧಿಕ ಅರ್ಜಿಗಳು ಸಲ್ಲಿಕೆಯಾಗುವ ಜೊತೆಗೆ ಇಲ್ಲಿನ ಹಲವಾರು ನವೋದ್ಯಮಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿವೆ ಎಂದು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳಿಗೆ ಪಾತ್ರವಾಗಿರುವ 36 ನವೋದ್ಯಮಗಳ ಪೈಕಿ ನಮ್ಮ ರಾಜ್ಯದ 14 ನವೋದ್ಯಮಗಳು ಹಾಗೂ 1 ವೇಗವರ್ಧಕ (ಆಕ್ಸಲರೇಟರ್) ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿವೆ. ಈ ಸ್ಪರ್ಧೆಗೆ ದೇಶದಾದ್ಯಂತ ಇರುವ ನವೋದ್ಯಮಗಳಿಂದ ಸಲ್ಲಿಕೆಯಾಗಿದ್ದ 1641 ಅರ್ಜಿಗಳ ಪೈಕಿ 418 ಅರ್ಜಿಗಳು ನಮ್ಮ ರಾಜ್ಯದಿಂದ ಸಲ್ಲಿಕೆಯಾಗಿದ್ದವು. ಇದು ಒಟ್ಟಾರೆ ಸಲ್ಲಿಕೆಯಾದ ಅರ್ಜಿಗಳ ಪೈಕಿ ಶೇ.26ರಷ್ಟಿರುವುದು ಗಮನಾರ್ಹ ಅಂಶ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ.

ಕೃಷಿ, ಶಿಕ್ಷಣ, ಇಂಧನ, ಉದ್ದಿಮೆ ತಾಂತ್ರಿಕತೆಗಳು, ಆರೋಗ್ಯ, ಉದ್ಯಮ 4.0, ಬಾಹ್ಯಾಕಾಶ, ಪ್ರವಾಸೋದ್ಯಮ, ನಗರ ಸೇವೆಗಳು ಸೇರಿದಂತೆ ಇತ್ಯಾದಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈಗ ರಾಷ್ಟ್ರೀಯ ಮಟ್ಟದಲ್ಲಿ ವಿಜೇತಗೊಂಡಿರುವ 14 ಉದ್ಯಮಗಳ ಪೈಕಿ 11 ನವೋದ್ಯಮಗಳು ಕರ್ನಾಟಕ ನವೋದ್ಯಮ ಕೋಶದಿಂದ ನಡೆಸಲಾಗಿದ್ದ ಎಲಿವೇಟ್/ಐಡಿಯಾ 2ಪಿಒಸಿ ಅನುದಾನ ಕಾರ್ಯಕ್ರಮಗಳಲ್ಲಿ ಗಮನ ಸೆಳೆದು ಜಯಗಳಿಸಿದ್ದವು ಎಂದು ಅವರು ವಿವರಿಸಿದ್ದಾರೆ.

ರಾಷ್ಟ್ರೀಯ ಆಹ್ವಾನಕ್ಕೆ ಸ್ಪಂದಿಸಿ ರಾಜ್ಯ ಸರಕಾರದ ಪರಿಪೋಷಕಗಳು (ಇನ್ ಕ್ಯುಬೇಟರ್ಸ್), ಹೊಸ ತಲೆಮಾರಿನ ಪರಿಪೋಷಣಾ ಜಾಲ (ನೈನ್) ಸಂಸ್ಥೆಗಳು, ಉತ್ಕೃಷ್ಠತಾ ಕೇಂದ್ರಗಳು ಮತ್ತು ತಾಂತ್ರಿಕ ವ್ಯಾಪಾರೋದ್ಯಮ ಪರಿಪೋಷಕಗಳ (ಟಿಬಿಐ) ಮೂಲಕ ವೆಬಿನಾರ್ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು ರಾಜ್ಯದಿಂದ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ಸಲ್ಲಿಸಲು ಕಾರಣವಾಯಿತು ಎಂದು ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ವಿಜೇತಗೊಂಡ ರಾಜ್ಯದ ನವೋದ್ಯಮಗಳ ಪಟ್ಟಿ 

ಕೃಷಿ ವಿಭಾಗ: ಸಲ್ಲಿಕೆಯಾಗಿದ್ದ ಅರ್ಜಿಗಳು 36 (ಅತ್ಯಧಿಕ)-ಮಂಡ್ಯ ಆಗ್ರ್ಯಾನಿಕ್ಸ್ (ಕಾರ್ಯ ಕ್ಷೇತ್ರ- ಕೃಷಿ ವಲಯದಲ್ಲಿ ರೈತರ ತೊಡಗಿಸಿಕೊಳ್ಳುವಿಕೆ ಹಾಗೂ ಶಿಕ್ಷಣ). ಶಿಕ್ಷಣ ವಿಭಾಗ: ಸ್ಪರ್ಧಿಸಿದ್ದ ಆಪ್‍ಗಳು 40 (ಅತ್ಯಧಿಕ)- ರೋಬೋಟ್  ಗುರು, ಇಂಧನ ವಿಭಾಗ: ಸ್ಪರ್ಧಿಸಿದ್ದ ಆಪ್‍ಗಳು 26 (ಅತ್ಯಧಿಕ)-ಎಸ್ಯಾ ಸಾಫ್ಟ್.

ಆರೋಗ್ಯ ವಿಭಾಗ: ಸ್ಪರ್ಧಿಸಿದ್ದ ಆಪ್‍ಗಳು 69 (ಅತ್ಯಧಿಕ)-ನಿರಮಯಿ ಹೆಲ್ತ್ ಅನಲಿಟಿಕ್ಸ್, ಬೊನಯು (ಜುಬ್‍ಇನ್) ಲೈಫ್ ಸೈನ್ಸಸ್, ಇನೌಮೇಷನ್ ಮೆಡಿಕಲ್ ಡಿವೈಸಸ್. ಉದ್ಯಮ 4.0 ವಿಭಾಗ: ಸ್ಪರ್ಧಿಸಿದ್ದ ಆಪ್‍ಗಳು 56 (ಅತ್ಯಧಿಕ)-ಅಪ್ ಟೈಮ್ ಎಐ, ಮಿನಿಯನ್  ಲ್ಯಾಬ್ಸ್, ಸ್ಕೇಪಿಕ್ ಇನ್ನೊವೇಷನ್ಸ್ ಪ್ರೈವೇಟ್ ಲಿಮಿಟೆಡ್, ಜಿಂಜರ್ ಮೈಂಡ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್.

ಬಾಹ್ಯಾಕಾಶ ವಿಭಾಗ: ಸ್ಪರ್ಧಿಸಿದ್ದ ಆಪ್‍ಗಳು 7 (ಅತ್ಯಧಿಕ)-ಬೆಲ್ಲಾಟ್ರಿಕ್ಸ್ ಏರೋಸ್ಪೇಸ್, ಪ್ರವಾಸೋದ್ಯಮ ವಿಭಾಗ: ಸ್ಪರ್ಧಿಸಿದ್ದ ಆಪ್‍ಗಳು 16 (ಅತ್ಯಧಿಕ)-ಹೈವೇ ಡಿಲೈಟ್, ನಗರ ಸೇವೆಗಳು ವಿಭಾಗ: ಸ್ಪರ್ಧಿಸಿದ್ದ ಆಪ್‍ಗಳು 34 (ಅತ್ಯಧಿಕ)-ವಿಕೆಡ್ರೈಡ್ ಅಡ್ವೆಂಚರ್ಸ್ ಪ್ರೈವೇಟ್  ಲಿಮಿಟೆಡ್.

ವಿಶೇಷ ವಿಭಾಗ(ಮಹಿಳಾ ನೇತೃತ್ವದ ನವೋದ್ಯಮಗಳು): ಅಜೂಕ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್, ಅತ್ಯುತ್ತಮ ವೇಗವರ್ಧಕ: ಬ್ರಿಗೇಡ್ ರೀಪ್ ಆಕ್ಸಲರೇಟರ್ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X