Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫೇಸ್‍ಬುಕ್ ಬಳಕೆದಾರರೇ ಎಚ್ಚರ:...

ಫೇಸ್‍ಬುಕ್ ಬಳಕೆದಾರರೇ ಎಚ್ಚರ: ಹೆಚ್ಚುತ್ತಿವೆ ನಕಲಿ ಖಾತೆಯ ಮೂಲಕ ಹಣ ದೋಚುವ ಜಾಲ

ಮುಸ್ತಫ ಸಿದ್ದಾಪುರಮುಸ್ತಫ ಸಿದ್ದಾಪುರ7 Oct 2020 6:56 PM IST
share
ಫೇಸ್‍ಬುಕ್ ಬಳಕೆದಾರರೇ ಎಚ್ಚರ: ಹೆಚ್ಚುತ್ತಿವೆ ನಕಲಿ ಖಾತೆಯ ಮೂಲಕ ಹಣ ದೋಚುವ ಜಾಲ

ಸಿದ್ದಾಪುರ (ಕೊಡಗು), ಅ.7: ಪೊಲೀಸ್ ಅಧಿಕಾರಿಗಳ, ವಕೀಲರ ಹಾಗೂ ರಾಜಕಾರಣಿಗಳ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು, ಹಣ ಕೀಳುವ ವಂಚನೆ ಸಕ್ರಿಯವಾಗಿದ್ದು, ತಂತ್ರಜ್ಞಾನ ಮುಂದುವರಿದಂತೆ ಪ್ರತೀ ವ್ಯವಹಾರಗಳು ಆನ್‍ಲೈನ್‍ನಲ್ಲೆ ನಡೆಯುತ್ತಿರುವುದರಿಂದ, ವಂಚನೆಗಳು ಕೂಡಾ ಆನ್‍ಲೈನ್ ಮೂಲಕವೇ ಸುಲಭವಾಗಿ ನಡೆಯುತ್ತಿವೆ. 

ಇತ್ತೀಚಿಗೆ ಸಿದ್ದಾಪುರದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ವಕೀಲರೊಬ್ಬರ ಫೋಟೋ ಬಳಸಿ ಫೇಸ್‍ಬುಕ್‍ನಲ್ಲಿ ನಕಲಿ ಖಾತೆ ತೆರೆದ ದುಷ್ಕರ್ಮಿಯೋರ್ವ, ವಕೀಲರು, ಪತ್ರಕರ್ತರು ಸೇರಿದಂತೆ ಕೆಲವು ಫೇಸ್‍ಬುಕ್ ಗೆಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದಾನೆ. ನಕಲಿ ಖಾತೆಯ ಸತ್ಯಾಸತ್ಯತೆ ಅರಿಯದ ಕೆಲವರು ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಫೇಸ್‍ಬುಕ್ ಸ್ನೇಹಿತರಾಗಿದ್ದಾರೆ. ಇದಾದ ತಕ್ಷಣ ಮೆಸ್ಸೆಂಜರ್ ಮೂಲಕ ತುರ್ತು ಆರ್ಥಿಕ ಸಹಾಯ ಕೋರಿದ ದುಷ್ಕರ್ಮಿ ಗೂಗಲ್ ಪೇ ಸಂಖ್ಯೆಯನ್ನು ಕಳಿಸಿದ್ದಾನೆ. ಇದರಿಂದ ಅನುಮಾನಗೊಂಡ ವಕೀಲರ ಸ್ನೇಹಿತರು ಅವರಿಗೆ ನೇರವಾಗಿ ಕರೆ ಮಾಡಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. 

ಕೂಡಲೇ ಎಚ್ಚೆತ್ತುಕೊಂಡ ಅವರು ತಮ್ಮ ಫೇಸ್‍ಬುಕ್ ವಾಲ್‍ನಲ್ಲಿ ಈ ಬಗ್ಗೆ ಬರೆದುಕೊಂಡು, ವಂಚನೆಗೆ ಒಳಗಾಗಬೇಡಿ ಎಂದು ವಿನಂತಿಸಿದ್ದಾರೆ. ಅಲ್ಲದೇ ತನ್ನ ಹೆಸರಿನ ನಕಲಿ ಖಾತೆಯನ್ನು ಡಿಲೀಟ್ ಮಾಡಿಸಿದ್ದಾರೆ.

ಕಳೆದ ತಿಂಗಳು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಫೇಸ್‍ಬುಕ್ ಮೂಲಕ ವಂಚನೆ ಮಾಡಲು ಯತ್ನಿಸಿದ ಘಟನೆ ಕೊಡಗು ಜಿಲ್ಲೆಯಲ್ಲಿ ವರದಿಯಾಗಿತ್ತು. ಆದರೆ ಈ ಬಗ್ಗೆ ಯಾವುದೇ ದೂರುಗಳು ಇದುವರೆಗೆ ದಾಖಲಾಗಿಲ್ಲ ಎಂದು ಸೈಬರ್ ಕ್ರೈಮ್ ಇನ್ಸ್‍ಪೆಕ್ಟರ್ ಹರೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಆನ್‍ಲೈನ್ ವ್ಯವಹಾರ ಹೆಚ್ಚಿದಂತೆ ಸುರಕ್ಷತೆ ಮತ್ತು ಜಾಗೃತಿ ಇಲ್ಲದೇ ಹಣ ಕಳೆದುಕೊಳ್ಳುವವರು ಹೆಚ್ಚುತ್ತಿದ್ದಾರೆ. ಯಾವುದೋ ಉದ್ದೇಶಕ್ಕೆ ಇಟ್ಟುಕೊಂಡಿರುವ ಹಣ ಕಳೆದುಕೊಂಡು ಅಮಾಯಕ ಜನರು ಕಂಗಾಲಾಗುತ್ತಿದ್ದಾರೆ. ಕಳೆದುಕೊಂಡ ಹಣ ವಾಪಸ್ ಸಿಗುವ ಸಾಧ್ಯತೆಗಳು ತೀರಾ ಕಡಿಮೆ. ರಾಜ್ಯ ಅಪರಾಧ ದಾಖಲಾತಿ ಘಟಕದ (ಎಸ್‍ಸಿಆರ್‍ಬಿ) ಮಾಹಿತಿ ಪ್ರಕಾರ ಶೇ. 0.62ರಷ್ಟು ಸೈಬರ್ ಪ್ರಕರಣಗಳನ್ನು ಮಾತ್ರ ಪತ್ತೆ ಮಾಡಲು ಸಾಧ್ಯವಾಗಿವೆ. ಸಾಮಾಜಿಕ ಜಾಲತಾಣಗಳ ದುರುಪಯೋಗಕ್ಕೆ ಸಂಬಂಧಿಸಿ ಕಳೆದ ವರ್ಷ ರಾಜ್ಯದಲ್ಲಿ ಸುಮಾರು 12,014 ಪ್ರಕರಣಗಳು ದಾಖಲಾಗಿದ್ದು, ಕೇವಲ 193 ಪ್ರಕರಣಗಳು ಮಾತ್ರ ಪತ್ತೆಯಾಗಿವೆ ಎಂದು ವರದಿಯಾಗಿದೆ.

ಯಾರಾದರೂ ಮೊಬೈಲ್ ಕರೆ ಮಾಡಿ, ನಿಮ್ಮ ಬ್ಯಾಂಕ್ ವಿವರ ಕೇಳಿದರೆ ನೀಡಬೇಡಿ. ಇನ್ನು ಡೆಬಿಟ್ ಅಥವಾ ಕ್ರೆಡಿಟ್ ಬಗ್ಗೆ ಕೇಳಿದರೆ ಬ್ಯಾಂಕ್‍ಗೆ ಬಂದು ನೀಡುತ್ತೇವೆ ಎಂದು ಹೇಳಿ. ಕಾರು ಸೇರಿದಂತೆ ಇತರೆ ವಾಹನಗಳು ಮಾರಾಟಕ್ಕಿವೆ ಎಂದು ಆನ್‍ಲೈನ್‍ನಲ್ಲಿ ಫೋಟೊ ಹಾಕಿ ವಂಚಿಸುವವರೂ ಇದ್ದಾರೆ. ಈ ಬಗ್ಗೆಯೂ ನಿಗಾ ಇರಲಿ. ದಿನ ಕಳೆದಂತೆ ವಂಚಕರು ತಂತ್ರಜ್ಞಾನಕ್ಕೆ ಹೊಂದಿಕೊಂಡು ವಂಚಿಸುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕಾಗಿದೆ. ಸೈಬರ್ ವಂಚಕರ ಬಗ್ಗೆ ಸಾಮಾಜಿಕ ಜಾಲತಾಣದ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಜಾಲತಾಣದ ಮೂಲಕ ಯಾವುದೇ ವ್ಯವಹಾರಗಳನ್ನು ನಡೆಸುವ ಸಂದರ್ಭದಲ್ಲಿ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳದೆ ಹಣ ವರ್ಗಾಯಿಸಿದಲ್ಲಿ ವಂಚನೆಗೆ ಒಳಗಾಗಬೇಕಾಗುತ್ತದೆ. ಆದ್ದರಿಂದ ಸಾಮಾಜಿಕ ಜಾಲತಾಣವನ್ನು ಬಳಸುವ ಪ್ರತಿಯೊಬ್ಬರೂ ಅತ್ಯಂತ ಜಾಗರೂಕತೆಯಿಂದ ಇರುವಂತೆ ಕೊಡಗು ಎಸ್.ಪಿ ಕ್ಷಮಾ ಮಿಶ್ರ ಕೋರಿದ್ದಾರೆ.

share
ಮುಸ್ತಫ ಸಿದ್ದಾಪುರ
ಮುಸ್ತಫ ಸಿದ್ದಾಪುರ
Next Story
X