Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಪ್ರಾಕೃತಿಕ ವಿಕೋಪ ಪರಿಹಾರಕ್ಕೆ...

​ಪ್ರಾಕೃತಿಕ ವಿಕೋಪ ಪರಿಹಾರಕ್ಕೆ ದಾಖಲೆಗಳು ಅಗತ್ಯ: ಮೋಹನ್‌ರಾಜ್

ಉಡುಪಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ7 Oct 2020 7:20 PM IST
share

ಉಡುಪಿ, ಅ.7: ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಪರಿಹಾರ ಕಾರ್ಯ ವನ್ನು ಚುರುಕುಗೊಳಿಸಲಾಗಿದ್ದು, ಪರಿಹಾರ ಪಡೆಯಲು ಸಂತ್ರಸ್ತರು ಅಗತ್ಯ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಾರಿ ಮೋಹನ್‌ರಾಜ್ ತಿಳಿಸಿದ್ದಾರೆ.

ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್ ಅಧ್ಯಕ್ಷತೆ ಯಲ್ಲಿ ಬುಧವಾರ ತಾಪಂ ಸಭಾಂಗಣದಲ್ಲಿ ನಡೆದ ತಾಪಂ ಸಾಮಾನ್ಯ ಸಭೆ ಯಲ್ಲಿ ಅವರು ಮಾತನಾಡುತಿದ್ದರು.

ಪ್ರವಾಹ ಪೀಡಿತ ಪ್ರದೇಶಗಳಿಗೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ, ಕೆಲವು ಮನೆಗಳಲ್ಲಿ ಹಾನಿ ಕಂಡುಬರುತ್ತಿದೆ. ಇಂತಹ ಮನೆಗಳಿಗೆ ಹೇಗೆ ಪರಿಹಾರ ನೀಡಲಾಗುತ್ತದೆ ಎಂದು ಸದಸ್ಯರು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೋಹನ್‌ರಾಜ್, ಸಂತ್ರಸ್ತರು ಹಾನಿಗೆ ಸಂಬಂಧಿಸಿದ ಪೋಟೋಗಳನ್ನು ತಹಶೀಲ್ದಾರ್‌ಗೆ ಸಲ್ಲಿಸಬೇಕು. ಆ ಬಳಿಕ ಅವರು ಅದನ್ನು ಪರಿಶೀಲಿಸಿ ಪರಿಹಾರ ಮೊತ್ತವನ್ನು ನಿರ್ಧರಿಸಲಿದ್ದಾರೆ ಎಂದರು.

ಪ್ರವಾಹದಿಂದ ತಾಲೂಕಿನ ಕೆಲವೆಡೆ ಪಂಪ್‌ಸೆಟ್‌ಗಳು ಸಹಿತ ಇತರ ಸೊತ್ತು ಗಳಿಗೆ ಹಾನಿಯಾಗಿದ್ದು, ಅಂತಹ ಸಂತ್ರಸ್ತರಿಗೆ 10 ಸಾವಿರ ರೂ. ಪರಿಹಾರ ನೀಡಲು ಅವಕಾಶ ಇದೆ. ಸರಕಾರ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದ ಕೂಡಲೇ ಸಂತ್ರಸ್ತರಿಗೆ ಪರಿಹಾರ ವಿತರಣೆ ಕಾರ್ಯ ನಡೆಸಲಾಗುವುದು ಎಂದು ಕಂದಾಯ ಅಧಿಕಾರಿಗಳು ಸಭೆಗೆ ತಿಳಿಸಿದರು.

ತ್ಯಾಜ್ಯ ಘಟಕಕ್ಕೆ ಮೀಸಲು: ಕೆಳಾರ್ಕಳಬೆಟ್ಟುವಿನಲ್ಲಿ ಹಿಂದೂ ರುದ್ರ ಭೂಮಿ, ಸರಕಾರಿ ಶಾಲೆ ಮತ್ತು ಅಂಗನವಾಡಿ ಭವನಕ್ಕೆ ಜಾಗ ಮೀಸಲಿರಿ ಸಿರುವುದರ ಪ್ರಗತಿಯ ಬಗ್ಗೆ ಸದಸ್ಯ ಧನಂಜಯ ಕುಂದರ್ ಸಭೆಯಲ್ಲಿ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕೆಳಾರ್ಕಳಬೆಟ್ಟು ಗ್ರಾಮ ದಲ್ಲಿ 20 ಸೆಂಟ್ಸ್ ಜಮೀನನ್ನು ಎಸ್‌ಎಲ್‌ಆರ್‌ಎಂ ಘಟಕಕ್ಕೆ ಕಾಯ್ದಿರಿಸಲು ಕುಂದಾಪುರದ ಸಹಾಯಕ ಕಮೀಷನರ್‌ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಕಲ್ಯಾಣಪುರ ಗ್ರಾಪಂ ವ್ಯಾಪ್ತಿಯ ನಿಡಂಬಳ್ಳಿಯಲ್ಲಿ ನರೇಗಾದಡಿ ನಡೆಸಿದ ಅಂಗನವಾಡಿಗೆ ಸಂಬಂಧಿಸಿದ ಕಾಮಗಾರಿಯ ಕೂಲಿಯನ್ನು ಫಲಾನುಭವಿ ಗಳಿಗೆ ಪಾವತಿಸಲು ವಿಳಂಬ ಮಾಡಲಾಗುತ್ತಿದೆ ಎಂದು ಧನಂಜಯ್ ಕುಂದರ್ ಆರೋಪಿಸಿದರು. ನರೇಗಾದಡಿ ಕಾಮಗಾರಿ ನಡೆಸಿದ ಪ್ರಕಾರ ಕೂಲಿ ಗಾರರ ಖಾತೆಗೆ ಕೂಲಿ ಪಾವತಿಸಲಾಗಿದ್ದು, ಇದರಲ್ಲಿ ಯಾವುದೇ ವಿಳಂಬ ಮಾಡಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದರು.

ಸದಸ್ಯ ರಾಜೇಂದ್ರ ಪಿ. ಮಾತನಾಡಿ, ಅಂಬಲಪಾಡಿ ಗ್ರಾಪಂ ವ್ಯಾಪ್ತಿಯ ಪಂದುಬೆಟ್ಟುವಿನಲ್ಲಿ ಅಪಾಯಕಾರಿ ಮರ ತೆರವಿನ ಬಗ್ಗೆ ಅರಣ್ಯ ಇಲಾಖೆ ಹಾಗೂ ಕಲ್ಕುಡ ಪರಿಸರದ 20 ಮನೆಗಳಿಗೆ ಹಳೆ ವಿದ್ಯುತ್ ತಂತಿಗಳು ಜೋತು ಬಿದ್ದು ಮತ್ತು ಸಿಂಗಲ್ ಫೇಸ್‌ನಿಂದ ವಿದ್ಯುತ್ ಸಂಪರ್ಕ ಹೊಂದಿರುವುದರಿಂದ ಲೋ ವೋಲ್ಟೇಜ್ ಸಮಸ್ಯೆ ಎುರಿಸುತ್ತಿದ್ದಾರೆ ಎಂದು ದೂರಿದರು.

ಸಭೆಯಲ್ಲಿ ತಾಪಂ ಉಪಾಧ್ಯಕ್ಷ ಶರತ್ ಬೈಲಕೆರೆ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಿಲ್ಪಾ ರವೀಂದ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X