Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : ಕೊರೋನಕ್ಕೆ ಇಂದು ಇಬ್ಬರು ಬಲಿ,...

ಉಡುಪಿ : ಕೊರೋನಕ್ಕೆ ಇಂದು ಇಬ್ಬರು ಬಲಿ, ಮೃತರ ಸಂಖ್ಯೆ 162ಕ್ಕೆ ಏರಿಕೆ

207 ಮಂದಿಗೆ ಕೊರೋನ ಸೋಂಕು

ವಾರ್ತಾಭಾರತಿವಾರ್ತಾಭಾರತಿ7 Oct 2020 9:17 PM IST
share
ಉಡುಪಿ : ಕೊರೋನಕ್ಕೆ ಇಂದು ಇಬ್ಬರು ಬಲಿ, ಮೃತರ ಸಂಖ್ಯೆ 162ಕ್ಕೆ ಏರಿಕೆ

ಉಡುಪಿ, ಅ. 7: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 207 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಇಂದು ರಾತ್ರಿ ಪ್ರಕಟಿಸಿದ ಕೋವಿಡ್- 19 ರಾಜ್ಯ ಬುಲೆಟಿನ್‌ನಲ್ಲಿ ತಿಳಿಸಿದೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಕೊರೋನಕ್ಕೆ ಪಾಸಿಟಿವ್ ಆದವರ ಸಂಖ್ಯೆ 18,569ಕ್ಕೇರಿದೆ.

ಇಂದು ಪಾಸಿಟಿವ್ ಬಂದವರಲ್ಲಿ 10 ಮಂದಿ 10 ವರ್ಷದೊಳಗಿನ ಬಾಲಕರು ಸೇರಿದಂತೆ 114 ಮಂದಿ ಪುರುಷರು ಹಾಗೂ ಎಂಟು ಮಂದಿ ಬಾಲಕಿಯರು ಸೇರಿದಂತೆ 93 ಮಂದಿ ಮಹಿಳೆಯರು ಸೇರಿದ್ದಾರೆ. 60 ವರ್ಷ ಮೇಲಿನ 34 (23+11) ಮಂದಿ ಹಿರಿಯ ನಾಗರಿಕರು ಇವರಲ್ಲಿ ಸೇರಿದ್ದಾರೆ. ಉಡುಪಿ ತಾಲೂಕಿನ 103, ಕುಂದಾಪುರ ತಾಲೂಕಿನ 49 ಹಾಗೂ ಕಾರ್ಕಳ ತಾಲೂಕಿನ 55 ಮಂದಿ ಬುಧವಾರ ಪಾಸಿಟಿವ್ ಬಂದಿದ್ದಾರೆ.

ಅಲ್ಲದೇ ದಿನದಲ್ಲಿ 185 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಹೀಗೆ ಮನೆಗೆ ತೆರಳಿದವರ ಒಟ್ಟು ಸಂಖ್ಯೆ 16,313ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 2095 ಸಕ್ರೀಯ ಕೋವಿಡ್ ಪ್ರಕರಣಗಳಿವೆ.

ಬುಧವಾರ ಜಿಲ್ಲೆಯಲ್ಲಿ ಇಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಒಟ್ಟು ಸಂಖ್ಯೆ 162ಕ್ಕೇರಿದೆ. 56 ವರ್ಷದ ಪುರುಷ ಸೆ. 22ರಂದು ಮೃತಪಟ್ಟರೆ, 64 ವರ್ಷ ಪ್ರಾಯದ ಮಹಿಳೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಏರಿಕೆ-ಇಳಿಕೆ

ಜಿಲ್ಲೆಯಲ್ಲಿ ಕೋವಿಡ್-19ರಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣದಲ್ಲಿ ಇನ್ನಷ್ಟು ಏರಿಕೆ ಕಂಡುಬಂದಿದ್ದರೆ, ಮೃತರ ಪ್ರಮಾಣ ಇಳಿಮುಖದತ್ತ ಸಾಗುತ್ತಿದೆ ಎಂಬುದು ಇಂದಿನವರೆಗಿನ ಅಂಕಿಅಂಶಗಳ ಪರಿಶೀಲನೆಯಿಂದ ತಿಳಿದುಬರುತ್ತದೆ.

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 18569 ಪಾಸಿಟಿವ್ ಕೇಸುಗಳಿದ್ದು, ಇವುಗಳಲ್ಲಿ ಇಂದು ಸಂಜೆಯವರೆಗೆ ಒಟ್ಟು 16313 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಇದು ಒಟ್ಟಾರೆ ಕೇಸಿನ ಶೇ.87.9 ಆಗಿದೆ. ಸುಮಾರು ಒಂದು ತಿಂಗಳ ಹಿಂದೆ ಈ ಪ್ರಮಾಣ ಶೇ.86.74 ಆಗಿತ್ತು.

ಅದೇ ರೀತಿ ಕೋವಿಡ್‌ನಿಂದ ಸತ್ತವರ ಸಂಖ್ಯೆ ಇಂದು ಸಂಜೆಯವರೆಗೆ ಅಧಿಕೃತವಾಗಿ 162 ಆಗಿದೆ. ಇದು ಒಟ್ಟು ಕೇಸಿನ ಶೇ.0.87 ಆಗಿದೆ. ಒಂದು ತಿಂಗಳ ಹಿಂದೆ ಇದು ಶೇ.0.93 ಆಗಿತ್ತು. ಜಿಲ್ಲೆಯಲ್ಲಿಂದು 2095 ಸಕ್ರಿಯ ಪ್ರಕರಣಗಳಿದ್ದು, ಇದು ಒಟ್ಟು ಕೇಸಿನ ಶೇ.11.28 ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X