Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುವರ್ಣ ತ್ರಿಭುಜ ಬೋಟು ನಾಪತ್ತೆ ಪ್ರಕರಣ;...

ಸುವರ್ಣ ತ್ರಿಭುಜ ಬೋಟು ನಾಪತ್ತೆ ಪ್ರಕರಣ; ಕೇಂದ್ರ, ರಾಜ್ಯ ಸರಕಾರಗಳಿಂದ ಮೀನುಗಾರರಿಗೆ ಅನ್ಯಾಯ: ಗಣಪತಿ ಮಾಂಗ್ರೆ

ವಾರ್ತಾಭಾರತಿವಾರ್ತಾಭಾರತಿ7 Oct 2020 10:42 PM IST
share
ಸುವರ್ಣ ತ್ರಿಭುಜ ಬೋಟು ನಾಪತ್ತೆ ಪ್ರಕರಣ; ಕೇಂದ್ರ, ರಾಜ್ಯ ಸರಕಾರಗಳಿಂದ ಮೀನುಗಾರರಿಗೆ ಅನ್ಯಾಯ: ಗಣಪತಿ ಮಾಂಗ್ರೆ

ಉಡುಪಿ, ಅ.7: 2018ರ ಡಿ.15ರಂದು ಮಲ್ಪೆ ಮತ್ತು ಉತ್ತರ ಕನ್ನಡದ ಒಟ್ಟು ಏಳು ಮಂದಿ ಮೀನುಗಾರರೊಂದಿಗೆ ನಾಪತ್ತೆಯಾದ ಮಲ್ಪೆಯ ‘ಸುವರ್ಣ ತ್ರಿಭುಜ’ ಬೋಟು ಅವಘಡದಲ್ಲಿ ಆಗಿನ ಕೇಂದ್ರ ಹಾಗೂ ರಾಜ್ಯ ಸರಕಾರಗಳೆರಡೂ ರಾಜ್ಯದ ಮೀನುಗಾರರಿಗೆ ಅನ್ಯಾಯ ಎಸಗಿವೆ ಎಂದು ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರ್ಕೆಟಿಂಗ್ ಫೆಡರೇಷನ್‌ನ ಅಧ್ಯಕ್ಷ ಗಣಪತಿ ಮಾಂಗ್ರೆ ಆರೋಪಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ವರ್ಷ ಎಂಟು ತಿಂಗಳ ಹಿಂದೆ ಇಡೀ ದೇಶದಲ್ಲಿ ಆತಂಕ ಸೃಷ್ಟಿಸಿದ್ದ ಮಲ್ಪೆಯ ಸುವರ್ಣ ತ್ರಿಭುಜ ಪ್ರಕರಣದಲ್ಲಿ ನಾಪತ್ತೆಯಾದ ಕರಾವಳಿ ಜಿಲ್ಲೆಗಳ ಏಳು ಮಂದಿ ಬಡ ಮೀನುಗಾರರಿಗೆ ನ್ಯಾಯ ದೊರಕಿದೆಯೇ ಎಂದು ಅವರನ್ನು ಪ್ರಶ್ನಿಸಿದಾಗ ಮೇಲಿನಂತೆ ಉತ್ತರಿಸಿದರು.

ಏಳು ಮಂದಿ ಮೀನುಗಾರರೊಂದಿಗೆ ಡಿ.13ರಂದು ಆಳಸಮುದ್ರ ಮೀನುಗಾರಿಕೆಗೆ ತೆರಳಿ ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯ ತೀರದಲ್ಲಿ ಡಿ.15ರ ಮಧ್ಯರಾತ್ರಿ ನಂತರ ಹಠಾತ್ತನೆ ಹೊರಗಿನ ಎಲ್ಲಾ ಸಂಪರ್ಕ ಕಡಿದು ಕೊಂಡ ಸುವರ್ಣ ತ್ರಿಭುಜ ಬೋಟಿನ ಅವಘಡದಲ್ಲಿ ನೌಕಾಪಡೆ ಯನ್ನು ರಕ್ಷಿಸುವ ಉದ್ದೇಶದಿಂದ ಪ್ರಕರಣದ ಸತ್ಯವನ್ನು ಮುಚ್ಚಿಡಲಾಗಿದೆ ಎಂದ ಅವರು, ನೌಕಾ ಪಡೆಯ ಕೆಲವು ಅಧಿಕಾರಿಗಳು ಸತ್ಯ ಹೇಳಲು ಕೊನೆಯ ಕ್ಷಣದಲ್ಲಿ ಹಿಂಜರಿದರು ಎಂದರು.

ಬೋಟು ಅವಘಡಕ್ಕೆ ಯಾರು ಕಾರಣ ಹಾಗೂ ಮೀನುಗಾರರ ನಾಪತ್ತೆ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೆಂಬುದು ಎಲ್ಲರಿಗೂ ಗೊತ್ತಿದೆ. ಈ ಅವಘಡ ಮಾಡಿರುವುದನ್ನು ಒಪ್ಪಿಕೊಂಡರೆ, ಏಳು ಮಂದಿ ಮೀನುಗಾರರ ರಕ್ಷಣೆ ಮಾಡಲು ಸಾಧ್ಯವಾಗದೇ ಇರುವವರು ದೇಶದ ರಕ್ಷಣೆ ಹೇಗೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಅಂಜಿ ಸತ್ಯ ಒಪ್ಪಿಕೊಳ್ಳಲು ಹಿಂಜರಿಯುತಿದ್ದಾರೆ ಎಂದ ಗಣಪತಿ ಮಾಂಗ್ರೆ, ನೌಕಾ ಪಡೆ, ತಾವು ಅವಘಡಕ್ಕೆ ಕಾರಣ ಎಂಬುದನ್ನು ಬಹಿರಂಗ ವಾಗಿ ಒಪ್ಪಿಕೊಂಡಿದೆಯೇ ಎಂದು ಪ್ರಶ್ನಿಸಿದಾಗ ತಿಳಿಸಿದರು.

ಪಶ್ಚಿಮ ಕರಾವಳಿಯಲ್ಲಿ ನೌಕಾಪಡೆಯ ಹಡಗೊಂದು ಡಿ.15ರ ರಾತ್ರಿ ಡಿಕ್ಕಿ ಹೊಡೆದು ಸುವರ್ಣ ತ್ರಿಭುಜ ಮುಳುಗಿದ್ದು, ಅವಘಡಕ್ಕೆ ಕಾರಣವಾದ ನೌಕಾಪಡೆಯ ಹಡಗನ್ನು ರಿಪೇರಿ ಮಾಡಿರುವುದು ತಮಗೆ ಖಚಿತವಾಗಿ ಗೊತ್ತಿದೆ ಎಂದು ಅವರು ಹೇಳಿದರು.

ಸಿಗದ ನ್ಯಾಯ: ಸುವರ್ಣ ತ್ರಿಭುಜ ಬೋಟಿನಲ್ಲಿದ್ದು, ಇನ್ನೂ ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ಸಿಗಬೇಕಾದ ನ್ಯಾಯ ಇನ್ನೂ ದೊರ ಕಿಲ್ಲ. ಈ ಬಡ ಮೀನುಗಾರ ಕುಟುಂಬಕ್ಕೆ ನ್ಯಾಯ ದೊರಕಿಸಿ, ದೊಡ್ಡ ಮೊತ್ತದ ಪರಿಹಾರಕ್ಕಾಗಿ ಉಡುಪಿ ಮತ್ತು ಉತ್ತರ ಕನ್ನಡದ ಮೀನುಗಾರ ಬಾಂಧವರು ಶ್ರಮಿಸಿದ್ದಾರೆ. ಆದರೆ ರಾಜ್ಯದಿಂದ ಪರಿಹಾರ ಸಿಕ್ಕಿದ್ದು, ಕೇಂದ್ರದ ಹಣ ಇನ್ನೂ ಬಂದಿಲ್ಲ. ಕೇಂದ್ರದಿಂದ ಪರಿಹಾರ ದೊರೆಯುವ ಭರವಸೆ ಇನ್ನೂ ಈಡೇರಿಲ್ಲ ಎಂದವರು ನುಡಿದರು.

ಸುವರ್ಣ ತ್ರಿಭುಜ ಮುಳುಗಿರುವುದು ನಿಜ: ಸುವರ್ಣ ತ್ರಿಭುಜ ಮುಳುಗಿರುವುದನ್ನು ಕಂಡಿರುವುದು ಹೌದಾದರೆ, ಯಾಕೆ ಬೋಟನ್ನು ಇನ್ನೂ ಮೇಲೆತ್ತಿ, ಅದರಲ್ಲಿ ಸಿಕ್ಕಿಹಾಕಿಕೊಂಡಿರಬಹುದಾದ ಮೀನುಗಾರರ ಅವಶೇಷ ಗಳನ್ನು ತೆಗೆಯಲಾಗಿಲ್ಲ ಎಂದು ಅವರನ್ನು ಪ್ರಶ್ನಿಸಿದಾಗ, ಆಗಿನ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೆರವಿನಿಂದ ನೌಕಾಪಡೆಯ ಮೂಲಕ ಸ್ವತಹ ಉಡುಪಿ ಮತ್ತು ಉತ್ತರ ಕನ್ನಡದ ಮೀನುಗಾರ ಪ್ರತಿನಿಧಿಗಳು ತೆರಳಿ ಬೋಟು ಮುಳುಗಿರುವ ಸ್ಥಳವನ್ನು ಗುರುತಿಸಿದ್ದಾರೆ ಎಂದರು.

ಅದರೆ ಬೋಟು ಅವಘಡವಾಗಿರುವ ಸ್ಥಳವನ್ನು ಗುರುತಿಸಿದ್ದರೂ, ಬೋಟನ್ನು ಇನ್ನೂ ಮೇಲಕ್ಕೆತ್ತುವ ಯಾವುದೇ ಪ್ರಯತ್ನವನ್ನು ಇದುವರೆಗೆ ಮಾಡಿಲ್ಲ. ಬೋಟನ್ನು ಮೇಲೆತ್ತಿ ಅದರಲ್ಲಿರುವ ಮೀನುಗಾರರ ಮೃತದೇಹಕ್ಕೆ ಮೋಕ್ಷ ಕರುಣಿಸಲು ಕುಟುಂಬಕ್ಕೆ ಅವಕಾಶ ಮಾಡಿಕೊಡಿ ಎಂದು ಪರಿಪರಿಯಾಗಿ ಬೇಡಿಕೊಂಡರೂ ಯಾರೂ ನಮ್ಮ ನೆರವಿಗೆ ಬರುತ್ತಿಲ್ಲ. ರಾತ್ರಿ ಕಣ್ಣು ಮುಚ್ಚಿದರೆ, ಕಡಲಿನಾಳದಿಂದ ನಮಗೆ ಅವರ ಆಕ್ರಂಧನ ಕೇಳುತ್ತದೆ ಎಂದವರು ನುಡಿದರು.

ಉಪಸ್ಥಿತರಿದ್ದ ಮಲ್ಪೆಯ ತಾಂಡೇಲರ ಸಂಘದ ಅಧ್ಯಕ್ಷ ರವಿರಾಜ ಸುವರ್ಣ ಮಾತನಾಡಿ, ನೌಕಾಪಡೆಯ ಹಡಗಿನಲ್ಲಿ ಸುವರ್ಣ ತ್ರಿಭುಜ ಪತ್ತೆಗೆ ಹೋದ 10 ಮಂದಿ ಮೀನುಗಾರರ ತಂಡದಲ್ಲಿ ತಾನಿದ್ದು, ಸುವರ್ಣ ತ್ರಿಭುಜದ ಅವಶೇಷವನ್ನು ತಾನು ಸಮುದ್ರದಾಳದಲ್ಲಿ ಕಂಡಿರು ವುದಾಗಿ ನುಡಿದರು. ಆದರೆ ಅದನ್ನು ಇನ್ನೂ ಯಾಕೆ ಮೇಲಕ್ಕೆತ್ತಿಲ್ಲ ಎಂಬುದು ತನಗೆ ಗೊತ್ತಿಲ್ಲ ಎಂದರು.

ಇನ್ನು ಪ್ರಕೃತಿ ವಿಕೋಪ ಸಂಕಷ್ಟ ಪರಿಹಾರ ನಿಧಿಯಿಂದ ಮೀನುಗಾರಿಕೆ ವೇಳೆ ಮೃತಪಡುವ ಮೀನುಗಾರರಿಗೆ ನೀಡುವ ಪರಿಹಾರ ಹಣದಲ್ಲಿ ತಾರತಮ್ಯ ಬೇಡ. ಸಮುದ್ರದಲ್ಲಿ ಮುಳುಗಿ ಮೃತಪಟ್ಟರೆ ಆರು ಲಕ್ಷ ರೂ. ಪರಿಹಾರ, ನದಿ ನೀರಿಗೆ ಬೆದ್ದು ಸತ್ತರೆ ಮೂರು ಲಕ್ಷ ಎಂಬ ತಾರತಮ್ಯ ಮಾಡದೇ ಎಲ್ಲರಿಗೂ ತಲಾ ಆರು ಲಕ್ಷ ರೂ.ಪರಿಹಾರ ನೀಡಬೇಕು ಎಂದು ಗಣಪತಿ ಮಾಂಬ್ರೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರವಾರ ಪರ್ಸಿನ್ ಮೀನುಗಾರರ ಸಂಘದ ಸದಸ್ಯ ನಿತಿನ್ ರಮಾಕಾಂತ್ ಗಾಂವ್ಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X