Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅ.13ರಿಂದ ಎಲೆಕ್ಟ್ರಿಕ್ ಬಸ್ ಗಳ...

ಅ.13ರಿಂದ ಎಲೆಕ್ಟ್ರಿಕ್ ಬಸ್ ಗಳ ಪ್ರಾಯೋಗಿಕ ಸಂಚಾರ

ವಾರ್ತಾಭಾರತಿವಾರ್ತಾಭಾರತಿ7 Oct 2020 11:20 PM IST
share

ಬೆಂಗಳೂರು, ಅ.7: ಬಿಎಂಟಿಸಿಯ 12 ಮೀಟರ್ ಉದ್ದದ ನಾಲ್ಕು ಎಲೆಕ್ಟ್ರಿಕ್ ಬಸ್‍ಗಳು ಅ.13ರಿಂದ ಪ್ರಯೋಗದ ಭಾಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿವೆ.

ಪ್ರಾಯೋಗಿಕವಾಗಿ ಸಂಚರಿಸಲಿರುವ ಎಲೆಕ್ಟ್ರಿಕ್ ಬಸ್ಸಿನಲ್ಲಿ 37 ಆಸನಗಳ ಸಾಮರ್ಥ್ಯವಿದ್ದು, ಅದನ್ನ 60 ಸೀಟುಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.ನಗರದಲ್ಲಿ ಒಂದು ತಿಂಗಳವರೆಗೆ ಟ್ರಯಲ್ ರನ್ ನಡೆಯಲಿದ್ದು, ಆರಂಭದಲ್ಲಿ ಮರಳು ಚೀಲಗಳನ್ನು ಪ್ರಯಾಣಿಕರ ಜಾಗದಲ್ಲಿ ಇರಿಸಲಾಗುತ್ತದೆ.

ಕೇಂದ್ರದ ಭಾರಿ ಕೈಗಾರಿಕೆಗಳ ಸಚಿವಾಲಯವು ಫೇಮ್ ಇಂಡಿಯಾ ಯೋಜನೆಯಡಿ ಕರ್ನಾಟಕದಲ್ಲಿ 400 ಇ-ಬಸ್‍ಗಳನ್ನು ಕಾರ್ಯಾಚರಣೆಗೊಳಿಸಲು ಸಬ್ಸಿಡಿ ನೀಡುತ್ತಿದೆ. ಇದರಲ್ಲಿ 300 ಬಸ್‍ಗಳು ರಾಜಧಾನಿಗೆ ಲಭಿಸಿವೆ. ಗುತ್ತಿಗೆ ಆಧಾರದ ಮೇಲೆ ಎಲೆಕ್ಟ್ರಿಕ್ ಬಸ್‍ಗಳನ್ನು ಪಡೆದು ಕಾರ್ಯಾಚರಣೆಗೊಳಿಸುವ ಶರತ್ತಿನ ಮೇಲೆ ಕೇಂದ್ರವು ಸಬ್ಸಿಡಿ ನೀಡುತ್ತಿದೆ. ಹೀಗಾಗಿ, ಬಿಎಂಟಿಸಿಯು ಎರಡು ಬಾರಿ ಟೆಂಡರ್ ಆಹ್ವಾನಿಸಿತ್ತು. ಮೊದಲ ಸಲ ಪ್ರತಿ ಕಿ.ಮೀ. ಗೆ 105 ರೂ. ನಮೂದಿಸಿ ಕಂಪೆನಿಗಳು ಬಿಡ್ ಸಲ್ಲಿಸಿದ್ದವು.

ಹೈದರಾಬಾದ್ ಮೂಲದ ಒಲೆಕ್ಟ್ರಾ ಕಂಪನಿಯು ಒಂದು ತಿಂಗಳ ಕಾಲ ಪ್ರಾಯೋಗಿಕವಾಗಿ ಎಲೆಕ್ಟ್ರಿಕ್ ಬಸ್ ಅನ್ನು ಓಡಿಸಲಿದೆ. ಇದಕ್ಕಾಗಿ ಮೆಜೆಸ್ಟಿಕ್ ಡಿಪೋ 7ರಲ್ಲಿ ಚಾಜಿರ್ಂಗ್ ಘಟಕವನ್ನು ಸ್ಥಾಪಿಸಲಾಗಿದೆ. ಎರಡನೇ ಸಲ ಕರೆದಿದ್ದ ಟೆಂಡರ್‍ನಲ್ಲಿ ಭಾಗವಹಿಸಿದ್ದ ಒಲೆಕ್ಟ್ರಾ ಕಂಪೆನಿ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‍ಗಳಿಗೆ ಪ್ರತಿ ಕಿ.ಮೀ. ಗೆ 89.64 ರೂ. ನಮೂದಿಸಿ ಬಿಡ್ ಸಲ್ಲಿಸಿತ್ತು. ದರ ಸಂಧಾನದ ಬಳಿಕ 69 ರೂ. ಗಳಿಗೆ ಒಪ್ಪಿಕೊಂಡಿತ್ತು. ಇದು ಕೂಡ ದುಬಾರಿ ಎನಿಸಿದ್ದರಿಂದ ರದ್ದುಪಡಿಸಲಾಯಿತು.

ಇದಲ್ಲದೆ, ಕೆಂಗೇರಿ ಮತ್ತು ಯಶವಂತಪುರ ಡಿಪೋದಲ್ಲೂ ಚಾಜಿರ್ಂಗ್ ಘಟಕವನ್ನು ಅಳವಡಿಸಲು ತೀರ್ಮಾನಿಸಲಾಗಿದೆ. 15 ದಿನಗಳ ಕಾಲ ಮರಳಿನ ಮೂಟೆಗಳನ್ನು ಬಸ್ಸಿನಲ್ಲಿ ಇರಿಸಿ ಸಂಚರಿಸುವ ಮೂಲಕ ಕಾರ್ಯಕ್ಷಮತೆ ಪರಿಶೀಲಿಸಲಾಗುತ್ತದೆ. ಆನಂತರ ಪ್ರಯಾಣಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟು, ಅದರ ಸಾಮರ್ಥ್ಯ ಮತ್ತು ಒಮ್ಮೆ ಚಾರ್ಜಿಂಗ್ ಮಾಡಿದ ಬಳಿಕ ಎಷ್ಟು ಕಿ.ಮೀ. ಸಂಚರಿಸುತ್ತದೆ ಎಂಬುದನ್ನು ಪರೀಕ್ಷಿಸಲು ಉದ್ದೇಶಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X