Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಕ್ ಸ್ವಾತಂತ್ರ್ಯ ಇತ್ತೀಚೆಗೆ ಹೆಚ್ಚು...

ವಾಕ್ ಸ್ವಾತಂತ್ರ್ಯ ಇತ್ತೀಚೆಗೆ ಹೆಚ್ಚು ದುರುಪಯೋಗ ಆಗುತ್ತಿದೆ: ಸುಪ್ರೀಂ ಕೋರ್ಟ್

ತಬ್ಲೀಗಿ ಜಮಾಅತ್ ಬಗ್ಗೆ ನಕಲಿ ಸುದ್ದಿ ಪ್ರಸಾರ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ8 Oct 2020 3:09 PM IST
share
ವಾಕ್ ಸ್ವಾತಂತ್ರ್ಯ ಇತ್ತೀಚೆಗೆ ಹೆಚ್ಚು ದುರುಪಯೋಗ ಆಗುತ್ತಿದೆ: ಸುಪ್ರೀಂ ಕೋರ್ಟ್

ಕಳಪೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರಕಾರಕ್ಕೆ ಸಿಜೆಐ ಬೋಬ್ಡೆ ತರಾಟೆ

ಹೊಸದಿಲ್ಲಿ: ಇತ್ತಿಚಿನ ದಿನಗಳಲ್ಲಿ ಅತ್ಯಂತ ಹೆಚ್ಚು ದುರುಪಯೋಗಪಡಿಸಿಕೊಂಡ ಸ್ವಾತಂತ್ರಗಳ ಪೈಕಿ ವಾಕ್ ಸ್ವಾತಂತ್ರ ಕೂಡಾ ಒಂದಾಗಿದೆ ಎಂದು ತಬ್ಲೀಗಿ ಜಮಾಅತ್ ಬಗ್ಗೆ ನಕಲಿ ಸುದ್ದಿಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಮತ್ತು ನಿಝಾಮುದ್ದೀನ್ ಮರ್ಕಝ್ ಘಟನೆಯನ್ನು ಕೋಮುವಾದೀಕರಿಸಿದ ಆರೋಪದ ಮೇಲೆ ಟಿವಿ ಚಾನೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಗುರುವಾರ ಸುಪ್ರೀಂಕೋರ್ಟ್ ಹೇಳಿದೆ.

"ನೀವು ಈ ನ್ಯಾಯಾಲಯವನ್ನು ಈ ರೀತಿ ಪರಿಗಣಿಸಲು ಸಾಧ್ಯವಿಲ್ಲ. ಕಿರಿಯ ಅಧಿಕಾರಿಯೊಬ್ಬರು ಅಫಿಡವಿಟ್ ಸಲ್ಲಿಸುತ್ತಾರೆ. ಅರ್ಜಿದಾರರು ಪ್ರಸ್ತಾವಿಸಿರುವ ಕೆಟ್ಟ ವರದಿಯ ಬಗ್ಗೆ ಸ್ಪಂದಿಸಿಲ್ಲ. ಘಟನೆ ನಡೆದಿಲ್ಲ ಎಂದು ನೀವು ಹೇಗೆ ಹೇಳುತ್ತೀರಿ'' ಎಂದು ಭಾರತದ ಮುಖ್ಯನ್ಯಾಯಾಧೀಶ ಎಸ್.ಎ.ಬೋಬ್ಡೆ  ಅವರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ತಿಳಿಸಿದರು.

ಮುಖ್ಯ ನ್ಯಾಯಾಧೀಶರ ಮಾತಿಗೆ ವಿಚಲಿತರಾದಂತೆ ಕಂಡುಬಂದ ಮೆಹ್ತಾ ಹೊಸ ಅಫಿಡವಿಟ್ ಸಲ್ಲಿಸುವ ಕುರಿತು ಗಮನ ಹರಿಸುವುದಾಗಿ ಹೇಳಿದರು. ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿ ಹೊಸ ಅಫಿಡವಿಟ್ ಸಲ್ಲಿಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಮೆಹ್ತಾ ಅವರಿಗೆ ಕೇಳಿದೆ.

"ನಿರ್ದಿಷ್ಟ ಘಟನೆಗಳ ಬಗ್ಗೆ ( ಅರ್ಜಿದಾರರಿಂದ ಉಲ್ಲೇಖಿಸಲ್ಪಟ್ಟ) ಅವರು ಏನು ಯೋಚಿಸುತ್ತಾರೆ ಎಂಬುದನ್ನು ಕಾರ್ಯದರ್ಶಿ ನಮಗೆ ತಿಳಿಸಬೇಕು ಹಾಗೂ ಈಗ ಏನು ಮಾಡಲಾಗಿದೆ ಎಂಬುದರ ಬಗ್ಗೆ ಅಸಂಬದ್ಧವಾದ ವರ್ತನೆಗಳನ್ನು ತೋರಬಾರದು. ಇಲಾಖೆಯ ಕಾರ್ಯದರ್ಶಿ ದಾಖಲೆಯಲ್ಲಿ ಅಫಿಡವಿಟ್ ಸಲ್ಲಿಸಬೇಕು. ಇಂತಹ ಘಟನೆಗಳ ಬಗ್ಗೆ ಅವರು ಏನು ಹೇಳುತ್ತಾರೆ ಎನ್ನುವುದನ್ನು ಗಮನಹರಿಸಬೇಕು ಎಂದು ಬೋಬ್ಡೆ ಹೇಳಿದ್ದಾರೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ದುಶ್ಯಂತ್ ದವೆ ಈ ವಿಚಾರವು ವಾಕ್ಚಾತುರ್ಯವನ್ನು ಗೊಂದಲಗೊಳಿಸುತ್ತದೆ ಎಂದು ಸರಕಾರ ಹೇಳಿಕೊಂಡಿದ್ದಾಗಿ ತಿಳಿಸಿದರು.

ವಾಕ್ ಸ್ವಾತಂತ್ರವು ಇತ್ತೀಚಿನ ದಿನಗಳಲ್ಲಿ ಹೆಚ್ಚು ದುರುಪಯೋಗವಾಗುತ್ತಿರುವ ಸ್ವಾತಂತ್ರಗಳ ಪೈಕಿ ಒಂದಾಗಿದೆ ಎಂದು ಸಿಜೆಐ ಬೋಬ್ಡೆ ಟೀಕಿಸಿದರು.

ತಬ್ಲೀಗಿ ಜಮಾಅತ್ ದಿಲ್ಲಿಯ ನಿಝಾಮುದ್ದೀನ್ ಪ್ರದೇಶದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಕೊರೋನ ವೈರಸ್ ಸೋಂಕು ತಗುಲಿದ ಬಳಿಕ ಮಾರ್ಚ್ 30ರಂದು ನಿಝಾಮುದ್ದೀನ್‌ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿತ್ತು.

ಕೆಲವು ಮಾಧ್ಯಮಗಳು ಘಟನೆಯ ವರದಿಗಾರಿಕೆಯ ವೇಳೆ ಪತ್ರಿಕೋದ್ಯಮದ ಮಾನದಂಡಗಳನ್ನು ಹಾಗೂ ಕೇಬಲ್ ಟಿವಿ ನೆಟ್‌ವರ್ಕ್‌ಗಳ ನಿಯಂತ್ರಣ ಕಾಯ್ದೆಯ ನಿಬಂಧನೆಗಳನ್ನು ಹಾಗೂ ಆ ಕಾಯ್ದೆಯಡಿ ಕಾರ್ಯಕ್ರಮ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X