Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ಕಂಪೆನಿಯಲ್ಲಿ ನಡೆದ 6 ಬಿಲಿಯನ್...

ತನ್ನ ಕಂಪೆನಿಯಲ್ಲಿ ನಡೆದ 6 ಬಿಲಿಯನ್ ಡಾಲರ್ ವಂಚನೆಯ ತನಿಖೆ ಸಿಬಿಐ, ಈ.ಡಿ. ನಡೆಸುವಂತೆ ಕೋರಿ ಬಿ.ಆರ್. ಶೆಟ್ಟಿ ದೂರು

ವಾರ್ತಾಭಾರತಿವಾರ್ತಾಭಾರತಿ8 Oct 2020 9:46 PM IST
share
ತನ್ನ ಕಂಪೆನಿಯಲ್ಲಿ ನಡೆದ 6 ಬಿಲಿಯನ್ ಡಾಲರ್ ವಂಚನೆಯ ತನಿಖೆ ಸಿಬಿಐ, ಈ.ಡಿ. ನಡೆಸುವಂತೆ ಕೋರಿ ಬಿ.ಆರ್. ಶೆಟ್ಟಿ ದೂರು

ಹೊಸದಿಲ್ಲಿ, ಅ. 8: ಬ್ಯಾಂಕರ್‌ಗಳೊಂದಿಗೆ ನಿರ್ಲಜ್ಜವಾಗಿ ಕೈಜೋಡಿಸುವ ಮೂಲಕ ತನ್ನ ಕಂಪೆನಿಗಳ ಮಾಜಿ ಉನ್ನತ ಅಧಿಕಾರಿಗಳು ನಡೆಸಿರುವ 6 ಬಿಲಿಯನ್ ಡಾಲರ್ (43993.77 ಕೋಟಿ ರೂಪಾಯಿ) ವಂಚನೆ ಪ್ರಕರಣದ ತನಿಖೆ ನಡೆಸಲು ಯುಎಇ ಮೂಲದ ಉದ್ಯಮಿ ಬಿ.ಆರ್. ಶೆಟ್ಟಿ ಭಾರತೀಯ ತನಿಖಾ ಸಂಸ್ಥೆಗಳ ನೆರವು ಕೋರಿದ್ದಾರೆ.

ಆಸ್ಪತ್ರೆಗಳ ಸರಣಿಯಾದ ಎನ್‌ಎಂಸಿ ಹೆಲ್ತ್ ಕೇರ್ ಹಾಗೂ ಯುಎಇ ಎಕ್ಸ್‌ಚೇಂಜ್‌ನ ಸ್ಥಾಪಕ ಬಿ.ಆರ್. ಶೆಟ್ಟಿ ಅವರು ಪ್ರಸ್ತುತ ಭಾರತದಲ್ಲಿದ್ದು, ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಅಲ್ಲದೆ, ಇದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಗಂಭೀರ ವಂಚನೆ ತನಿಖಾ ಕಚೇರಿಗೆ ಕಳುಹಿಸಿಕೊಟ್ಟಿದ್ದಾರೆ. ತನ್ನ ಕಂಪೆನಿಯ ಮಾಜಿ ಮುಖ್ಯ ಅಧಿಕಾರಿಗಳಾದ ಪ್ರಶಾಂತ್ ಮಾಂಘಾಟ್ ಹಾಗೂ ಅವರ ಸಹೋದರ ಪ್ರಮೋತ್ ಮಾಂಘಾಟ್ ನಡೆಸಿದ ಹಣ ದುರುಪಯೋಗ, ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಬಗ್ಗೆ ತನಿಖೆ ನಡೆಸುವಂತೆ ಅವರು ಆಗ್ರಹಿಸಿದ್ದಾರೆ.

ಪ್ರಶಾಂತ್ ಮಾಂಘಾಟ್ ಹಾಗೂ ಪ್ರಮೋತ್ ಮಾಂಘಾಟ್ ಬ್ಯಾಂಕರ್‌ಗಳು ಹಾಗೂ ಲೆಕ್ಕ ಪರಿಶೋಧಕರೊಂದಿಗೆ ಕೈಜೋಡಿಸಿ ಬಿಲಿಯನ್ ಡಾಲರ್ ವಂಚಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಪ್ರಮೋತ್ ಮಾಂಘಾಟ್ ಅವರು ಫಿನಾಬ್ಲರ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಯಿಂದ ಮಾರ್ಚ್‌ನಲ್ಲಿ ಕೆಳಗಿಳಿದಿದ್ದರು. ಪ್ರಶಾಂತ್ ಮಾಂಘೋಟ್ ಅವರನ್ನು ಎನ್‌ಎಂಸಿ ಹೆಲ್ತ್‌ನ ಮಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಯಿಂದ ಫೆಬ್ರವರಿಯಲ್ಲಿ ವಜಾಗೊಳಿಸಲಾಗಿತ್ತು. ತನ್ನ ದೂರಿನಲ್ಲಿ ಇತರ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಹೆಸರು ಹೇಳಿರುವ ಬಿ.ಆರ್. ಶೆಟ್ಟಿ, ಮಾಜಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿದ್ದಾರೆ.

ಇದು ಕಾನೂನು ವ್ಯಾಪ್ತಿಯ ವಿಷಯವಾದುದರಿಂದ ಭಾರತದ ತನಿಖಾ ಸಂಸ್ಥೆಗೆ ಈ ಬಗ್ಗೆ ತನಿಖೆ ನಡೆಸಲು ಅವಕಾಶ ಇದೆಯೇ ಎಂಬ ಬಗ್ಗೆ ಇದುವರೆಗೆ ಸ್ಪಷ್ಟವಾಗಿಲ್ಲ. ಬಿ.ಆರ್. ಶೆಟ್ಟಿ ಅವರ ದೂರಿಗೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಇನ್ನಷ್ಟೇ ಹಿಂಬರಹ ನೀಡಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X