Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುಜಿಡಿ ಸಂಪರ್ಕಕ್ಕೆ ಮನೆ ಮಾಲಕರಿಂದ ಹಣ...

ಯುಜಿಡಿ ಸಂಪರ್ಕಕ್ಕೆ ಮನೆ ಮಾಲಕರಿಂದ ಹಣ ವಸೂಲಿ ಸರಿಯಲ್ಲ: ಕಾಂಗ್ರೆಸ್ ವಕ್ತಾರ ರೂಬೆನ್ ಮೊಸಸ್

ವಾರ್ತಾಭಾರತಿವಾರ್ತಾಭಾರತಿ8 Oct 2020 11:07 PM IST
share

ಚಿಕ್ಕಮಗಳೂರು, ಅ.8: ನಗರದ  ವಿವಿಧ ಬಡಾವಣೆಗಳಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಸರಕಾರ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡಿದೆ. ಆದರೆ ಪೂರ್ಣ ಕಾಮಗಾರಿ ನಿರ್ವಹಿಸದೇ ಗುತ್ತಿಗೆದಾರ ಈ ಕಾಮಗಾರಿಯ ಬಿಲ್ ಪಡೆದು ನಾಪತ್ತೆಯಾಗಿದ್ದಾನೆ. ಗುತ್ತಿಗೆದಾರನಿಂದ ಹಣ ವಸೂಲಿ ಮಾಡಬೇಕಾದ ನಗರಸಭೆ ಹಾಗೂ ಕ್ಷೇತ್ರದ ಶಾಸಕ ಸಿ.ಟಿ.ರವಿ ಯುಜಿಡಿ ಸಂಪರ್ಕ ಕಲ್ಪಿಸಲು ಸಾರ್ವಜನಿಕರಿಂದಲೇ ಹಣ ವಸೂಲು ಮಾಡುತ್ತಿರುವುದು ಸರಿಯಲ್ಲ. ಯುಜಿಡಿ ಸಂಪರ್ಕವನ್ನು ಉಚಿತವಾಗಿ ನಗರಸಭೆಯಿಂದಲೇ ಕಲ್ಪಿಸಬೇಕೆಂದು ನಗರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ರೂಬೆನ್ ಮೊಸಸ್ ಆಗ್ರಹಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಗರದ ಗೌರಿಕಾಲುವೆ, ಜಯನಗರ ಸೇರಿದಂತೆ ಕೆಲವು ವಾರ್ಡುಗಳಲ್ಲಿ ವಿಶೇಷ ಅನುದಾನದಡಿಯಲ್ಲಿ ರಸ್ತೆಗಳ ಡಾಂಬರೀಕರಣಕ್ಕೆ ಹಣ ಮಂಜೂರಾಗಿದೆ. ಈ ಕಾರಣಕ್ಕೆ ರಸ್ತೆ ಡಾಂಬರೀಕರಣ ಆಗುವ ಮುನ್ನ ಒಳಚರಂಡಿ ವ್ಯವಸ್ಥೆ ಮಾಡಬೇಕು, ನಂತರ ರಸ್ತೆ ಅಗೆಯಲು ಸಾಧ್ಯವಿಲ್ಲ ಎಂದು ನಗರಸಭೆಯ ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಮಧ್ಯೆ ಖಾಸಗಿ ಗುತ್ತಿಗೆದಾರರ ಮುಖಾಂತರ ಒಳಚರಂಡಿಗೆ ಮನೆಗಳ ಸಂಪರ್ಕ ಕಲ್ಪಿಸುವ ಕೆಲಸ ಮಾಡಿಸುತ್ತಿದ್ದಾರೆ. ಅಲ್ಲದೇ ಪ್ರತೀ ಸಂಪರ್ಕಕ್ಕೆ ಮನಬಂದಂತೆ ಹಣ ವಸೂಲಿ ಮಾಡಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಒಳಚರಂಡಿ ಸಂಪರ್ಕಕ್ಕೆ ಮನೆಗಳ ಮಾಲಕರಿಂದ ಹಣವನ್ನು ವಸೂಲಿ ಮಾಡುತ್ತಿರುವುದು ಸರಿಯಲ್ಲ. ಈ ಬಗ್ಗೆ ಆಯುಕ್ತರು, ಇಂಜಿನಿಯರ್ ಬಳಿ ಮಾತನಾಡಿದರೇ, ನಗರಸಭೆಗೂ ಇದಕ್ಕೂ ಸಂಬಂಧವಿಲ್ಲ. ನಗರಸಭೆಗೆ ಗುತ್ತಿಗೆದಾರ ಯಾವುದೇ ರೀತಿಯ ಕಟ್ಟುತ್ತಿಲ್ಲ ಎನ್ನುತ್ತಿದ್ದಾರೆ.

ನಗರಸಭೆ ಎಇಇ ರಶ್ಮಿ ಅವರನ್ನು ವಿಚಾರಿಸದರೇ, ಯುಜಿಡಿ ಸಂಪರ್ಕ ಕಲ್ಪಿಸಲು ಗುತ್ತಿಗೆದಾರರನ್ನು ನಾವೇ ಕಳಿಸಿದ್ದೇವೆ. ರಸ್ತೆ ಡಾಂಬರೀಕರಣ ಮಾಡುವ ಮುನ್ನ ಯುಜಿಡಿ ಸಂಪರ್ಕ ಆಗಲೇಬೇಕು. ಈ ಗುತ್ತಿಗೆದಾರ ಹೆಚ್ಚು ಹಣ ಕೇಳಿದರೇ ಸಾರ್ವಜನಿಕರು ಬೇರೆಯವರ ಮೂಲಕ ಯುಜಿಡಿ ಸಂಪರ್ಕ ಪಡೆದುಕೊಳ್ಳಲಿ ಎನ್ನುತ್ತಿದ್ದಾರೆ. ನಗರಸಭೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಈ ಸಂಬಂಧ ಗೊಂದಲ ಮೂಡಿಸುತಿದ್ದಾರೆಂದು ಆರೋಪಿಸಿದ್ದಾರೆ.

ಯುಜಿಡಿ ಕಾಮಗಾರಿಗೆ ಕೋಟಿಗಟ್ಟಲೆ ಹಣವನ್ನು ಸರಕಾರ ಈ ಹಿಂದೆಯೇ ಮಂಜೂರು ಮಾಡಿದೆ. ಮನೆಗಳ ಸಂಪರ್ಕ ನೀಡುವ ಕಾಮಗಾರಿ ಈ ಪ್ಯಾಕೇಜ್‍ನಡಿಯಲ್ಲೇ ಸೇರಿದೆ. ಆದರೆ ನಗರಸಭೆ ಅಧಿಕಾರಿಗಳು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವುದು ಸರಿಯಲ್ಲ. ಸರಕಾರದಿಂದ ಮತ್ತೆ ಅನುದಾನ ತಂದು, ಇಲ್ಲವೇ ನಗರಸಭೆ ಅನುದಾನದಲ್ಲೇ ಯುಜಿಡಿ ಸಂಪರ್ಕ ಕಾಮಗಾರಿ ಕಲ್ಪಿಸಲು ಸಂಬಂಧಿಸಿದ ಸಚಿವರು, ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಅವರು ಸಲಹೆ ನೀಡಿದ್ದಾರೆ.

ಗೌರಿಕಾಲುವೆಯಲ್ಲಿ ಮಾಜಿ ನಗರಸಭೆ ಸದಸ್ಯರೊಬ್ಬರು ಶಿವರಾಮ್ ಕಾರಂತ್ ರಸ್ತೆ, 60 ಫೀಟ್ ರಸ್ತೆ, ಅಕ್ಮಲ್ ಅಪಾಟ್ರ್ಮೆಂಟ್ ರಸ್ತೆ, ಜೈರಾಜ್ ಅರಸ್ ರಸ್ತೆಗಳಿಗೆ ಗುತ್ತಿಗೆದಾರರನ್ನು ಕರೆದುಕೊಂಡು ಹೋಗಿ ಯುಜಿಡಿ ಸಂಪರ್ಕಕ್ಕೆ ಮನೆಗಳ ಮಾಲಕರಿಂದ ನಾಲ್ಕು ಸಾವಿರ, ಐದು ಸಾವಿರ, ಆರು ಸಾವಿರ ಎಂದು ಒಂದೊಂದು ಕಡೆ ಒಂದೊಂದು ರೀತಿಯಲ್ಲಿ ಹಣ ವಸೂಲಿ ಮಾಡಿದ್ದಾರೆ. ವಿಷಯ ತಿಳಿದು ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆಸಿ ಗಲಾಟೆ ಮಾಡಿದ ಮೇಲೆ ಕೆಲವರಿಗೆ ಗುತ್ತಿಗೆದಾರ ಸಾವಿರ ರೂಪಾಯಿಯ ವರೆಗೆ ಹಣ ಹಿಂದಿರುಗಿಸಿದ್ದಾರೆ. ಹೊಸರಸ್ತೆ ಆಗುತ್ತದೆ ಎಂಬ ಆಸೆಯಿಂದ ಸಾರ್ವಜನಿಕರು ಕೊರೋನ ಸಂದರ್ಭದಲ್ಲೂ ಕೂಲಿ ಇಲ್ಲದೆ, ಕೆಲಸವಿಲ್ಲದೆ, ವ್ಯಾಪಾರವಿಲ್ಲದೆ ಬಡ್ಡಿಗೆ ಹಣ ಜನ ತಂದು ಗುತ್ತಿಗೆದಾರನಿಗೆ ನೀಡುತ್ತಿದ್ದಾರೆ. ಸಾರ್ವಜನಿಕರ ಮೇಲಿನ ಈ ಹೊರೆ ತಪ್ಪಿಸಲು ನಗರಸಭೆ ಅಧಿಕಾರಿಗಳು, ಸಚಿವ ಸಿ.ಟಿ.ರವಿ ಅವರು ಸಾರ್ವಜನಿಕರಿಂದ ಗುತ್ತಿಗೆದಾರ ವಸೂಲಿ ಮಾಡಿರುವ ಹಣವನ್ನು ಹಿಂದಿರುಗಿಸಿಕೊಡಬೇಕು. ಒಳಚರಂಡಿ ಸಂಪರ್ಕ ಕಲ್ಪಿಸಲು ಸರಕಾರದ ಹಣ ಬಳಕೆ ಮಾಡಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X