Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿಆರ್‌ಪಿ ಹಗರಣ: ಇಲ್ಲಿದೆ ಫಕ್ತ್ ಮರಾಠಿ...

ಟಿಆರ್‌ಪಿ ಹಗರಣ: ಇಲ್ಲಿದೆ ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ9 Oct 2020 8:28 PM IST
share
ಟಿಆರ್‌ಪಿ ಹಗರಣ: ಇಲ್ಲಿದೆ ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳ ಮಾಹಿತಿ

ಮುಂಬೈ,ಅ.9: ಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿಆರ್‌ಪಿ)ಗಳನ್ನು ತಿರುಚುತ್ತಿದ್ದ ಜಾಲವೊಂದನ್ನು ತಾವು ಭೇದಿಸಿರುವುದಾಗಿ ಮುಂಬೈ ಪೊಲೀಸರು ಗುರುವಾರ ಪ್ರಕಟಿಸಿದ್ದಾರೆ. ಅರ್ನಾಬ್ ಗೋಸ್ವಾಮಿಯವರ ರಿಪಬ್ಲಿಕ್ ಟಿವಿ, ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳನ್ನು ಆರೋಪಿಗಳನ್ನಾಗಿ ಪೊಲೀಸರು ಹೆಸರಿಸಿದ್ದಾರೆ.

ಟಿಆರ್‌ಪಿ ಯಾವ ಟಿವಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ವೀಕ್ಷಿಸಲಾಗಿದೆ ಎಂದು ಸೂಚಿಸುವ ಮಾನದಂಡವಾಗಿದೆ,ಜೊತೆಗೆ ವೀಕ್ಷಕರ ಆಯ್ಕೆ ಮತ್ತು ನಿರ್ದಿಷ್ಟ ವಾಹಿನಿಯ ಜನಪ್ರಿಯತೆಯ ಬಗ್ಗೆಯೂ ಅದು ಮಾಹಿತಿಯನ್ನು ನೀಡುತ್ತದೆ. ಕೆಲವು ಆಯ್ದ ಮನೆಗಳಲ್ಲಿ ಇರಿಸಲಾಗಿರುವ ಸಾಧನಗಳಲ್ಲಿ ದಾಖಲಾಗುವ ಟಿವಿ ವಾಹಿನಿಗಳ ವೀಕ್ಷಣೆಯ ಆಧಾರದಲ್ಲಿ ಟಿಆರ್‌ಪಿಯನ್ನು ಲೆಕ್ಕ ಹಾಕಲಾಗುತ್ತದೆ. ಟಿಆರ್‌ಪಿ ಸಾಧನಗಳನ್ನು ಇಟ್ಟಿರುವ ಮನೆಗಳ ಗುರುತುಗಳನ್ನು ಬಹಿರಂಗಗೊಳಿಸಲಾಗುವುದಿಲ್ಲ. ಟಿಆರ್‌ಪಿಯನ್ನು ಆಧರಿಸಿ ಟಿವಿ ವಾಹಿನಿಗಳಿಗೆ ಜಾಹೀರಾತುಗಳು ದೊರೆಯುತ್ತವೆ. ರಿಪಬ್ಲಿಕ್ ಟಿವಿ, ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳು ಇಂತಹ ಕುಟುಂಬಗಳಿಗೆ ಲಂಚ ನೀಡುತ್ತಿದ್ದವು ಹಾಗೂ ಅವರು ಕಾರ್ಯಕ್ರಮ ನೋಡುತ್ತಿಲ್ಲವಾದರೂ ಅಥವಾ ಮನೆಯಲ್ಲಿ ಇಲ್ಲದಿದ್ದರೂ ಟಿವಿಯಲ್ಲಿ ಕೆಲವು ಚಾನೆಲ್‌ಗಳನ್ನು ಚಾಲೂ ಇಡುವಂತೆ ಸೂಚಿಸುತ್ತಿದ್ದವು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಟಿಆರ್‌ಪಿ ಹಗರಣದ ಕೇಂದ್ರಬಿಂದುವಾಗಿ ಗಮನ ಸೆಳೆದಿರುವ ರಿಪಬ್ಲಿಕ್ ಟಿವಿ ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದೆ. ಆದರೆ ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳ ಕುರಿತು ಜನರಿಗೆ ಹೆಚ್ಚಿನ ಮಾಹಿತಿಗಳಿಲ್ಲ.

ಫಕ್ತ್ ಮರಾಠಿ

ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಫಕ್ತ್ ಮರಾಠಿ ವಾಹಿನಿಯ ಮಾಲಿಕ ಶಿರೀಷ್ ಪಟ್ಟಣಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. 2016ರಲ್ಲಿ ಆರಂಭಗೊಂಡ ಈ ಮನೋರಂಜನಾ ವಾಹಿನಿಯು ಎಂಟರ್10 ಟೆಲಿವಿಷನ್ ಪ್ರೈ.ಲಿ.ನ ಒಡೆತನದಲ್ಲಿದೆ. ಅದರ ಕಾರ್ಯಕ್ರಮ ಪ್ರಸಾರವು ಮಹಾರಾಷ್ಟ್ರಕ್ಕೆ ಸೀಮಿತಗೊಂಡಿದ್ದು,ಮರಾಠಿ ಧಾರಾವಾಹಿಗಳು ಮತ್ತು ಮರಾಠಿ ಸಿನಿಮಾಗಳನ್ನು ಪ್ರಸಾರ ಮಾಡುತ್ತದೆ. ಎಂಟರ್10 ಟಿವಿ ಪ್ರೈ.ಲಿ. ಫಕ್ತ್ ಮರಾಠಿ ಸೇರಿದಂತೆ ನಾಲ್ಕು ವಾಹಿನಿಗಳನ್ನು ಹೊಂದಿದೆ. ಫಕ್ತ ಮರಾಠಿ ಉಚಿತ ವಾಹಿನಿಯಾಗಿದೆ. ಜನಪ್ರಿಯ ಹಿಂದಿ ಧಾರಾವಾಹಿ ‘ತಾರಕ್ ಮೆಹ್ತಾ ಕಾ ಉಲ್ಟಾ ಚಷ್ಮಾ’ದ ಮರಾಠಿಗೆ ಡಬ್ ಮಾಡಲಾದ ಆವೃತ್ತಿಗಳನ್ನೂ ಫಕ್ತ್ ಮರಾಠಿ ಪ್ರಸಾರಿಸಿದೆ.

 ಬಾಕ್ಸ್ ಸಿನೆಮಾ

ಬಾಕ್ಸ್ ಸಿನಿಮೀಡಿಯಾ ಸರ್ವಿಸಸ್ ಪ್ರೈ.ಲಿ.ನ ಒಡೆತನಕ್ಕೆ ಸೇರಿರುವ ಬಾಕ್ಸ್ ಸಿನಿಮಾ ವಾಹಿನಿಯನ್ನು ನಾರಾಯಣ ಶರ್ಮಾ 2016ರಲ್ಲಿ ಸ್ಥಾಪಿಸಿದ್ದರು. ಇದು ಕೂಡ ಉಚಿತ ವಾಹಿನಿಯಾಗಿದ್ದು ಹಿಂದಿ ಮತ್ತು ಹಿಂದಿಗೆ ಡಬ್ ಮಾಡಲಾದ ಕೆಲವು ಪ್ರಾದೇಶಿಕ ಭಾಷೆಗಳ ಸಿನಿಮಾಗಳನ್ನು ಪ್ರಸಾರ ಮಾಡುತ್ತದೆ.

ಸಾಕ್ಷಿಗಳು ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ,ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳನ್ನು ನಿರ್ದಿಷ್ಟವಾಗಿ ಹೆಸರಿಸಿದ್ದಾರೆ.

 ರಿಪಬ್ಲಿಕ್ ಟಿವಿಯು ಸುಷಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಆಯುಕ್ತ ಪರಮಬೀರ ಸಿಂಗ್ ಅವರನ್ನು ಪ್ರಶ್ನಿಸಿತ್ತು ಮತ್ತು ಇದೇ ಕಾರಣದಿಂದ ತನ್ನ ವಾಹಿನಿಯ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿದ್ದಾರೆ ಎಂದು ಗೋಸ್ವಾಮಿ ಹೇಳಿದ್ದಾರೆ. ತನ್ಮಧ್ಯೆ ಸಿಂಗ್ ಅವರು,ಈ ಮೂರೂ ವಾಹಿನಿಗಳ ಬ್ಯಾಂಕ್ ಖಾತೆಗಳನ್ನು

ತನಿಖೆಗೊಳಪಡಿಸಲಾಗಿದೆ ಮತ್ತು ಹಗರಣಕ್ಕೆ ಸಂಬಂಧಿಸಿದವರನ್ನು ಮುಂದಿನ ವಿಚಾರಣೆಗಾಗಿ ಪೊಲೀಸರು ಕರೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X