Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಿಂಟೋ ಆಸ್ಪತ್ರೆ: ಚಿಕಿತ್ಸೆ ಬಳಿಕ ವಾಸದ...

ಮಿಂಟೋ ಆಸ್ಪತ್ರೆ: ಚಿಕಿತ್ಸೆ ಬಳಿಕ ವಾಸದ ಅವಧಿ ಕಡಿತ

ವಾರ್ತಾಭಾರತಿವಾರ್ತಾಭಾರತಿ9 Oct 2020 10:57 PM IST
share

ಬೆಂಗಳೂರು, ಅ.9: ಕೊರೋನ ಕಾರಣದಿಂದ ಮಿಂಟೋ ಆಸ್ಪತ್ರೆಯಲ್ಲಿ ಡೇ ಕೇರ್ ಮಾದರಿ ಸೇವೆ ನೀಡಲಾಗುತ್ತಿದ್ದು, ಕಣ್ಣಿನ ಸಮಸ್ಯೆಯುಳ್ಳವರಿಗೆ ಶಸ್ತ್ರಚಿಕಿತ್ಸೆ ಬಳಿಕ ಆಸ್ಪತ್ರೆ ವಾಸದ ಅವಧಿಯನ್ನು ಕಡಿತ ಮಾಡಲಾಗಿದೆ.

ಪ್ರಸ್ತುತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಹೊರತುಪಡಿಸಿ ಉಳಿದ ಶಸ್ತ್ರಚಿಕಿತ್ಸೆಗಳನ್ನು ಅಲ್ಲಿ ನಡೆಸಲಾಗುತ್ತಿದೆ. ಆದರೆ, ಮಾಹಿತಿ ಕೊರತೆ ಹಾಗೂ ಕೋವಿಡ್ ಕಾರಣ ಶಸ್ತ್ರಚಿಕಿತ್ಸೆ ಬರುವವರ ಸಂಖ್ಯೆ ಸದ್ಯ ಬೆರಳಣಿಕೆಯಷ್ಟಿದೆ. ಒಂದು ವಾರದಲ್ಲಿ ಇಬ್ಬರಿಗೆ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗಿದೆ. ಹೊರ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ದಿನವೊಂದಕ್ಕೆ ಭೇಟಿ ನೀಡಿದವರ ಸಂಖ್ಯೆ 300ಕ್ಕೆ ಏರಿಕೆಯಾಗಿದೆ. ಈ ಹಿಂದೆ ಪ್ರತಿನಿತ್ಯ ಸರಾಸರಿ 600ರಿಂದ 800 ಹೊರ ರೋಗಿಗಳು ಆಸ್ಪತ್ರೆಗೆ ಬರುತ್ತಿದ್ದರು.

ರೋಗಿಗೆ ಕೋವಿಡ್ ಪರೀಕ್ಷೆ ನಡೆಸಿ, ವರದಿ ಬಂದ 24 ಗಂಟೆಗಳಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಬಳಿಕ 24 ಗಂಟೆ ಅವರ ಸ್ಥಿತಿ ಗಮನಿಸಿ, ಮನೆಗೆ ಕಳುಹಿಸಲಾಗುತ್ತದೆ. ರೋಗಿಗಳು ಗ್ರಾಮೀಣ ಭಾಗದಿಂದ ಬರುತ್ತಾರೆ ಎಂಬ ಕಾರಣಕ್ಕೆ ಈ ಹಿಂದೆ ಹೆಚ್ಚಿನ ಸಮಯ ಇರಿಸಿಕೊಳ್ಳಲಾಗುತ್ತಿತ್ತು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಹೆಚ್ಚಿನ ಅವಧಿ ಆಸ್ಪತ್ರೆಯಲ್ಲಿ ಇರಿಸಿಕೊಳ್ಳುವುದು ಕಷ್ಟ. ಹೀಗಾಗಿ, ಮನೆಗೆ ಕಳುಹಿಸಿದ ಬಳಿಕ ಅವರ ಆರೋಗ್ಯದ ಸ್ಥಿತಿಗತಿಯ ಬಗ್ಗೆ ನಿಗಾ ಇರಿಸಲಾಗುವುದು ಎಂದು ಆಸ್ಪತ್ರೆಯ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ತಿಳಿಸಿದ್ದಾರೆ.

ದಿನಕ್ಕೆ 10ರಿಂದ 20 ಶಸ್ತ್ರಚಿಕಿತ್ಸೆ: ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ಎರಡರಿಂದ ಮೂರು ದಿನಗಳಲ್ಲಿ ಪ್ರಾರಂಭ ಮಾಡಲಾಗುತ್ತದೆ. ಶಸ್ತ್ರಚಿಕಿತ್ಸೆ ನಡೆಸಲು ಸಾಕಷ್ಟು ತಯಾರಿ ನಡೆಸಬೇಕಾಗಿದೆ. ಆಸ್ಪತ್ರೆಯಲ್ಲಿ 8 ಶಸ್ತ್ರಚಿಕಿತ್ಸೆ ಘಟಕಗಳಿವೆ. ಒಂದು ಶಸ್ತ್ರಚಿಕಿತ್ಸೆ ನಡೆಸಿದ ಬಳಿಕ ಮೊದಲಿನಂತೆ ಶಸ್ತ್ರಚಿಕಿತ್ಸೆ ನಡೆಸಲು ಸಾಧ್ಯವಿಲ್ಲ. ಕೊಠಡಿಯನ್ನು ಸಂಪೂರ್ಣವಾಗಿ ಸ್ವಚ್ಛಪಡಿಸಿಕೊಳ್ಳಬೇಕಾಗುತ್ತದೆ. ಕನಿಷ್ಠ 20 ನಿಮಿಷ ಬಿಡುವು ಬೇಕಾಗುತ್ತದೆ. ಹಾಗಾಗಿ ಮೊದಲಿನಂತೆ ದಿನಕ್ಕೆ ಸರಾಸರಿ 50 ಶಸ್ತ್ರಚಿಕಿತ್ಸೆ ನಡೆಸಲು ಸಾಧ್ಯವಿಲ್ಲ. 10ರಿಂದ 20 ಶಸ್ತ್ರಚಿಕಿತ್ಸೆಗಳನ್ನು ನಡೆಸಬಹುದಾಗಿದೆ ಎಂದು ಡಾ. ಸುಜಾತಾ ರಾಥೋಡ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X