ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವ್ಯಕ್ತಿಯ ಕೊಲೆ
![ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವ್ಯಕ್ತಿಯ ಕೊಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವ್ಯಕ್ತಿಯ ಕೊಲೆ](https://www.varthabharati.in/sites/default/files/images/articles/2020/10/11/262881-1602419580.jpeg)
ಬೆಂಗಳೂರು, ಅ. 11: ವ್ಯಕ್ತಿಯೊರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜೇಶ್ ಎಂಬಾತ ಕೊಲೆಯಾಗಿದ್ದು, ಜಾನ್ಪಾಲ್ ಹಾಗೂ ದಿನೇಶ್ ಎಂಬುವರು ಈ ಕೃತ್ಯವೆಸಗಿರುವುದಾಗಿ ಆರೋಪಿಸಲಾಗಿದೆ.
ಮೃತ ರಾಜೇಶ್, ಆರೋಪಿ ಜಾನ್ಪಾಲ್ ಸಹೋದರಿ ಜಾಸ್ಮಿನ್ ಎಂಬಾಕೆಯನ್ನು ಏಳು ವರ್ಷಗಳ ಹಿಂದೆ ವಿವಾಹವಾಗಿದ್ದ. ಜಾಸ್ಮಿನ್ ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿ ಮೃತಪಟ್ಟಿದ್ದರು. ಆತ್ಮಹತ್ಯೆಗೂ ಮುನ್ನ ಸಹೋದರನಿಗೆ ಕರೆ ಮಾಡಿ ಪತಿಯ ಕಿರುಕುಳದ ಬಗ್ಗೆ ಹೇಳಿದ್ದಳು ಎನ್ನಲಾಗಿದೆ.
ಇದರಿಂದ ಆಕ್ರೋಶಗೊಂಡಿದ್ದ ಸೆ.21ರಂದು ರಾಜೇಶ್ ಮೇಲೆ ಜಾನ್ಪಾಲ್ ಹಾಗೂ ಈತನ ಸಹೋದರರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎನ್ನಲಾಗಿದೆ.
Next Story