Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿ ಸಂಸ್ಕೃತಿ,...

ದೇಶದಲ್ಲಿ ಸಂಸ್ಕೃತಿ, ಪ್ರಜಾಪ್ರಭುತ್ವಕ್ಕೆ ದೊಡ್ಡ ಗಂಡಾಂತರ: ಪ್ರಶಾಂತ್ ಭೂಷಣ್

ವಾರ್ತಾಭಾರತಿವಾರ್ತಾಭಾರತಿ11 Oct 2020 8:03 PM IST
share
ದೇಶದಲ್ಲಿ ಸಂಸ್ಕೃತಿ, ಪ್ರಜಾಪ್ರಭುತ್ವಕ್ಕೆ ದೊಡ್ಡ ಗಂಡಾಂತರ: ಪ್ರಶಾಂತ್ ಭೂಷಣ್

ಬೆಂಗಳೂರು, ಅ. 11: ದೇಶದ ಪರಿಸರ, ಸಮಾಜ, ಸಂಸ್ಕೃತಿ ಮತ್ತು ಪ್ರಜಾಪ್ರಭುತ್ವದ ಅಸ್ತಿತ್ವಕ್ಕೆ ದೊಡ್ಡ ಗಂಡಾಂತರ ಬಂದಿದೆ. ಅವುಗಳು ಉಳಿಯದಿದ್ದರೆ ಮನುಕುಲವೂ ಉಳಿಯುವುದಿಲ್ಲ. ಇದರ ಬಗ್ಗೆ ಪ್ರತಿಯೊಬ್ಬರೂ ಗಂಭೀರವಾಗಿ ಯೋಚನೆ ಮಾಡಬೇಕು ಎಂದು ಸುಪ್ರೀಂಕೋರ್ಟಿನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಜನಾಂದೋಲಗಳ ಮಹಾಮೈತ್ರಿ ವೇದಿಕೆ ವತಿಯಿಂದ ಆನ್‍ಲೈನ್‍ನಲ್ಲಿ ಆಯೋಜಿಸಿದ್ದ ಸಮುದಾಯದ ಕಡೆಗೆ ಜನಾಂದೋಲನಗಳ ಮಹಾಮೈತ್ರಿ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇಶದ ಪ್ರಸ್ತುತ ದುಸ್ಥಿತಿ ಮತ್ತು ಪ್ರಜಾತಂತ್ರದ ಮರು ಸ್ಥಾಪನೆ ವಿಷಯದ ಕುರಿತು ಮಾತನಾಡಿದರು.

ಇಂದು ದೇಶವನ್ನಾಳುತ್ತಿರುವವರು ಇಡೀ ದೇಶವನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಅದರ ಭಾಗವಾಗಿಯೇ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ವಹಿಸಲಾಗುತ್ತಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ದಲಿತ, ಅಲ್ಪಸಂಖ್ಯಾತರು, ಬಡವರು, ಮಹಿಳೆಯರಿಗೆ ರಕ್ಷಣೆಯಿಲ್ಲದಂತಾಗಿದೆ. ಜನರ ವಾಕ್ ಸ್ವಾತಂತ್ರ್ಯವನ್ನೇ ಕಸಿಯಲು ಮುಂದಾಗಿದ್ದಾರೆ ಎಂದು ದೂರಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತಿ ಮುಖ್ಯ ಕೆಲಸ ನಿರ್ವಹಿಸುವ ಮಾಧ್ಯಮಗಳನ್ನೇ ಕೇಂದ್ರ ಸರಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಯಾವ ಮಾಧ್ಯಮ ಸಂಸ್ಥೆಗಳು ಕೇಂದ್ರದ ಅಣತಿಯಂತೆ ಕೆಲಸ ನಿರ್ವಹಿಸುವುದಿಲ್ಲವೋ ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲ ರೀತಿಯ ತಂತ್ರಗಳನ್ನು ಬಳಸಿಕೊಂಡು ಮಾಧ್ಯಮಗಳ ಮೂಲಕ ಸಮಾಜದಲ್ಲಿ ಸುಳ್ಳು ಬಿತ್ತಲಾಗುತ್ತಿದೆ ಎಂದು ತಿಳಿಸಿದರು.

ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿಕೊಂಡು ಬರುತ್ತಿದ್ದ ಕೇಂದ್ರ ಚುನಾವಣಾ ಆಯೋಗವು ಪಕ್ಷಪಾತಿಯಾಗಿದೆ. ಸುಪ್ರೀಂಕೋರ್ಟಿನ ನ್ಯಾಯಾಧೀಶರ ಕೊಲಿಜಿಯಂ ಮೂಲಕ ನ್ಯಾಯಮೂರ್ತಿಗಳನ್ನು ನೇಮಿಸುವುದರ ಬದಲು ಹೊಸ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆದಿದೆ. ಅತಿ ದೊಡ್ಡ ಹೋರಾಟದ ನಂತರವೂ ಲೋಕಪಾಲರನ್ನು ಸರಕಾರ ನೇಮಕ ಮಾಡಿಲ್ಲ. ಕೇಂದ್ರ ವಿಚಕ್ಷಣಾ ದಳಕ್ಕೆ ಭ್ರಷ್ಟರನ್ನು ನೇಮಕ ಮಾಡಿ, ಅದನ್ನು ಕುಲಗೆಡಿಸಿದೆ. ಕೇಂದ್ರ ಮಾನವ ಹಕ್ಕುಗಳ ಆಯೋಗವನ್ನು ಇದೇ ರೀತಿ ಹಾಳು ಮಾಡಿದೆ ಎಂದು ಆರೋಪಿಸಿದರು.

ದೇಶದಾದ್ಯಂತ ಕೊರೋನ ಮಹಾಮಾರಿ ತಲೆದೋರಿದೆ. ಇಂತಹ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸಬೇಕಾದ ಸರಕಾರವು ಗೋ ಕರೋನ ಗೋ ಹೇಳಿ, ಜಾಗಟೆ, ಗಂಟೆ ಬಾರಿಸಲು ಹೇಳುತ್ತಿದ್ದಾರೆ. ಮತ್ತೊಂದು ಕಡೆ ಪ್ರಧಾನಿ ಸೇರಿದಂತೆ ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರು ಜನರ ಧಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಾಂತ್ ಭೂಷಣ್ ದೂರಿದರು.

ಭ್ರಷ್ಟಾಚಾರ ನಿಗ್ರಹ ಕಾಯ್ದೆಯನ್ನು ತಿದ್ದುಪಡಿ ಮಾಡಲಾಗಿದ್ದು, ಕೇಂದ್ರದ ಅನುಮತಿಯಿಲ್ಲದೇ ಯಾವುದೇ ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆ ನಡೆಸುವಂತಿಲ್ಲ. ಈಗ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಜೆಎನ್ಯೂ, ದಿಲ್ಲಿ ಕೇಂದ್ರೀಯ ವಿವಿ, ಅಲಿಘರ್ ವಿವಿ ಸೇರಿದಂತೆ ಪ್ರಜಾಪ್ರಭುತ್ವ, ಸಮಾನತೆ ಬಗ್ಗೆ ಮಾತನಾಡುವ ವಿವಿಗಳ ಮೇಲೆ ಕೇಂದ್ರದ ಕಣ್ಣು ಬಿದ್ದಿದ್ದು, ಅದನ್ನು ಮುಚ್ಚುವ ಹುನ್ನಾರ ನಡೆಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿ.ಎಸ್.ನಾಗಭೂಷಣ್, ಎಸ್.ಆರ್.ಹೀರೇಮಠ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X