Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 4 ಯುವಕರ ಮೇಲೆ ಹೇರಲಾದ ಎನ್‍ಎಸ್‍ಎ...

4 ಯುವಕರ ಮೇಲೆ ಹೇರಲಾದ ಎನ್‍ಎಸ್‍ಎ ರದ್ದುಗೊಳಿಸಿದ ಮಧ್ಯ ಪ್ರದೇಶ ಹೈಕೋರ್ಟ್

ರಾಜ್ಯ ಸರಕಾರಕ್ಕೆ ದಂಡ ಪಾವತಿಸಲು ಆದೇಶ

ವಾರ್ತಾಭಾರತಿವಾರ್ತಾಭಾರತಿ12 Oct 2020 4:08 PM IST
share
4 ಯುವಕರ ಮೇಲೆ ಹೇರಲಾದ ಎನ್‍ಎಸ್‍ಎ ರದ್ದುಗೊಳಿಸಿದ ಮಧ್ಯ ಪ್ರದೇಶ ಹೈಕೋರ್ಟ್

ಭೋಪಾಲ್: ಕಳೆದ ವರ್ಷ ಮಧ್ಯ ಪ್ರದೇಶದ ರಾಜಘರ್ ಜಿಲ್ಲೆಯಲ್ಲಿ ಮುಹರ್ರಂ ಮೆರವಣಿಗೆ ವೇಳೆ ಕತ್ತಿಗಳನ್ನು ಹೊಂದಿದ್ದರೆಂಬ ಕಾರಣಕ್ಕೆ ಈ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ನಾಲ್ಕು ಮಂದಿ ಯುವಕರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ ಹೇರಿದ ಪ್ರಕರಣದಲ್ಲಿ ಅಕ್ಟೋಬರ್ 6ರಂದು ತೀರ್ಪು ನೀಡಿದ ಮಧ್ಯ ಪ್ರದೇಶ ಹೈಕೋರ್ಟಿನ ಇಂದೋರ್ ವಿಭಾಗೀಯ ಪೀಠ ನಾಲ್ವರ ವಿರುದ್ಧ ಹೇರಲಾದ ರಾಷ್ಟ್ರೀಯ ಭದ್ರತಾ ಕಾಯಿದೆಯನ್ನು ರದ್ದುಗೊಳಿಸಿದೆಯಲ್ಲದೆ ಅವರ ಬಂಧನ ಆದೇಶ ಕುರಿತಂತೆ 'ತಪ್ಪು ಹೇಳಿಕೆ' ಸಲ್ಲಿಸಿದ ರಾಜ್ಯ ಸರಕಾರಕ್ಕೆ ರೂ. 10,000 ದಂಡ ವಿಧಿಸಿದೆ. "ತಲಾ ಪ್ರಕರಣಕ್ಕೆ ರೂ. 10,000 ಕಾನೂನು ವೆಚ್ಚ ಪಾವತಿಸಿ,'' ಎಂದು ನ್ಯಾಯಾಲಯ ಆದೇಶಿಸಿದೆ ಎಂದು thewire.in ವರದಿ ಮಾಡಿದೆ.

ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ನಾಲ್ವರ ಪೈಕಿ 19 ವರ್ಷದ ಹಕೀಂ ಎಂಬಾತನ ಹಿರಿಯ ಸೋದರ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ವೇಳೆ ಜಸ್ಟಿಸ್ ಎಸ್ ಸಿ ಶರ್ಮ ಹಾಗೂ ಶೈಲೇಂದ್ರ ಶುಕ್ಲಾ ಅವರ  ಪೀಠ ಮೇಲಿನ ಆದೇಶ ನೀಡಿದೆ.

ಹಕೀಂ ಹಾಗೂ ಮೂವರು ಇತರರ ವಿರುದ್ಧ ಕಳೆದ ವರ್ಷದ ಮುಹರ್ರಂ ಮೆರವಣಿಗೆಯಲ್ಲಿ ಕತ್ತಿ ಹೊಂದಿದ್ದಕ್ಕಾಗಿ ರಾಷ್ಟ್ರೀಯ ಭದ್ರತಾ ಕಾಯಿದೆ ಹೇರಿ ಕಲೆಕ್ಟರ್ ಈ ವರ್ಷದ ಸೆಪ್ಟೆಂಬರ್ 4ರಂದು ಆದೇಶ ಹೊರಿಡಿದ್ದರು. ಒಬ್ಬನ ಹೊರತಾಗಿ ಆರೋಪಿಗಳ ಪೈಕಿ ಇತರರಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಯಿರಲಿಲ್ಲ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಸರಿಯಾಗಿ ವಿವೇಚಿಸದೆ ಈ ಕ್ರಮ ಕೈಗೊಂಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣದ ತೀರ್ಪು ನೀಡುವ ವೇಳೆ ನ್ಯಾಯಾಲಯವು ಕಳೆದ ತಿಂಗಳು ಹೈಕೋರ್ಟಿನ ಇಂದೋರ್ ಪೀಠ ನೀಡಿದ್ದ ತೀರ್ಪನ್ನು ಕೂಡ ಉಲ್ಲೇಖಿಸಿದೆ. ಸೆಪ್ಟೆಂಬರ್ 15ರಂದು ನೀಡಲಾದ ಈ ತೀರ್ಪಿನಲ್ಲಿ ಆಗಸ್ಟ್ 30ರಂದು ಮುಹರ್ರಂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಐದು ಮಂದಿ ಮುಸ್ಲಿಮರ ವಿರುದ್ಧ ಎನ್‍ಎಸ್‍ಎ ಹೇರಿದ್ದ ಇಂದೋರ್ ಕಲೆಕ್ಟರ್ ಅವರ ಕ್ರಮವನ್ನು ನ್ಯಾಯಾಲಯ ರದ್ದುಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X