ಬೆಳೆ ದರ್ಶಕ್ ಆ್ಯಪ್-2020 : ಬೆಳೆಯ ಆಕ್ಷೇಪಣೆ ಸಲ್ಲಿಸಲು ಅವಕಾಶ
ಮಂಗಳೂರು, ಅ.12: ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮೂಲಕ ಮುಂಗಾರು ಹಂಗಾಮಿನಲ್ಲಿ ರೈತರ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿ ಯನ್ನು ಸಂಗ್ರಹಿಸಲಾಗಿದೆ. ಸರಕಾರವು ಈ ಬೆಳೆಗಳ ಮಾಹಿತಿಯನ್ನು ಬೆಳೆ ವಿಮೆ, ಕನಿಷ್ಠ ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರದಂತಹ ಯೋಜನೆಗಳಿಗೆ ಬಳಸಲಿರುವುದರಿಂದ ಬೆಳೆ ಮಾಹಿತಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ‘ಬೆಳೆ ದರ್ಶಕ್-2020’ ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗಿದ್ದು, ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅ.15ರವರೆಗೆ ಅವಕಾಶ ಕಲ್ಪಿಸಲಾಗಿದೆ.
ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್ ತಂತ್ರಾಂಶದ ಮೂಲಕ ಬೆಳೆ ಮಾಹಿತಿ/ವಿಸ್ತೀರ್ಣದ ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಬಹುದು. ಬೆಳೆ ಸಮೀಕ್ಷೆ ಮಾಹಿತಿ ಪ್ರಕಾರ ಯಾವುದೇ ಬೆಳೆ ಮಾಹಿತಿ ಲಭ್ಯವಿಲ್ಲದ ರೈತರು ತಾವು ಬೆಳೆ ಬೆಳೆದಿರುವುದಾಗಿ ಹಾಗೂ ಬೆಳೆಯ ವ್ಯತ್ಯಾಸವಿದ್ದಲ್ಲಿ, ಬೆಳೆ ಮಾಹಿತಿ ಪ್ರಕಾರ ಪಾಳು/ಕಟಾವಾದ ಪ್ರದೇಶ ಎಂದು ನಮೂದಿಸಿದ್ದು, ರೈತರು ತಾವು ಬೆಳೆ ಬೆಳೆದಿರುವುದಾಗಿ ಆಕ್ಷೇಪಣೆ ವ್ಯಕ್ತಪಡಿಸಬ ಹುದು ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಪ್ರಕಟನೆ ತಿಳಿಸಿದೆ.





