Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಜೂನ್‌ನಿಂದ 18,006 ಟನ್...

ಭಾರತದಲ್ಲಿ ಜೂನ್‌ನಿಂದ 18,006 ಟನ್ ಕೊರೋನ ತ್ಯಾಜ್ಯ ಉತ್ಪತ್ತಿ: ಮಹಾರಾಷ್ಟ್ರದಲ್ಲಿ ಅತ್ಯಧಿಕ

ವಾರ್ತಾಭಾರತಿವಾರ್ತಾಭಾರತಿ12 Oct 2020 9:38 PM IST
share
ಭಾರತದಲ್ಲಿ ಜೂನ್‌ನಿಂದ 18,006 ಟನ್ ಕೊರೋನ ತ್ಯಾಜ್ಯ ಉತ್ಪತ್ತಿ: ಮಹಾರಾಷ್ಟ್ರದಲ್ಲಿ ಅತ್ಯಧಿಕ

ಹೊಸದಿಲ್ಲಿ, ಅ.12: ಭಾರತದಲ್ಲಿ ಕಳೆದ 4 ತಿಂಗಳಲ್ಲಿ 18,006 ಟನ್‌ನಷ್ಟು ಕೋವಿಡ್-19 ಜೈವಿಕ ವೈದ್ಯಕೀಯ ತ್ಯಾಜ್ಯ ಉತ್ಪತ್ತಿಯಾಗಿದ್ದು ಇದರಲ್ಲಿ ಮಹಾರಾಷ್ಟ್ರದ ಪಾಲು 3,587 ಟನ್‌ಗಳಾಗಿವೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ)ಯ ಅಂಕಿಅಂಶ ತಿಳಿಸಿದೆ. ಸೆಪ್ಟಂಬರ್ ತಿಂಗಳೊಂದರಲ್ಲೇ ಸುಮಾರು 5,500 ಟನ್ ಕೋವಿಡ್-19 ತ್ಯಾಜ್ಯ ಉತ್ಪತ್ತಿಯಾಗಿದೆ. ಕೊರೋನ ತ್ಯಾಜ್ಯಗಳ ಸಂಗ್ರಹ, ಸಂಸ್ಕರಣೆ ಮತ್ತು ವಿಲೇವಾರಿಯನ್ನು 198 ಸಾಮಾನ್ಯ ಜೈವಿಕ ವೈದ್ಯಕೀಯ ತ್ಯಾಜ್ಯ ಸಂಸ್ಕರಣಾ ಕೇಂದ್ರ(ಸಿಬಿಡಬ್ಲುಟಿಎಫ್‌ಎಸ್)ಗಳ ಮೂಲಕ ನಿರ್ವಹಿಸಲಾಗಿದೆ. ಜೂನ್‌ನಿಂದ ಸೆಪ್ಟಂಬರ್‌ವರೆಗಿನ 4 ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ 3,587 ಟನ್, ತಮಿಳುನಾಡು 1,737 ಟನ್, ಗುಜರಾತ್ 1,638 ಟನ್, ಕೇರಳ 1,516 ಟನ್, ಉತ್ತರಪ್ರದೇಶ 1,432 ಟನ್, ದಿಲ್ಲಿ 1,400 ಟನ್, ಕರ್ನಾಟಕ 1,380 ಟನ್ ಮತ್ತು ಪಶ್ಚಿಮ ಬಂಗಾಳದಲ್ಲಿ 1,000 ಟನ್ ಕೊರೋನ ತ್ಯಾಜ್ಯ ಉತ್ಪತ್ತಿಯಾಗಿದೆ. ಸೆಪ್ಟಂಬರ್‌ನಲ್ಲಿ ಸುಮಾರು 5,500 ಟನ್ ಕೊರೋನ ತ್ಯಾಜ್ಯ ಉತ್ಪತ್ತಿಯಾಗಿದ್ದು ಇದರಲ್ಲಿ ಗುಜರಾತ್‌ನ ಪಾಲು ಅಧಿಕವಾಗಿದೆ(622 ಟನ್). ಆ ಬಳಿಕದ ಸ್ಥಾನಗಳಲ್ಲಿ ತಮಿಳುನಾಡು(543 ಟನ್), ಮಹಾರಾಷ್ಟ್ರ(524 ಟನ್), ಉತ್ತರಪ್ರದೇಶ (507 ಟನ್) ಮತ್ತು ಕೇರಳ(494 ಟನ್) ರಾಜ್ಯವಿದೆ. ದಿಲ್ಲಿಯಲ್ಲಿ 382 ಟನ್ ತ್ಯಾಜ್ಯ ಉತ್ಪತ್ತಿಯಾಗಿದೆ.

ಆರೋಗ್ಯ ಕೇಂದ್ರಗಳು, ಕ್ವಾರಂಟೈನ್ ಕೇಂದ್ರಗಳು, ಮನೆ, ಸ್ಯಾಂಪಲ್ ಸಂಗ್ರಹ ಕೇಂದ್ರಗಳು, ಪ್ರಯೋಗಾಲಯಗಳು, ಮಾಲಿನ್ಯ ನಿಯಂತ್ರಣ ಮಂಡಳಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಸಾಮಾನ್ಯ ಜೈವಿಕ ವೈದ್ಯಕೀಯ ತ್ಯಾಜ್ಯ ಸಂಸ್ಕರಣಾ ಕೇಂದ್ರ(ಸಿಬಿಡಬ್ಲುಟಿಎಫ್‌ಎಸ್)ಗಳಿಗೆ ಕೊರೋನ ತ್ಯಾಜ್ಯದ ನಿರ್ವಹಣೆ, ಸಂಸ್ಕರಣೆ ಹಾಗೂ ವಿಲೇವಾರಿ ಕುರಿತಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಕಳೆದ ಮಾರ್ಚ್‌ನಲ್ಲಿ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ. ಅಲ್ಲದೆ ‘ಕೋವಿಡ್19ಬಿಡಬ್ಲುಎಂ’ ಮೊಬೈಲ್ ಆ್ಯಪ್ ಅನ್ನೂ ಬಿಡುಗಡೆಗೊಳಿಸಿದೆ. ಈ ಆ್ಯಪ್ ಮೂಲಕ ಕೊರೋನ ಸೋಂಕಿನ ಉತ್ಪಾದನೆ, ಸಂಗ್ರಹ ಮತ್ತು ವಿಲೇವಾರಿ ಪ್ರಕ್ರಿಯೆಯನ್ನು ಗಮನಿಸಬಹುದಾಗಿದೆ. ನಗರ ಸ್ಥಳೀಯ ಸಂಸ್ಥೆಗಳು ಮತ್ತು ರಾಜ್ಯದ ಮಾಲಿನ್ಯ ನಿಯಂತ್ರಣ ಮಂಡಳಿಗಳು ಈ ಆ್ಯಪ್ ಬಳಸುವುದನ್ನು ಸುಪ್ರೀಂಕೋರ್ಟ್ ಕಡ್ಡಾಯಗೊಳಿಸಿದೆ.

ಕೊರೋನ ಬಯೋಮೆಡಿಕಲ್ ತ್ಯಾಜ್ಯ

ಪಿಪಿಇ ಕಿಟ್‌ಗಳು, ಮಾಸ್ಕ್‌ಗಳು, ಶೂ ಕವರ್, ಕೈಗವಸು, ಮಾನವ ಅಂಗಾಂಶಗಳು, ರಕ್ತ, ದೇಹದ ದ್ರವಗಳು ಅಂಟಿಕೊಂಡಿರುವ ಬ್ಯಾಂಡೇಜ್, ಪ್ಲಾಸ್ಟಿಕ್ ವಸ್ತುಗಳು, ಹತ್ತಿಯ ಬಟ್ಟೆ, ರಕ್ತ ಅಥವಾ ದೇಹದ ದ್ರವ ಅಂಟಿಕೊಂಡಿರುವ ಹಾಸಿಗೆಯ ಬಟ್ಟೆಗಳು, ರಕ್ತದ ಚೀಲಗಳು, ಇಂಜೆಕ್ಷನ್ ಸೂಜಿಗಳು, ಸಿರಿಂಜ್‌ಗಳು ಕೊರೋನ ಬಯೋಮೆಡಿಕಲ್ ತ್ಯಾಜ್ಯಗಳಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X