Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಾ.ಟಿ.ಎಂ.ಎ.ಪೈ, ಮಲ್ಪೆ ಮಧ್ವರಾಜ್,...

ಡಾ.ಟಿ.ಎಂ.ಎ.ಪೈ, ಮಲ್ಪೆ ಮಧ್ವರಾಜ್, ನಾರಾಯಣ ಭಟ್ ಸ್ಮಾರಕ: 41ನೇ ರಂಗಭೂಮಿ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ13 Oct 2020 6:58 PM IST
share

ಉಡುಪಿ, ಅ.13:ರಾಜ್ಯದ ಹೆಸರಾಂತ ಹವ್ಯಾಸಿ ನಾಟಕ ಸಂಸ್ಥೆಯಾದ ರಂಗಭೂಮಿ ಉಡುಪಿ, ತನ್ನ 55ನೇ ವರ್ಷದಲ್ಲಿ ಇದೇ ಡಿಸೆಂಬರ್ ತಿಂಗಳ 3 ಅಥವಾ 4ನೇ ವಾರದಲ್ಲಿ ಡಾ.ಟಿ.ಎಂ.ಎ.ಪೈ, ಮಲ್ಪೆ ಮಧ್ವರಾಜ್ ಮತ್ತು ಎಸ್.ಎಲ್. ನಾರಾಯಣ ಭಟ್ ಸ್ಮಾರಕ ರಾಜ್ಯ ಮಟ್ಟದ 41ನೇ ಕನ್ನಡ ನಾಟಕ ಸ್ಪರ್ಧೆಯನ್ನು ಈ ಬಾರಿ ಕೋವಿಡ್-19ಕ್ಕೆ ಸಂಬಂಧಿಸಿದಂತೆ ಸರಕಾರದ ಮಾರ್ಗಸೂಚಿಗೆ ಅನುಗುಣವಾಗಿ ನಡೆಸಲಿದೆ.

ರಾಜ್ಯದ (ಕಾಸರಗೋಡು ಸಹಿತ) ಯಾವುದೇ ಪ್ರದೇಶದ ಹವ್ಯಾಸಿ ನಾಟಕ ತಂಡಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಕನಿಷ್ಠ ಒಂದೂವರೆ ಗಂಟೆಯಿಂದ ಗರಿಷ್ಠ ಎರಡೂಕಾಲು ಗಂಟೆ ಅವಧಿಯ ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ ಅಥವಾ ಯಾವುದೇ ಪ್ರಕಾರದ ಕನ್ನಡ ನಾಟಕವನ್ನು ಪ್ರದರ್ಶನ ಮಾಡಬಹುದು. ಕೊರೋನಾ ಸಮಸ್ಯೆಯಿಂದಾಗಿ ಈ ಬಾರಿ ಸ್ಪರ್ಧೆಗೆ ಗರಿಷ್ಠ 7 ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು.

ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ ಅನುಕ್ರಮವಾಗಿ ರೂ. 35,000, ರೂ.25,000, ರೂ.15,000ದ ನಗದು ಬಹುಮಾನಗಳನ್ನು ಹಾಗೂ ಪರ್ಯಾಯ ಫಲಕಗಳನ್ನು ನೀಡಲಾಗುವುದು. ಅಲ್ಲದೆ ಶ್ರೇಷ್ಠ ನಿರ್ದೇಶನ, ನಟ, ನಟಿ, ಸಂಗೀತ, ಬೆಳಕು, ರಂಗಪರಿಕರ, ಪ್ರಸಾಧನ, ಬಾಲನಟನೆ/ಹಾಸ್ಯ ಪಾತ್ರಗಳಿಗೂ ನಗದು ಸಹಿತ ಬಹುಮಾನ ನೀಡಲಾಗುವುದು.

ಭಾಗವಹಿಸುವ ತಂಡಗಳಿಗೆ ಉಚಿತ ಊಟ, ವಸತಿ ಜೊತೆಗೆ ಉಡುಪಿಗೆ ಹೋಗಿ ಬರುವ ಒಟ್ಟು ದೂರಕ್ಕೆ ಕನಿಷ್ಠ ರೂ. 1500ರಿಂದ, ಗರಿಷ್ಠ 10,000ರೂ. ಪ್ರಯಾಣ ವೆಚ್ಚವನ್ನು ನೀಡಲಾಗುವುದು.

ಭರ್ತಿ ಮಾಡಿದ ಪ್ರವೇಶ ಪತ್ರವನ್ನು ಸ್ವೀಕರಿಸಲು ನವಂಬರ್ 4 ಕೊನೆಯ ದಿನವಾಗಿರುತ್ತದೆ. ಆಸಕ್ತ ತಂಡಗಳು ಪ್ರವೇಶ ಪತ್ರಕ್ಕಾಗಿ ಪ್ರದೀಪ್‌ಚಂದ್ರ ಕುತ್ಪಾಡಿ, ಪ್ರಧಾನ ಕಾರ್ಯದರ್ಶಿ, ‘ರಂಗಭೂಮಿ’, ಕುತ್ಪಾಡಿ, ಉಡುಪಿ- 574118 ಇವರಿಗೆ ಬರೆಯಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9448952847(ಪ್ರದೀಪ್‌ಚಂದ್ರ ಕುತ್ಪಾಡಿ) ಅಥವಾ ಉಪಾಧ್ಯಕ್ಷರಾದ ನಂದ ಕುಮಾರ್ ಎಂ. (9980524431) ಹಾಗೂ ಭಾಸ್ಕರ ರಾವ್ ಕಿದಿಯೂರು (9844742166) ಇವರನ್ನು ಸಂಪರ್ಕಿಸಬಹುದು.

ಅದೇ ರೀತಿ ಸ್ಪರ್ಧೆ ನಡೆಯುವ ಸಮಯದಲ್ಲಿ ಸರಕಾರದ ಕೋವಿಡ್-19ರ ಮಾರ್ಗಸೂಚಿ/ನಿಬಂಧನೆಗಳಲ್ಲಿ ಬದಲಾವಣೆಗಳಾದಲ್ಲಿ ಅದಕ್ಕೆ ತಮ್ಮ ಸಂಸ್ಥೆಯು ಬದ್ಧವಾಗಿರುತ್ತದೆ ಎಂದು ರಂಗಭೂಮಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X