Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಸ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಹಸಿಕಸ...

ಕಸ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಹಸಿಕಸ ಯೋಜನೆ ಅನುಷ್ಠಾನ: ಬಿಬಿಎಂಪಿ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ13 Oct 2020 10:59 PM IST
share
ಕಸ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಹಸಿಕಸ ಯೋಜನೆ ಅನುಷ್ಠಾನ: ಬಿಬಿಎಂಪಿ ಚಿಂತನೆ

ಬೆಂಗಳೂರು, ಅ.13: ನಗರದಲ್ಲಿ ಕಸ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಒಂದು ನಿರ್ದಿಷ್ಟ ಚೌಕಟ್ಟು ರೂಪುಗೊಳ್ಳುತ್ತಿದ್ದು, ಪಾಲಿಕೆ ಇದೀಗ ಯಲಹಂಕ ಸೇರಿದಂತೆ 74 ವಾರ್ಡ್ ಗಳಲ್ಲಿ ಹಸಿ ಕಸ ಯೋಜನೆ ಅನುಷ್ಠಾನಕ್ಕೆ ಮುಂದಾಗಿದೆ.

ನಗರದಲ್ಲಿ ಈಗಾಗಲೇ 38 ವಾರ್ಡ್ ನಲ್ಲಿ ಪ್ರತ್ಯೇಕ ಹಸಿ ಕಸ ಯೋಜನೆ ಜಾರಿಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 26 ವಾರ್ಡ್‍ಗಳಲ್ಲಿ ಈ ಯೋಜನೆ ಜಾರಿಯಾಗಿದೆ. ನಗರದಲ್ಲಿ ಮೂಲ ಹಂತದಲ್ಲೇ ಕಸ ವಿಂಗಡಣೆ ಆಗದೆ ಇರುವುದು ಹಾಗೂ ಒಟ್ಟಿಗೆ ಸಂಗ್ರಹಿಸಿ ಭೂ ಭರ್ತಿಗೆ ಹಾಕುವುದು ಸೇರಿದಂತೆ ಎಲ್ಲಾ ಸಮಸ್ಯೆ ತಪ್ಪಿಸಲು ಹಸಿಕಸವನ್ನು ಪ್ರತ್ಯೇಕವಾಗಿ ಸಂಗ್ರಹ ಮಾಡುವ ಯೋಜನೆಗೆ ಸೆಪ್ಟೆಂಬರ್ ನಲ್ಲಿ ಪಾಲಿಕೆ ಚಾಲನೆ ನೀಡಿತ್ತು.

ಇದರ ಬೆನ್ನಲ್ಲೇ ಬಾಕಿ ವಾರ್ಡ್‍ಗಳಲ್ಲೂ ಪ್ರತ್ಯೇಕ ಕಸ ಸಂಗ್ರಹ ಯೋಜನೆ ಪ್ರಾರಂಭವಾಗುತ್ತಿದ್ದು, ಹೊಸದಾಗಿ 10 ವಾರ್ಡ್‍ಗಳಲ್ಲಿ ಟೆಂಡರ್ ದಾರರಿಗೆ ಕಾರ್ಯಾದೇಶ ಪತ್ರ ನೀಡಲಾಗಿದೆ. ಇನ್ನು ಟೆಂಡರ್ ನಲ್ಲಿ ಕಡಿಮೆ ಬಿಡ್ ಮಾಡಿ ಯೋಜನೆ ಅನುಷ್ಠಾನಕ್ಕೆ ಹಿಂದೇಟು ಹಾಕುತ್ತಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಪಾಲಿಕೆ ತೀರ್ಮಾನಿಸಿದೆ.

ಒಂದು ವರ್ಷ ಕಪ್ಪು ಪಟ್ಟಿಗೆ: ನಗರದಲ್ಲಿ ಪ್ರತ್ಯೇಕ ಕಸ ಸಂಗ್ರಹ ಮಾಡುವ ಯೋಜನೆಯ ಟೆಂಡರ್ ನಲ್ಲಿ ಭಾಗವಹಿಸಿ ಅದರ ಅನುಷ್ಠಾನದಲ್ಲಿ ಲೋಪವೆಸಗುವ ಹಾಗೂ ಹಿಂದೇಟು ಹಾಕುವ ಗುತ್ತಿಗೆದಾರರು 1 ವರ್ಷ ಕಪ್ಪುಪಟ್ಟಿಗೆ ಸೇರಿಸಲು ತೀರ್ಮಾನಿಸಲಾಗಿದೆ.

ಮರು ಟೆಂಡರ್ ಮಾಡಲು ನಿರ್ಧಾರ: ದೇವರ ಜೀವನಹಳ್ಳಿ, ಸಗಾಯಪುರ ಸೇರಿ 9 ವಾರ್ಡ್‍ಗಳಲ್ಲಿ ಟೆಂಡರ್ ದಾರರು ಹಿಂದೇಟು ಹಾಗೂ ಹಾಲಿ ಟೆಂಡರ್ ನಲ್ಲಿ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಗೆ 9 ವಾರ್ಡ್‍ಗಳಲ್ಲಿ ಮರುಟೆಂಡರ್ ಕರೆಯಲು ಪಾಲಿಕೆ ನಿರ್ಧರಿಸಿದೆ.

ಕೆಂಪೇಗೌಡ ವಾರ್ಡ್, ಚೌಡೇಶ್ವರಿ ವಾರ್ಡ್, ಅಟ್ಟೂರು, ವಿದ್ಯಾರಣ್ಯಪುರ, ವಿಜಿನಾಪುರ, ಬಸವನಪುರ, ಹೂಡಿ, ಗರುಡಾಚಾರಪಾಳ್ಯ, ಗೋವಿಂದರಾಜ ನಗರ, ಮೂಡಲಪಾಳ್ಯ, ನಾಗರಬಾವಿ, ನಾಯಂಡ ಹಳ್ಳಿ, ರಾಯಪುರ, ಛಲವಾದಿ ಪಾಳ್ಯ, ಅಜಾದ್‍ನಗರ, ಲಕ್ಕಸಂದ್ರ, ಆಡುಗೋಡಿ, ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ವಾರ್ಡ್, ದೀಪಾಂಜಲಿ ನಗರ, ಹೊಸಕೆರೆ ಹಳ್ಳಿ, ಗಣೇಶ ಮಂದಿರ, ಯಡಿಯೂರು, ಬೈರಸಂದ್ರ, ಬೊಮ್ಮನಹಳ್ಳಿ, ಮಂಗಮ್ಮನ ಪಾಳ್ಯ ಹಾಗೂ ಸಿಂಗಸಂದ್ರದಲ್ಲಿ ಜಾರಿಯಾಗಿದೆ.

ಒಣ ಕಸ ಸಂಗ್ರಹ ಘಟಕ ಅಭಿವೃದ್ಧಿ: ನಗರದಲ್ಲಿ 165 ಒಣಕಸ ಸಂಗ್ರಹ ಘಟಕಗಳಿವೆ. ಇದರಲ್ಲಿ 141 ಕೇಂದ್ರಗಳಲ್ಲಿ ಸಕ್ರಿಯವಾಗಿ ಒಣಕಸ ಸಂಗ್ರಹ ಮಾಡಲಾಗುತ್ತಿದೆ. ಪ್ರತ್ಯೇಕ ಕಸ ಸಂಗ್ರಹ ಯೋಜನೆ ಜಾರಿಯಾದ ಮೇಲೆ ಒಣಕಸ ಸಂಗ್ರಹ ಘಟಕಗಳ ಅಭಿವೃದ್ಧಿಗೂ ಪಾಲಿಕೆ ಮುಂದಾಗಿದೆ. ಈಗಾಗಲೇ 38 ವಾರ್ಡ್‍ಗಳಲ್ಲಿಯೂ ಒಣಕಸ ಘಟಕ ಹಾಗೂ ಸ್ತ್ರೀಶಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವ ಪಡೆದುಕೊಳ್ಳಲಾಗುತ್ತಿದೆ. ಇದಲ್ಲದೆ ಪಾಲಿಕೆಯ 8 ವಲಯಗಳ ವಿವಿಧ ಭಾಗದ 29 ಒಣಕಸ ಸಂಗ್ರಹ ಘಟಕಗಳ ನವೀಕರಣ ಕಾರ್ಯಕ್ಕೂ ಪಾಲಿಕೆ ಚಾಲನೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X