Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಆರ್‌ಸಿ ಪಟ್ಟಿಯಿಂದ 10 ಸಾವಿರ...

ಎನ್‌ಆರ್‌ಸಿ ಪಟ್ಟಿಯಿಂದ 10 ಸಾವಿರ ಅನರ್ಹರ ಹೆಸರು ಕೈಬಿಡಲು ಆದೇಶ

ವಾರ್ತಾಭಾರತಿವಾರ್ತಾಭಾರತಿ14 Oct 2020 9:48 PM IST
share
ಎನ್‌ಆರ್‌ಸಿ ಪಟ್ಟಿಯಿಂದ 10 ಸಾವಿರ ಅನರ್ಹರ ಹೆಸರು ಕೈಬಿಡಲು ಆದೇಶ

ಗುವಾಹಟಿ, ಅ.14: ರಾಷ್ಟ್ರೀಯ ಪೌರತ್ವ ನೋಂದಣಿ ಪಟ್ಟಿಯಿಂದ ‘ಅನರ್ಹ ವ್ಯಕ್ತಿಗಳ’ ಹೆಸರುಗಳನ್ನು ತೆಗೆದುಹಾಕುವಂತೆ ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿಯ ಸಮನ್ವಯಕಾರರು, ರಾಜ್ಯದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ಪೌರತ್ವ ನೋಂದಣಿ ಪಟ್ಟಿಯನ್ನು ಅಸ್ಸಾಂನಲ್ಲಿ ಕಳೆದ ವರ್ಷದ ಆಗಸ್ಟ್ 31ರಂದು ಪ್ರಕಟಿಸಲಾಗಿತ್ತು. ರಾಜ್ಯದ ಜನಸಂಖ್ಯೆಯ ಶೇ.6ರಷ್ಟು ಮಂದಿಯನ್ನು ಅಂದರೆ ಸುಮಾರು 19 ಲಕ್ಷ ಮಂದಿಯನ್ನು ಅದು ಪಟ್ಟಿಯಿಂದ ಕೈಬಿಟ್ಟಿತ್ತು.

ಎನ್‌ಆರ್‌ಸಿ ಪಟ್ಟಿಯಲ್ಲಿ ‘ಕೆಲವು ಅನರ್ಹ ವ್ಯಕ್ತಿಗಳ ಹೆಸರು ಸೇರ್ಪಡೆಯಾಗಿದೆ’ ಎಂದು ಎನ್‌ಆರ್‌ಸಿ ಸಮನ್ವಯಕಾರ ಹಿತೇಶ್ ದೇವ್ ಶರ್ಮಾ ಅವರು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ವಿದೇಶಿಯರ ನ್ಯಾಯಾಧೀಕರಣಗಳು ವಿದೇಶಿಯರೆಂದು ಘೋಷಿಸಲ್ಬಟ್ಟವರು, ಚುನಾವಣಾ ಅಧಿಕಾರಿಗಳಿಂದ ಅನುಮಾನಾಸ್ಪದ ಮತದಾರರೆಂದು ಗುರುತಿಸಲ್ಪಟ್ಟವರು ಅಥವಾ ವಿದೇಶಿಯರ ನ್ಯಾಯಾಧೀಕರಣಗಳಲ್ಲಿ ಇತ್ಯರ್ಥವಾಗದೆ ಉಳಿದಿರುವ ವ್ಯಕ್ತಿಗಳು ಹಾಗೂ ಅವರ ವಂಶಸ್ಥರು, ಎನ್‌ಆರ್‌ಸಿ ಪಟ್ಟಿಯಿಂದ ಅನರ್ಹರೆಂದು ಪರಿಗಣಿಸಲ್ಪಟ್ಟವರಲ್ಲಿ ಒಳಗೊಂಡಿದ್ದಾರೆ.

ಎನ್‌ಆರ್‌ಸಿಯಲ್ಲಿ ಒಳಗೊಳ್ಳಲು ಅನರ್ಹರೆಂದು ಗುರುತಿಸಲ್ಪಟ್ಟವರ ಹೆಸರುಗಳನ್ನೊಳಗೊಂಡ ಪಟ್ಟಿಯನ್ನು ತನಗೆ ಸಲ್ಲಿಸುವಂತೆ ಹಿತೇಶ್ ದೇವ್ ಶರ್ಮಾ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರತಿಯೊಂದು ಪ್ರಕರಣದಲ್ಲಿಯೂ ಎನ್‌ಆರ್‌ಸಿ ಪಟ್ಟಿಯಿಂದ ಆಯಾ ವ್ಯಕ್ತಿಯ ಹೆಸರನ್ನು ತೆಗೆದುಹಾಕಿರುವುದಕ್ಕೆ ಸಮರ್ಥನೀಯವಾದ ಕಾರಣವನ್ನು ನೀಡುವಂತೆಯೂ ಅವರು ಆದೇಶದಲ್ಲಿ ಸೂಚಿಸಿದ್ದಾರೆ.

ಸರಿಯಾದ ಎನ್‌ಆರ್‌ಸಿ ಪಟ್ಟಿಯನ್ನು ರಚಿಸಬೇಕಾದರೆ ಅದರಲ್ಲಿರುವ ಎಲ್ಲರ ಹೆಸರನ್ನು ಶೇ.10ರಿಂದ ಶೇ.20ರಷ್ಟು ಮರುದೃಢೀಕರಿಸಬೇಕೆಂದು ರಾಜ್ಯ ಸರಕಾರದ ನಿರಂತರ ಸೂಚನೆಯ ನಡುವೆ ಈ ಆದೇಶ ಹೊರಬಿದ್ದಿದೆ.

ಅಸ್ಸಾಂನ ಎನ್‌ಆರ್‌ಸಿ ಪಟ್ಟಿಯಲ್ಲಿ ಹಲವಾರು ಅನರ್ಹ ವ್ಯಕ್ತಿಗಳು ಹಾಗೂ ಅವರ ವಂಶಸ್ಥರ ಹೆಸರುಗಳು ಪಟ್ಟಿಯಲ್ಲಿ ಒಳಗೊಂಡಿದ್ದು, ಇದರಿಂದಾಗಿ ಸುಮಾರು 10 ಸಾವಿರ ಮಂದಿಯ ಹೆಸರುಗಳನ್ನು ಅಂತಿಮ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಈ ಆದೇಶದ ಬಗ್ಗೆ ಮಾಹಿತಿ ಹೊಂದಿರುವ ಕೆಲವು ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರು ಇತ್ತೀಚೆಗೆ ನಡೆದ ಸಾರ್ವಜನಿಕ ರ್ಯಾಲಿಯೊಂದರಲ್ಲಿ, ಹಾಲಿ ಎನ್‌ಆರ್‌ಸಿ ಪಟ್ಟಿ ಲೋಪದೋಷದಿಂದ ಕೂಡಿದ್ದು, ಸರಕಾರಕ್ಕೆ ಸರಿಯಾದ ಎನ್‌ಆರ್‌ಸಿ ಬೇಕಾಗಿದೆ ಎಂದು ಹೇಳಿದ್ದರು.

ಈ ಮಧ್ಯೆ ಎನ್‌ಆರ್‌ಸಿ ಪಟ್ಟಿಯ ಮರುದೃಢೀಕರಣ ಕೋರಿ ರಾಜ್ಯ ಸರಕಾರವು ಸಲ್ಲಿಸಿರುವ ಅರ್ಜಿಯು ಈಗಲೂ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿಯುಳಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X