Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನಿಷ್ಕ್ ಪ್ರಕರಣ: ಬೆದರಿಸುವವರ ವಿರುದ್ಧ...

ತನಿಷ್ಕ್ ಪ್ರಕರಣ: ಬೆದರಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ ಜಾಹೀರಾತು ಸಂಘಟನೆಗಳು

ವಾರ್ತಾಭಾರತಿವಾರ್ತಾಭಾರತಿ15 Oct 2020 2:21 PM IST
share
ತನಿಷ್ಕ್ ಪ್ರಕರಣ: ಬೆದರಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ ಜಾಹೀರಾತು ಸಂಘಟನೆಗಳು

ಹೊಸದಿಲ್ಲಿ: ಧಾರ್ಮಿಕ ಸಾಮರಸ್ಯದ ಸಂಕೇತದಂತಿದ್ದ ಹಾಗೂ ಸೀಮಂತ ಕಾರ್ಯಕ್ರಮವನ್ನು ಹಿಂದು-ಮುಸ್ಲಿಂ ಕುಟುಂಬವೊಂದು ಆಚರಿಸುವ  ಚಿತ್ರಣವನ್ನು ಬಿಂಬಿಸಿದ್ದ ತನಿಷ್ಕ್ ಸಂಸ್ಥೆಯ ಏಕತ್ವಂ ಚಿನ್ನಾಭರಣ ಕುರಿತಾದ ಜಾಹೀರಾತನ್ನು ಬೆದರಿಕೆಗಳ ಹಿನ್ನೆಲೆಯಲ್ಲಿ ಸಂಸ್ಥೆ ವಾಪಸ್ ಪಡೆದಿರುವ ಬೆಳವಣಿಗೆಯ ನಂತರ ಪ್ರತಿಕ್ರಿಯಿಸಿರುವ ದೇಶದ ಜಾಹೀರಾತು ಸಂಸ್ಥೆಗಳ ಅತ್ಯುನ್ನತ ಸಂಘಟನೆಗಳಾದ ಅಡ್ವರ್ಟೈಸಿಂಗ್ ಕ್ಲಬ್ ಹಾಗೂ ಇಂಟರ್‍ನ್ಯಾಷನಲ್ ಅಡ್ವರ್ಟೈಸಿಂಗ್ ಅಸೋಸಿಯೇಶನ್ನಿನ ಭಾರತೀಯ ಶಾಖೆ,   ಘಟನೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿವೆ.

ತನಿಷ್ಕ್ ಸಂಸ್ಥೆಯ ಜಾಹೀರಾತು ಯಾವುದೇ ವ್ಯಕ್ತಿ, ಸಂಸ್ಥೆ ಯಾ ಧರ್ಮಕ್ಕೆ ಯಾವುದೇ ರೀತಿಯಲ್ಲಿ ನಿಂದನಾತ್ಮಕವಾಗಿಲ್ಲ ಹಾಗೂ ಅದು ಯಾರ ಭಾವನೆಗೂ ಧಕ್ಕೆ ತರುವುದಿಲ್ಲ ಎಂದು ಅದರ ಪರಿಶೀಲನೆಯಿಂದ ತಿಳಿದು ಬಂದಿದೆ ಎಂದು ಹೇಳಿರುವ ಅಡ್ವರ್ಟೈಸಿಂಗ್ ಕ್ಲಬ್, ``ಸೃಜನಾತ್ಮಕ ಅಭಿವ್ಯಕ್ತಿಗೆ ಈ ರೀತಿಯಾಗಿ ಆಧಾರರಹಿತವಾಗಿ ನಡೆಸಲಾದ ಅಪ್ರಸ್ತುತ ದಾಳಿ ಕಳವಳಕಾರಿ,'' ಎಂದು  ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ತನಿಷ್ಕ್ ಸಂಸ್ಥೆ ತನ್ನ ಜಾಹೀರಾತು  ವಾಪಸ್ ಪಡೆಯುವುದಕ್ಕೆ ಕಾರಣವಾದ ಘಟನಾವಳಿಗಳು "ಬಹಳ ದುರದೃಷ್ಟಕರ'' ಎಂದು ಬಣ್ಣಿಸಿರುವ ಇಂಟರ್ ನ್ಯಾಷನಲ್ ಅಡ್ವರ್ಟೈಸಿಂಗ್ ಅಸೋಸಿಯೇಶನ್‍ನ ಭಾರತೀಯ ಶಾಖೆ, ನರೇಂದ್ರ ಮೋದಿ ಸರಕಾರ ಇಂತಹ ಬೆದರಿಕೆ ತಂತ್ರಗಾರಿಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

"ಪ್ರತಿಯೊಬ್ಬ ವ್ಯಕ್ತಿಯ ಅಭಿಪ್ರಾಯವನ್ನು ನಾವು ಗೌರವಿಸುತ್ತೇವೆ ಆದರೆ ಈ ರೀತಿ ಅಕ್ರಮವಾಗಿ ಬೆದರಿಕೆಯೊಡ್ಡುವುದು ಹಾಗೂ ಅನಾಗರಿಕವಾಗಿ ವರ್ತಿಸುವುದು ಸರಿಯಲ್ಲ. ಇಂತಹ ಕೃತ್ಯಗಳ ವಿರುದ್ಧ ಕ್ರಮ ಕೈಗೊಂಡು ಉದ್ದಿಮೆಗಳು ತಮ್ಮ ಜಾಹೀರಾತುಗಳ ಮೂಲಕ ತಮ್ಮ ಉತ್ಪನ್ನಗಳ ಕುರಿತಾದ ಸಂದೇಶಗಳನ್ನು ನೀಡಲು ಸುರಕ್ಷಿತ ವಾತಾವರಣ ಒದಗಿಸಬೇಕು,'' ಎಂದು ಅಸೋಸಿಯೇಶನ್ ಸರಕಾರವನ್ನು ಆಗ್ರಹಿಸಿದೆ.

#TanishqAd @AAAIOfficial @IAA_India pic.twitter.com/8dI9cBEKYH

— The Advertising Club (@TheAdClub_India) October 14, 2020

IAA steps up for freedom of lawful commercial expression.@rameshnarayan @skswamy @PradeepDwivedi @mtata0503 #tanishqadcontroversy @TanishqJewelry #advertisement pic.twitter.com/zBdhZYkIPz

— IAA India Chapter (@IAA_India) October 14, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X