Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಹೆಸರಿನಲ್ಲಿ ನಕಲಿ ಬಿಲ್: ಜಾಲ...

ರೈತರ ಹೆಸರಿನಲ್ಲಿ ನಕಲಿ ಬಿಲ್: ಜಾಲ ಭೇದಿಸಿದ ಕೃಷಿ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ15 Oct 2020 9:54 PM IST
share

ಬೆಂಗಳೂರು, ಅ.15: ರೈತರ ಹೆಸರಿನಲ್ಲಿ ನಕಲಿ ಬಿಲ್ ತಯಾರಿಸಿ ಸೊಸೈಟಿಗಳ ಜೊತೆ ಶಾಮೀಲಾಗಿ ಯೂರಿಯಾ ರಸಗೊಬ್ಬರ ಅಭಾವ ಸೃಷ್ಟಿ ಮಾಡುತ್ತಿದ್ದ ದೊಡ್ಡಜಾಲವೊಂದನ್ನು ಪತ್ತೆ ಹಚ್ಚಲಾಗಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಡಿಗಿನಬೆಲೆ ಗ್ರಾಮದ ಮರ್ಕೂರಿ ಪಾಲಿಮರ್ಸ್ ಸಂಸ್ಥೆಯು ಪ್ರಾಥಮಿಕ ಸಹಕಾರ ಸಂಘ ವೇಮಗಲ್ ಹೆಸರಿನಲ್ಲಿ ಇ-ವೇ ನಕಲಿ ಬಿಲ್ ತಯಾರಿಸಿ ರೈತರಿಗೆ ಸಬ್ಸಿಡಿ ರೂಪದಲ್ಲಿ ಕೃಷಿ ಇಲಾಖೆ ವಿತರಿಸುತ್ತಿದ್ದ ಯೂರಿಯಾ ರಸಗೊಬ್ಬರವನ್ನು ದುರುಪಯೋಗಪಡಿಸಿಕೊಂಡು ಕಾಂಟ್ರಾಕ್ಟ್ ದಾರರನ್ನು ಬುಕ್ ಮಾಡಿಕೊಂಡು ನೈಟ್ರೋಜನ್ ಎಕ್ಸ್ಟ್ರಾಕ್ಟ್ ಮಾಡಿ ಕೆಮಿಕಲ್ ತಯಾರಿಸಿ ಮಾರಾಟ ಮಾಡುತ್ತಿತ್ತು ಎನ್ನಲಾಗಿದೆ. ಇದರಿಂದ ರೈತರಿಗೆ ಗೊಬ್ಬರದ ಅಭಾವ ಸೃಷ್ಟಿಯಾಗಿರುವುದು ಕಂಡುಬಂದಿದೆ.

ಹೀಗೆ ಸಬ್ಸಿಡಿ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಮಾರಾಟ ದುರುಪಯೋಗಪಡಿಸಿಕೊಳ್ಳುತ್ತಿದ್ದ ಆರೋಪದ ಮೇಲೆ ಮರ್ಕೂರಿ ಪಾಲಿಮರ್ಸ್ ಸಂಸ್ಥೆಯ ಮಾಲಕರು ಹಾಗೂ ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಕೃಷಿ ಇಲಾಖೆ ದೂರು ದಾಖಲಿಸಿದೆ.

ಅ.14 ರಂದು ಕೋಲಾರ ಜಿಲ್ಲೆಯ ಜಾಗೃತಕೋಶದ ಸಹಾಯಕ ನಿರ್ದೇಶಕ, ಜಾರಿದಳ ಜಂಟಿ ಕೃಷಿ ನಿರ್ದೇಶಕ ಎಚ್.ಕೆ.ರಾಮಕೃಷ್ಣ ಇವರಿಗೆ ಬಂದ ಖಚಿತ ದೂರಿನ ಮೇರೆಗೆ ಕೊಡಗಿನ ಬೆಲೆ ಗ್ರಾಮದ ಮರ್ಕೂರಿ ಪಾಲಿಮರ್ಸ್ ಕಂಪೆನಿಯ ಗೋಡೌನ್ ಮೇಲೆ ದಾಳಿ ಮಾಡಿದಾಗ ಕಂಪೆನಿಗೆ ಸೇರಿದ ಲಾರಿ ಚಾಲಕ ಕೃಷಿ ಇಲಾಖೆಗೆ ಸೇರಿದ ಸುಮಾರು 440 ಯೂರಿಯಾ ಮೂಟೆಗಳನ್ನು ತನ್ನ ಮಾಲಕ ಕೃಷ್ಣಪ್ರಸಾದ್ ರೆಡ್ಡಿಯ ಸೂಚನೆ ಮೇರೆಗೆ ವೇಮಗಲ್‍ಗೆ ತೆಗೆದುಕೊಂಡು ಹೋಗದೇ ಮರ್ಕೂರಿ ಪಾಲಿಮರ್ ಗೋಡೌನ್ ಬಳಿ ಇಳಿಸಿ ದಾಸ್ತಾನು ಮಾಡಿದ್ದು ಪತ್ತೆಯಾಗಿದೆ.

ಅಲ್ಲದೇ ಈ ಯೂರಿಯಾ ಮೂಟೆಗಳು ಪ್ರಾಥಮಿಕ ಸಹಕಾರ ಸಂಘ ವೇಮಗಲ್ ಹೆಸರಿನಲ್ಲಿ ಇ-ವೇ ನಕಲಿ ಬಿಲ್ ತಯಾರಿಸಿದ್ದು ಕಂಡು ಬಂದಿದೆ. ಸ್ಥಳದಲ್ಲಿ ವಿಚಕ್ಷಣಾ ದಳ ಸುಮಾರು 1,17,260 ರೂ.ಮೌಲ್ಯದ ಯೂರಿಯಾ ಮೂಟೆಗಳನ್ನು ವಶಪಡಿಸಿಕೊಂಡಿದ್ದು, ಮಾಲೂರು ಪೆಪೊಲೀಸ್ ಠಾಣೆಯಲ್ಲಿ ಕಂಪೆನಿ ವಿರುದ್ಧ ದೂರು ದಾಖಲಾಗಿದೆ.

ಇದರ ಹಿಂದೆ ದೊಡ್ಡ ಜಾಲವೇ ಇದ್ದು, ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X