ಶಿವಮೊಗ್ಗ: ದೇವಾಲಯದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ, ಹಲ್ಲೆ
ಶಿವಮೊಗ್ಗ, ಅ.16: ಜಿಲ್ಲೆಯ ಪ್ರತಿಷ್ಠಿತ ಸಿಗಂದೂರು ದೇವಾಲಯದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ಮಾಡಲಾದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಸಿಗಂದೂರು ಧರ್ಮದರ್ಶಿ ರಾಮಪ್ಪ ಬೆಂಬಲಿಗರ ಮೇಲೆ ಪ್ರಧಾನ ಅರ್ಚಕ ಶೇಷಗಿರಿ ಭಟ್ಟರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.
ದೇವಾಲಯಕ್ಕೆ ಪೂಜೆ ಮಾಡಿಸಲು ಹೋದ ಮಂಜಯ್ಯ ಜೈನ್ ಎಂಬವರ ಮೇಲೆ ಶೇಷಗಿರಿ ಭಟ್ಟರ ಸಹೋದರರು ಹಲ್ಲೆ ನಡೆಸಿದ್ದು, ಈ ವೇಳೆ ದೇವಾಲಯದ ಆಡಳಿತ ಕಚೇರಿಯ ಗ್ಲಾಸ್ ಗಳು, ಪೀಠೋಪಕರಣಗಳನ್ನು ಕೂಡ ಧ್ವಂಸ ಮಾಡಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ ಎಂದು ತಿಳಿದುಬಂದಿದೆ.
ಅದಾಗ್ಯೂ ಎರಡು ಗುಂಪುಗಳ ಮಾತಿನ ಚಕಮಕಿ ಇನ್ನೂ ಮುಂದುವರಿದಿದೆ. ಸದ್ಯ ದೇವಾಲಯದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.
Next Story