Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ವಿವಿ 100ನೇ ಘಟಿಕೋತ್ಸವದಲ್ಲಿ...

ಮೈಸೂರು ವಿವಿ 100ನೇ ಘಟಿಕೋತ್ಸವದಲ್ಲಿ ಇನ್ಫೋಸಿಸ್ ಮುಖ್ಯಸ್ಥೆ ಡಾ.ಸುಧಾಮೂರ್ತಿಗೆ ಗೌರವ ಡಾಕ್ಟರೇಟ್

29,018 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, 654 ವಿದ್ಯಾರ್ಥಿಗಳಿಗೆ ಪಿಎಚ್‍ಡಿ

ವಾರ್ತಾಭಾರತಿವಾರ್ತಾಭಾರತಿ16 Oct 2020 9:45 PM IST
share
ಮೈಸೂರು ವಿವಿ 100ನೇ ಘಟಿಕೋತ್ಸವದಲ್ಲಿ ಇನ್ಫೋಸಿಸ್ ಮುಖ್ಯಸ್ಥೆ ಡಾ.ಸುಧಾಮೂರ್ತಿಗೆ ಗೌರವ ಡಾಕ್ಟರೇಟ್

ಮೈಸೂರು,ಅ.16: ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವ ಅ.19ರಂದು ನಡೆಯಲಿದ್ದು ಇನ್ಫೋಸಿಸ್ ಸಂಸ್ಥೆ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜೆ.ಹೇಮಂತ್ ಕುಮಾರ್ ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್‍ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 19-10-1920 ರಲ್ಲಿ ಪ್ರಥಮ ಘಟಿಕೋತ್ಸವ ಮಾಡಿದ್ದರು. ಕಾಕತಾಳೀಯವೊ ಏನೊ 19-10-2020 ಕ್ಕೆ ನೂರನೇ ಘಟಿಕೋತ್ಸವ ನಡೆಯುತ್ತಿದೆ ಎಂದು ಹೇಳಿದರು.

ನೂರನೇ ಘಟಿಕೋತ್ಸವ ಉದ್ದೇಶಿಸಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುತ್ತಿರುವುದು ಈ ಬಾರಿಯ ವಿಶೇಷ. ವರ್ಚುವಲ್ ಲೈವ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅ.19ರ ಸೋಮವಾರ ಬೆಳಿಗ್ಗೆ 11.15 ರಿಂದ 11.40 ಗಂಟೆವರೆಗೆ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

ಪದವಿ ಪ್ರಧಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಬಾಯಿ ರೂಡಾಭಾಯಿ ವಾಲಾ ಅವರು ಅಧ್ಯಕ್ಷತೆ ವಹಿಸಲಿದ್ದು, ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಭಾಗವಹಿಸಲಿದ್ದಾರೆ. ಕೊರೋನ ಹಿನ್ನಲೆ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಸಿಂಡಿಕೇಟ್ ಮತ್ತು ಶಿಕ್ಷಣ ಮಂಡಳಿಯ ಸದಸ್ಯರು ಭಾಗವಹಿಸುವರು ಎಂದು ಹೇಳಿದರು. 

29,018 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, 654 ಮಂದಿಗೆ ಪಿಹೆಚ್‍ಡಿ
ಈ ಬಾರಿ 29,018 ವಿದ್ಯಾರ್ಥಿಗಳಿಗೆ ವಿವಿದ ಪದವಿ,(18,344 ಮಂದಿ ಮಹಿಳೆಯರು ಮತ್ತು 10674 ಮಂದಿ ಪುರುಷರು), 654 ವಿದ್ಯಾರ್ಥಿಗಳಿಗೆ ಪಿಹೆಚ್‍ಡಿ(264 ಮಂದಿ ಮಹಿಳೆಯರು, 390ಮಂದಿ ಪುರುಷರು), 7971 ಮಂದಿಗೆ ಸ್ನಾತಕೋತ್ತರ ಪದವಿ, 20,393 ಮಂದಿಗೆ ಸ್ನಾತಕಪದವಿಯನ್ನು ಪ್ರದಾನ ಮಾಡಲಾಗುವುದು. ಒಟ್ಟು 392 ಪದಕಗಳು ಮತ್ತು 198 ಬಹುಮಾನಗಳನ್ನು 230 ಅಭ್ಯರ್ಥಿಗಳು ಪಡೆದುಕೊಂಡಿದ್ದು. ಈ ಸಂದರ್ಭ ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಕೂಡಾ ಪಿಹೆಚ್‍ಡಿ ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಘಟಿಕೋತ್ಸವ ಕಾರ್ಯಕ್ರಮದ ರೂಪರೇಷೆ
ಕೊರೋನ ಹಿನ್ನೆಲೆಯಲ್ಲಿ ಅತಿಹೆಚ್ಚು ಚಿನ್ನದ ಪದಕ ಪಡೆದ 30 ಮಂದಿಗೆ ಮಾತ್ರ ಬೆಳಗ್ಗೆ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗುವುದು. ಮಧ್ಯಾಹ್ನ 2.30ಕ್ಕೆ ಆಂಧ್ರ ಪ್ರದೇಶದ ಕೇಂದ್ರ ವಿವಿ ಕುಲಪತಿ ಪ್ರೊ.ಎಸ್.ಎ.ಕೋರಿ ಅತಿಥಿಯಾಗಿ ಭಾಗವಹಿಸಲಿದ್ದು, ಈ ಸಂದರ್ಭ ಎಲ್ಲಾ ನಿಕಾಯದ ವಿದ್ಯಾರ್ಥಿಗಳಿಗೆ 25 ಮಂದಿಯಂತೆ ಅವಕಾಶ ನೀಡಲಾಗುವುದು ಎಂದರು.

ವಿದ್ಯಾರ್ಥಿಗಳಿಗೆ ಬಾಕ್ಸ್ ಮಾದರಿಯಲ್ಲಿ ಪದಕ ವಿತರಣೆ
ಈ ಬಾರಿ ಕೊರಳಿಗೆ ಧರಿಸುವ ಮಾದರಿಯಲ್ಲಿ ಪದಕಗಳನ್ನು ವಿತರಿಸುವುದಿಲ್ಲ. ಬಾಕ್ಸ್ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಪದಕಗಳನ್ನು ನೀಡಲಾಗುವುದು. 100ನೇ ಘಟಿಕೋತ್ಸವದ ಹಿನ್ನೆಲೆ 12 ತಿಂಗಳು ವಿಶೇಷ ಉಪನ್ಯಾಸ ಏರ್ಪಡಿಸುವ ಆಲೋಚನೆಯಿತ್ತು. ಆದರೆ, ಕೊರೋನದಿಂದಾಗಿ ಅದು ಸಾಧ್ಯವಾಗಿಲ್ಲ. ಜನವರಿಯಿಂದ ವಿಶೇಷ ಉಪನ್ಯಾಸ ಆರಂಭಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಯೂಟ್ಯೂಬ್, ಫೇಸ್ ಬುಕ್ ಲೈವ್
ಘಟಿಕೋತ್ಸವ ಕಾರ್ಯಕ್ರಮವನ್ನು ಯ್ಯೂಬ್ ಟ್ಯೂಬ್, ಫೇಸ್ ಬುಕ್ ಮತ್ತು ಟ್ವಿಟ್ಟರ್ ಮೂಲಕ ಲೈವ್ ನೀಡಲಾಗುವುದು. ಅದಲ್ಲದೇ, ಸೆನೆಟ್ ಹಾಲ್, ವಿಜ್ಞಾನಭವನ, ಶತಮಾನೋತ್ಸವ ಭವನದಲ್ಲಿ ಒಟ್ಟು ಮೂರು ಕಡೆಗಳಲ್ಲಿ ಪ್ರಾಧ್ಯಾಪಕರು ಹಾಗೂ ಪೋಷಕರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಪ್ರೊ.ಶಿವಪ್ಪ, ಪರೀಕ್ಷಾಂಗ ಕುಲಸಚಿವ ಡಾ.ಮಹದೇವನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X