Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾಂಗ್ರೆಸ್ ಅಭ್ಯರ್ಥಿ ಮಶ್ಕೂರ್ ಆಲಿಘರ್...

ಕಾಂಗ್ರೆಸ್ ಅಭ್ಯರ್ಥಿ ಮಶ್ಕೂರ್ ಆಲಿಘರ್ ವಿವಿಯಲ್ಲಿ ಜಿನ್ನಾ ಭಾವಚಿತ್ರವಿರಿಸಿದ್ದರು ಎಂದು ಸುಳ್ಳು ಹೇಳಿದ 'ಆಜ್ ತಕ್'

ವಾರ್ತಾಭಾರತಿವಾರ್ತಾಭಾರತಿ17 Oct 2020 11:12 AM IST
share
ಕಾಂಗ್ರೆಸ್ ಅಭ್ಯರ್ಥಿ ಮಶ್ಕೂರ್ ಆಲಿಘರ್ ವಿವಿಯಲ್ಲಿ ಜಿನ್ನಾ ಭಾವಚಿತ್ರವಿರಿಸಿದ್ದರು ಎಂದು ಸುಳ್ಳು ಹೇಳಿದ ಆಜ್ ತಕ್

ಹೊಸದಿಲ್ಲಿ: ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ನಾಯಕ ಮಶ್ಕೂರ್ ಉಸ್ಮಾನಿಯನ್ನು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ದರ್ಭಾಂಗ ಜಿಲ್ಲೆಯ ಜಲೆ ಕ್ಷೇತ್ರದ ತನ್ನ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದು ಬಿಜೆಪಿಗೆ ಕಾಂಗ್ರೆಸ್ ಪಕ್ಷವನ್ನು ಟೀಕಿಸಲು ಒಂದು ಅಸ್ತ್ರ ಒದಗಿಸಿದಂತಾಗಿದ್ದು ಉಸ್ಮಾನಿ ಒಬ್ಬ 'ಜಿನ್ನಾ  ಬೆಂಬಲಿಗ' ಎಂದು ಬಿಜೆಪಿ ಆರೋಪಿಸಿದೆ.

ಉಸ್ಮಾನಿಯನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನಾಗಿ ಜಿನ್ನಾ ಬೆಂಬಲಿಗನನ್ನು ಕಣಕ್ಕಿಳಿಸಿದೆ ಎಂಬ ಅರ್ಥ ನೀಡುವ ಕಾರ್ಯಕ್ರಮವನ್ನೂ 'ಆಜ್ ತಕ್' ಸುದ್ದಿ ವಾಹಿನಿ ಪ್ರಸಾರ ಮಾಡಿತ್ತು. ಚಾನೆಲ್ ಆ್ಯಂಕರ್ ರೋಹಿತ್ ಸರ್ದಾನ ತಮ್ಮ 'ದಂಗಲ್' ಶೋ ದಲ್ಲಿ ಈ ಕುರಿತು ಚರ್ಚಿಸಲು ಹಲವರನ್ನು  ಆಹ್ವಾನಿಸಿದ್ದರು. ಉಸ್ಮಾನಿ 2018ರಲ್ಲಿ ಮೊಹಮ್ಮದ್ ಆಲಿ ಜಿನ್ನಾ ಅವರ  ಭಾವಚಿತ್ರವನ್ನು ಆಲಿಘರ್ ಮುಸ್ಲಿಂ ವಿವಿಯಲ್ಲಿ ಇರಿಸಿದ್ದಾರೆಂದೂ ಈ ಕಾರ್ಯಕ್ರಮದಲ್ಲಿ ಕೆಲವು ಬಾರಿ ಹೇಳಿಕೊಳ್ಳಲಾಗಿದೆ.

ಈ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ಉಸ್ಮಾನಿಗೆ ಟಿಕೆಟ್ ನೀಡುವ ಕಾಂಗ್ರೆಸ್ ನಿರ್ಧಾರದ ಕುರಿತು ಅಸಮಾಧಾನ ವ್ಯಕ್ತಪಡಿಸಿ "ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಅಥವಾ ಸೋಲುತ್ತಾರೆಂಬುದು ಮುಖ್ಯವಲ್ಲ. ದೇಶ ವಿಭಜನೆಗೆ ಕಾರಣವಾದ ಭಾರತದ ಅತ್ಯಂತ ಹಳೆಯ ರಾಜಕೀಯ ಪಕ್ಷ ಈಗ ಜಿನ್ನಾ ಹೆಸರನ್ನು ಮುಂದಿಟ್ಟುಕೊಂಡು ಮತಗಳನ್ನು ಗಳಿಸಲು ಯತ್ನಿಸುತ್ತಿದೆ. ನನಗೆ ದುಃಖವಾಗುತ್ತಿದೆ,'' ಎಂದರು. ಇದಕ್ಕೆ ಸರ್ದಾನ ಪ್ರತಿಕ್ರಿಯಿಸಿ, "ನೀವು ನನ್ನ ಹೃದಯದಲ್ಲಿದ್ದುದನ್ನು ಹೇಳಿದ್ದೀರಿ. ಆದರೆ ನಿಮ್ಮ  ಹೃದಯದೊಳಕ್ಕೆ ಇಣುಕಿ ನೋಡಿ, ಅವರಿಗೆ ಟಿಕೆಟ್ ನೀಡಿದ್ದರಿಂದ ಅವರೊಬ್ಬ ದೊಡ್ಡ ದೇಶ ವಿರೋಧಿ ಎಂದು ಬಿಂಬಿಸಲು ನಿಮಗೆ ಸಾಧ್ಯವಾಗುವುದಲ್ಲವೇ?'' ಎಂದು ಪ್ರಶ್ನಿಸಿದ್ದಾರೆ.

ಸುಳ್ಳು ಮಾಹಿತಿ ನೀಡಿದ 'ಆಜ್ ತಕ್'

ವಾಸ್ತವವಾಗಿ ಜಿನ್ನಾ ಅವರ ಭಾವಚಿತ್ರ ಆಲಿಘರ್ ಮುಸ್ಲಿಂ ವಿವಿಯಲ್ಲಿ 1938ರಿಂದ ಇದೆ. ಅದನ್ನು ಆಜ್ ತಕ್ ಹೇಳಿದಂತೆ ಉಸ್ಮಾನಿ ಅಲ್ಲಿ ಇರಿಸಿಲ್ಲ. 2018ರಲ್ಲಿ ಹಿಂದು ಯುವ ವಾಹಿನಿ ಕಾರ್ಯಕರ್ತರು ವಿವಿ ಕ್ಯಾಂಪಸ್ಸಿಗೆ ನುಗ್ಗಿ ಆ ಭಾವಚಿತ್ರವನ್ನು ತೆಗೆದು ಹಾಕಿದ್ದರಲ್ಲದೆ ಘಟನೆಯಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದವು.

ಕ್ಯಾಂಪಸ್ಸಿನಲ್ಲಿರುವ ಜಿನ್ನಾ ಭಾವಚಿತ್ರ ಕುರಿತ ವಿವಾದದ ಕುರಿತು ಪ್ರತಿಕ್ರಿಯಿಸಿದ್ದ ಉಪಕುಲಪತಿ ತಾರಿಖ್ ಮನ್ಸೂರ್, "ಜಿನ್ನಾ ಅವರ ಭಾವಚಿತ್ರ 1938ರಿಂದ ಇದೆ ಹಾಗೂ ಬಾಂಬೆ ಹೈಕೋರ್ಟ್, ಸಾಬರಮತಿ ಆಶ್ರಮ ಸಹಿತ ಇತರ ಹಲವು ಸ್ಥಳಗಳಲ್ಲಿವೆ. ಇಲ್ಲಿಯ ತನಕ ಅದರ ಬಗ್ಗೆ ಯಾರಿಗೂ  ಚಿಂತೆಯಿರಲಿಲ್ಲ. ಇದೊಂದು ವಿಚಾರವೇ ಅಲ್ಲ,'' ಎಂದಿದ್ದರು.

ಕೃಪೆ: altnews.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X