Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಟಿ ಸ್ಕ್ಯಾನಿಂಗ್ ವರದಿ ಪಾಸಿಟಿವ್...

ಸಿಟಿ ಸ್ಕ್ಯಾನಿಂಗ್ ವರದಿ ಪಾಸಿಟಿವ್ ಇದ್ದಲ್ಲಿ ಕೋವಿಡ್ ಸೋಂಕಿತರೆಂದೇ ಪರಿಗಣಿಸಿ: ಆರೋಗ್ಯ ಇಲಾಖೆ ಸುತ್ತೋಲೆ

ವಾರ್ತಾಭಾರತಿವಾರ್ತಾಭಾರತಿ17 Oct 2020 6:13 PM IST
share
ಸಿಟಿ ಸ್ಕ್ಯಾನಿಂಗ್ ವರದಿ ಪಾಸಿಟಿವ್ ಇದ್ದಲ್ಲಿ ಕೋವಿಡ್ ಸೋಂಕಿತರೆಂದೇ ಪರಿಗಣಿಸಿ: ಆರೋಗ್ಯ ಇಲಾಖೆ ಸುತ್ತೋಲೆ

ಬೆಂಗಳೂರು, ಅ.17: ಕೊರೋನ ವೈರಸ್ ಲಕ್ಷಣಗಳು, ಶ್ವಾಸಕೋಶ ಸೋಂಕು ಉಂಟಾದವರಿಗೆ ಆರ್ಟಿ-ಪಿಸಿಆರ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದು, ಸಿಟಿ ಸ್ಕ್ಯಾನಿಂಗ್‍ನಲ್ಲಿ ವರದಿ ಪಾಸಿಟಿವ್ ಕಂಡುಬಂದರೆ ಅಂತಹ ರೋಗಿಗಳನ್ನು ಕೋವಿಡ್-19 ಸೋಂಕಿತರೆಂದೇ ಪರಿಗಣಿಸಿ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಸಾಕಷ್ಟು ರೋಗಿಗಳಿಗೆ ಶ್ವಾಸಕೋಶ ಸೋಂಕು ಉಂಟಾಗಿರುತ್ತದೆ. ಸಿಟಿ ಸ್ಕ್ಯಾನಿಂಗ್ ಮಾಡಿದಾಗ ಸೋಂಕು ಖಚಿತವಾಗುತ್ತದೆ. ಆದರೆ, ಕೊರೋನ ಪತ್ತೆಯಲ್ಲಿ ಶ್ರೇಷ್ಠ ನಿಖರತೆ ಹೊಂದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ತಿಳಿಸಿರುವ ಆರ್ಟಿ-ಪಿಸಿಆರ್‍ನಲ್ಲಿ ವರದಿ ನೆಗೆಟಿವ್ ಬರುತ್ತಿದೆ.

ನೆಗೆಟಿವ್ ಬಂದಿದೆ ಎಂದು ಕೋವಿಡ್ ಹೊರತಾದ ಚಿಕಿತ್ಸೆಗೆ ಮುಂದಾದರೆ ಆಗ ಅವರಿಂದ ಬೇರೆಯವರಿಗೆ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಅಲ್ಲದೆ, ಇತರ ಚಿಕಿತ್ಸೆಗಳು ಪರಿಣಾಮಕಾರಿಯಾಗದೇ ಇರಬಹುದು. ಈ ರೀತಿಯ ಪ್ರಕರಣಗಳು ರಾಜ್ಯದಲ್ಲಿ ನಿರಂತರವಾಗಿ ವರದಿಯಾಗುತ್ತಿರುವುದರಿಂದ ಆರೋಗ್ಯ ಇಲಾಖೆ ಈ ಸೂಚನೆ ನೀಡಿದೆ. ಸೋಂಕಿತರಿಗೆ ಆರ್ಟಿ-ಪಿಸಿಆರ್ ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದಿರುವ ಹಲವು ದೃಷ್ಟಾಂತಗಳು ರಾಜ್ಯದ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನಡೆದಿವೆ. ಆದರೆ, ಸಿಟಿ ಸ್ಕ್ಯಾನಿಂಗ್‍ನಲ್ಲಿ ಸೋಂಕು ಪತ್ತೆಯಾಗಿರುವ ಕಾರಣ ಇದೇ ಆಧಾರದ ಮೇಲೆ ಕೋವಿಡ್-19 ಚಿಕಿತ್ಸೆ ನೀಡಲು ಸುತ್ತೋಲೆ ಹೊರಡಿಸಲಾಗಿದೆ.

ಐಸಿಎಂಆರ್ ಪ್ರಕಾರ, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಮೂಲಕ ಕೋವಿಡ್ ಪಾಸಿಟಿವ್ ಪತ್ತೆ ನಿಖರತೆ ಶೇ.50.6ರಿಂದ ಶೇ.84ರಷ್ಟಿದೆ. ಇನ್ನು ಕೋವಿಡ್ ಪತ್ತೆಯಲ್ಲಿ ಆರ್ಟಿ-ಪಿಸಿಆರ್‍ಗಿಂತಲೂ ಹೆಚ್ಚು ನಿಖರತೆಯನ್ನು ಸಿಟಿ ಸ್ಕ್ಯಾನಿಂಗ್ ಪರೀಕ್ಷೆ ಹೊಂದಿವೆ ಎನ್ನುವುದು ಅಧ್ಯಯನಗಳಿಂದ ದೃಢಪಟ್ಟಿದೆ.

ರಾಜ್ಯ ಮತ್ತು ದೇಶದಲ್ಲಿ ಕೋವಿಡ್-19 ಸೋಂಕು ಮತ್ತು ಪರೀಕ್ಷೆ ಹೆಚ್ಚಾಗಿರುವ ಕಾರಣ ಮುಂದಿನ ದಿನಗಳಲ್ಲಿ ತಪ್ಪು ನೆಗೆಟಿವ್ ವರದಿಗಳು ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ, ಕೋವಿಡ್-19ನಂತೆಯೇ ಲಕ್ಷಣಗಳಿರುವ ಕೊರೋನ ಶಂಕಿತ ಪ್ರಕರಣಗಳನ್ನು ಸಿಟಿ ಸ್ಕ್ಯಾನಿಂಗ್ ಮತ್ತು ಲ್ಯಾಬ್ ಪರೀಕ್ಷೆ ಮೂಲಕ ಪತ್ತೆ ಮಾಡಿ ಕೋವಿಡ್-19 ಪಾಸಿಟಿವ್ ಕೇಸ್ಗಳಂತೆಯೇ ಚಿಕಿತ್ಸೆ ನೀಡಬೇಕು. ಈ ಮೂಲಕ ಸೋಂಕು ಹರಡುವಿಕೆ ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳು ಉಲ್ಬಣವಾಗುವುದನ್ನು ತಡೆಯಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X