Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುರು ರಾಘವೇಂದ್ರ ಬ್ಯಾಂಕ್ ಬಹುಕೋಟಿ ಹಗರಣ...

ಗುರು ರಾಘವೇಂದ್ರ ಬ್ಯಾಂಕ್ ಬಹುಕೋಟಿ ಹಗರಣ ಆರೋಪ; ಆಡಳಿತಾಧಿಕಾರಿ ನೇಮಕಕ್ಕೆ ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 Oct 2020 7:50 PM IST
share

ಬೆಂಗಳೂರು, ಅ.17: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಬಹುಕೋಟಿ ಹಗರಣ ಆರೋಪ ಸಂಬಂಧ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪರಿಣತಿ ಇರುವವರನ್ನೆ ಆಡಳಿತಾಧಿಕಾರಿ ಆಗಿ ನೇಮಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ಗುರು ರಾಘವೇಂದ್ರ ಬ್ಯಾಂಕ್ ಹಗರಣದ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಸೂಚನೆ ನೀಡಿದೆ ಎಂದು ವರದಿಯಾಗಿದೆ.

ಆರಂಭದಲ್ಲಿ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ, ಬ್ಯಾಂಕ್ ಸಾಲಗಾರರಿಂದ ವಸೂಲಿ ಮಾಡಿರುವ ಹಣವನ್ನು ಠೇವಣಿದಾರರಿಗೆ ಹಿಂದಿರುಗಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಆರ್‍ಬಿಐ ಈವರೆಗೂ ಪರಿಗಣಿಸಿಲ್ಲ ಎಂದು ನುಡಿದರು.
ಅಲ್ಲದೆ, ತುರ್ತು ಪರಿಗಣಿಸಿ ಠೇವಣಿದಾರರ ಹಣ ಹಿಂದಿರುಗಿಸಿದರೆ ಕೋವಿಡ್ ಸಂದರ್ಭದಲ್ಲಿ ಅನುಕೂಲವಾಗಲಿದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಆರ್‍ಬಿಐ ಪರ ವಕೀಲರು, ಠೇವಣಿದಾರರ ಹಣ ಹಿಂದಿರುಗಿಸುವ ಸಂಬಂಧ ಈಗಲೇ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಆಡಿಟಿಂಗ್ ಕೂಡ ಪೂರ್ಣಗೊಂಡಿಲ್ಲ. ಹೀಗಾಗಿ ಹಣ ಹಿಂದಿರುಗಿಸುವ ಸಂಬಂಧ ಸೂಕ್ತ ಸಮಯದಲ್ಲಿ ಆರ್‍ಬಿಐ ನಿರ್ಣಯ ಕೈಗೊಳ್ಳಲಿದೆ ಎಂದರು.

ಅಲ್ಲದೇ, ಬ್ಯಾಂಕ್ ನೀಡಿರುವ 1,400 ಕೋಟಿ ರೂಪಾಯಿ ಹಣ ಈವರೆಗೂ ವಸೂಲು ಆಗಿಲ್ಲ. ಹೀಗಾಗಿ ಬ್ಯಾಂಕಿಂಗ್ ಕ್ಷೇತ್ರದ ವಹಿವಾಟುಗಳ ಬಗ್ಗೆ ಜ್ಞಾನ ಹೊಂದಿರುವ ಸಮರ್ಥರನ್ನು ಆಡಳಿತಾಧಿಕಾರಿಯಾಗಿ ನೇಮಿಸುವ ಅಗತ್ಯವಿದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಆರ್‍ಬಿಐ ಸಲಹೆಯನ್ನು ರಾಜ್ಯ ಸರಕಾರ ಪರಿಗಣಿಸಿ ಸೂಕ್ತ ಆಡಳಿತಾಧಿಕಾರಿ ನೇಮಕ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿ, ವಿಚಾರಣೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X