Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನ: ಭಾರತದಲ್ಲಿ ಸ್ಪುಟ್ನಿಕ್ V...

ಕೊರೋನ: ಭಾರತದಲ್ಲಿ ಸ್ಪುಟ್ನಿಕ್ V ಲಸಿಕೆಯ ಕ್ಲಿನಿಕಲ್ ಟ್ರಯಲ್‌ಗೆ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ17 Oct 2020 10:02 PM IST
share
ಕೊರೋನ: ಭಾರತದಲ್ಲಿ ಸ್ಪುಟ್ನಿಕ್ V ಲಸಿಕೆಯ ಕ್ಲಿನಿಕಲ್ ಟ್ರಯಲ್‌ಗೆ ಅನುಮೋದನೆ

ಮಾಸ್ಕೊ,ಅ.17: ಕೋವಿಡ್-19 ಸೋಂಕಿನ ವಿರುದ್ಧ ರಶ್ಯವು ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ V ಲಸಿಕೆಯ ಕ್ಲಿನಿಕಲ್ ಟ್ರಯಲ್ ಪರೀಕ್ಷೆಯನ್ನು ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಸಲು ರಶ್ಯದ ನೇರ ಹೂಡಿಕೆ ನಿಧಿ (ಆರ್‌ಡಿಐಎಫ್) ಹಾಗೂ ಭಾರತೀಯ ಔಷಧಿ ಸಂಸ್ಥೆ ಡಾ. ರೆಡ್ಡಿಸ್ ಲ್ಯಾಬೋರೇಟರೀಸ್ ಲಿಮಿಟೆಡ್‌ಗೆ ನವೀಕೃತ ಅನುಮೋದನೆ ದೊರೆತಿದೆ.

 ಭಾರತದಲ್ಲಿ ಸ್ಪುಟ್ನಿಕ್ V ಲಸಿಕೆಯ ಕ್ಲಿನಿಕಲ್ ಟ್ರಯಲ್ ಪರೀಕ್ಷೆಯನ್ನು ದೊಡ್ಡ ಪ್ರಮಾಣದಲ್ಲಿ ನಡೆಸಲಾಗುವುದೆಂದು ಈ ಹಿಂದೆ ಘೋಷಿಸಲಾಗಿತ್ತು. ಆದರೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರಗಳು ಇದಕ್ಕೆ ಸಮ್ಮತಿ ನೀಡದ ಕಾರಣ ನನೆಗುದಿಗೆ ಬಿದ್ದಿತ್ತು. ರಶ್ಯದಲ್ಲಿ ಸ್ಪುಟ್ನಿಕ್ V  ಲಸಿಕೆಯ ಮೊದಲನೆ ಹಂತದ ಹಾಗೂ ಎರಡನೆ ಹಂತದ ಕ್ಲಿನಿಕಲ್ ಟ್ರಯಲ್ ಪರೀಕ್ಷೆಗಳು ಅತ್ಯಂತ ಸಣ್ಣ ಪ್ರಮಾಣದಲ್ಲಿ ನಡೆದಿರುವುದರಿಂದ ಭಾರತದಲ್ಲಿ ತಕ್ಷಣವೇ ಲಸಿಕೆಯ ಪ್ರಾಯೋಗಿಕ ಪರೀಕ್ಷೆಗೆ ಅನುಮತಿ ನೀಡಕೂಡದೆಂದು ಅವು ಅಭಿಪ್ರಾಯಿಸಿದ್ದವು.

ಆದರೆ ನೂತನ ಒಪ್ಪಂದದ ಪ್ರಕಾರ ಭಾರದಲ್ಲಿ ಸ್ಪುಟ್ನಿಕ್ V ಲಸಿಕೆಯ ಎರಡನೆ ಹಾಗೂ ಮೂರನೆ ಹಂತದ ಮಾನವ ಕ್ಲಿನಿಕಲ್ ಟ್ರಯಲ್‌ನ್ನು ನಡೆಯಲಿದೆ.

  ರಶ್ಯವು ನೊವೆಲ್ ಕೊರೋನ ವೈರಸ್ ಲಸಿಕೆಯ ಬಳಕೆಗೆ ಶಾಸನಾತ್ಮಕ ಅನುಮೋದನೆಯನ್ನು ಪಡೆದ ಮೊದಲ ರಾಷ್ಟ್ರವಾಗಿದೆ. ಸ್ಪುಟ್ನಿಕ್ V ಲಸಿಕೆಯ ಮೂರನೇ ಹಂತದ ಪ್ರಾಯೋಗಿಕ ಪರೀಕ್ಷೆಯು ಬೆಲಾರಸ್, ವೆನೆಝುವೆಲಾ ಹಾಗೂ ಯುಎಇಗಳಲ್ಲಿ ನಡೆಯಲಿದೆ.

 ಲಸಿಕೆಯ 30 ಕೋಟಿ ಶಾಟ್‌ಗಳನ್ನು ಉತ್ಪಾದಿಸಲು ಈಗಾಗಲೇ ಆರ್‌ಡಿಐಎಫ್ ಭಾರತೀಯ ಉತ್ಪಾದಕ ಸಂಸ್ಥೆಯ ಜೊತೆ ಒಪ್ಪಂದ ಮಾಡಿಕೊಂಡಿದೆ.

ಪ್ರಸಕ್ತ ಸ್ಪುಟ್ನಿಕ್ V ಲಸಿಕೆಯ ಮೂರನೆ ಹಂತದ ಕ್ಲಿನಿಕಲ್ ಟ್ರಯಲ್ ಮಾಸ್ಕೊದಲ್ಲಿ ನಡೆಯುತ್ತಿದ್ದು, 40 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದಾರೆ. 

ನೂತನ ಒಪ್ಪಂದದ ಪ್ರಕಾರ ಭಾರತದಲ್ಲಿ ಸ್ಪುಟ್ನಿಕ್ V  ಲಸಿಕೆಯ ಎರಡನೆ ಹಾಗೂ ಮೂರನೆ ಹಂತದ ಮಾನವ ಕ್ಲಿನಿಕಲ್ ಟ್ರಯಲ್‌ನ್ನು ನಡೆಯಲಿದ್ದು, 1500 ಮಂದಿ ಪಾಲ್ಗೊಳ್ಳಲಿದ್ದಾರೆಂದು ವಿದೇಶದಲ್ಲಿ ಈ ಲಸಿಕೆಯ ಮಾರ್ಕೆಟಿಂಗ್ ಸಂಸ್ಥೆಯಾದ ಆರ್‌ಡಿಐಎಫ್ ತಿಳಿಸಿದೆ. ಭಾರತದ ಪ್ರಸಿದ್ಧ ಔಷಧ ತಯಾರಕ ಸಂಸ್ಥೆಯಾದ ಡಾ. ರೆಡ್ಡೀಸ್ ಸ್ಪುಟ್ನಿಕ್ Vಲಸಿಕೆಯ ಕ್ಲಿನಿಕಲ್ ಟ್ರಯಲ್‌ಗಳನ್ನು ನಡೆಸಲಿದೆ. ಇದಕ್ಕಾಜಿಗಿ ಆರ್‌ಡಿಐಎಫ್ , ಡಾ. ರೆಡ್ಡೀಸ್ ಲ್ಯಾಬೊರೇಟರೀಸ್‌ಗೆ 10 ಕೋಟಿ ಲಸಿಕೆಯ ಡೋಸ್‌ಗಳನ್ನು ಪೂರೈಕೆ ಮಾಡಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X