Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್‌ನಲ್ಲಿ ಬಿಳಿಯರಿಗಿಂತ ಭಾರತೀಯ...

ಬ್ರಿಟನ್‌ನಲ್ಲಿ ಬಿಳಿಯರಿಗಿಂತ ಭಾರತೀಯ ಮೂಲದವರು ಕೋವಿಡ್‌ಗೆ ಬಲಿಯಾಗುವ ಅಪಾಯ ಅಧಿಕ

ವಾರ್ತಾಭಾರತಿವಾರ್ತಾಭಾರತಿ17 Oct 2020 11:42 PM IST
share
ಬ್ರಿಟನ್‌ನಲ್ಲಿ ಬಿಳಿಯರಿಗಿಂತ ಭಾರತೀಯ ಮೂಲದವರು ಕೋವಿಡ್‌ಗೆ ಬಲಿಯಾಗುವ ಅಪಾಯ ಅಧಿಕ

ಲಂಡನ್,ಅ.17: ಇಂಗ್ಲೆಂಡ್ ನಲ್ಲಿ ನೆಲೆಸಿರುವ ಭಾರತೀಯ ಜನಾಂಗೀಯ ಸಮುದಾಯಗಳು ಕೋವಿಡ್-19 ಸೋಂಕಿನಿಂದ ಸಾವನ್ನಪ್ಪುವ ಸಾಧ್ಯತೆಯು ಆ ದೇಶದಲ್ಲಿ ವಾಸಿಸುವ ಬಿಳಿ ಜನಾಂಗೀಯ ಪುರುಷರು ಹಾಗೂ ಮಹಿಳೆಯರಿಗಿಂತ 50-70 ಶೇಕಡ ಅಧಿಕವೆಂದು ಲಂಡನ್‌ನಲ್ಲಿ ಶುಕ್ರವಾರ ಬಿಡುಗಡೆಯಾದ ಅಂಕಿಅಂಶ ವಿಶ್ಲೇಷಣಾ ವರದಿಯೊಂದು ತಿಳಿಸಿದೆ.

ಕೊರೋನ ವೈರಸ್ ಸೋಂಕಿನ ಪರಿಣಾಮ ಬೀರುವಿಕೆಯಲ್ಲಿ ಜನಾಂಗೀಯವಾಗಿ ವಿಭಿನ್ನತೆಯಿರುವುದಾಗಿ ಬ್ರಿಟನ್‌ನ ರಾಷ್ಟ್ರೀಯ ಅಂಕಿಅಂಶ ಕಾರ್ಯಾಲಯ (ಓಎನ್‌ಎಸ್) ವರದಿ ಈ ಹಿಂದೆ ಹೇಳಿತ್ತು. ಈ ಅಂಕಿಅಂಶಗಳನ್ನು ಈಗ ಕಾರ್ಯಾಲಯವು ತಾಜಾಗೊಳಿಸಿದೆ. ಕೋವಿಡ್ ಸೋಂಕಿನ ಹರಡುವಿಯ ಜೊತೆಗೆ ವ್ಯಕ್ತಿಯ ಮೊದಲಿನ ಆರೋಗ್ಯ ಪರಿಸ್ಥಿತಿಗಳಿಗಿಂತ ಹೆಚ್ಚಾಗಿ ಜೀವನದ ಗುಣಮಟ್ಟ ಹಾಗೂ ಉದ್ಯೋಗದ ಸ್ವರೂಪವು ಹೆಚ್ಚು ನಂಟು ಹೊಂದಿದೆಯೆಂದು ಅದು ಹೇಳಿದೆ.

2020ರ ಜುಲೈ 28ರವರೆಗಿನ ಕೋವಿಡ್-19 ಸಾವಿನ ಪ್ರಕರಣಗಳನ್ನು ಗಮನಿಸಿದಲ್ಲಿ ಕಪ್ಪು ಜನಾಂಗೀಯ ಹಾಗೂ ದಕ್ಷಿಣ ಏಶ್ಯದ ಜನಾಂಗೀಯ ಹಿನ್ನೆಲೆಯ ವ್ಯಕ್ತಿಗಳು ಬಿಳಿಯ ಜನಾಂಗೀಯ ಹಿನ್ನೆಲೆಯ ವ್ಯಕ್ತಿಗಳಿಗಿಂತ ಕೊರೋನ ವೈರಸ್‌ನಿಂದ ಸಾವನ್ನಪ್ಪುವ ಅಪಾಯ ಹೆಚ್ಚಿರುತ್ತದೆ ಎಂದು ಓಎನ್‌ಎಸ್ ವರದಿ ಹೇಳಿದೆ.

 ಆದಾಗ್ಯೂ ಎಲ್ಲಾ ಜನಾಂಗಗಳಲ್ಲಿಯೂ ಮಹಿಳೆಯರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪುರುಷರೇ ಕೋವಿಡ್-19ಗೆ ಬಲಿಯಾಗಿದ್ದಾರೆಂದು ಅದು ಹೇಳಿದೆ.

ಓಎನ್‌ಎಸ್ ತನ್ನ ಹಿಂದಿನ ವಿಶ್ಲೇಷಣೆಯಲ್ಲಿ ಬಾಂಗ್ಲಾದ ಜನಾಂಗೀಯ ಹಿನ್ನೆಲೆಯ ಪುರುಷರು, ಪಾಕಿಸ್ತಾನದ ಹಿನ್ನೆಲೆಯ ಪುರುಷರಿಗಿಂತ ಕೊರೋನ ವೈರಸ್‌ನಿಂದ ಸಾವನ್ನಪ್ಪುವ ಸಾಧ್ಯತೆ ಅಧಿಕವಾಗಿರುವುದಾಗಿ ತಿಳಿಸಿತ್ತು.

 ನೀವು ವಾಸಿಸುವ ಸ್ಥಳ ಹಾಗೂ ನೀವು ಯಾವ ವೃತ್ತಿಯಲ್ಲಿ ತೊಡಗಿರುವಿರಿ ಎಂಬಿತ್ಯಾದಿೆ ಭೌಗೋಳಿಕ, ಜನಸಂಖ್ಯಾತ್ಮಕ ಹಾಗೂ ಸಾಮಾಜಿಕ ಅರ್ಥಿಕ ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳುವ ಮೂಲಕ, ಕೋವಿಡ್19ನಿಂದ ಸಾವನ್ನಪ್ಪುವ ಅಪಾಯದಲ್ಲಿ ವ್ಯತ್ಯಾಸವಿರುವುದನ್ನು ವಿವರಿಸಬಹುದಾಗಿದೆ ಎಂದು ಓಎನ್‌ಎಸ್ ಆರೋಗ್ಯ ಹಾಗೂ ಜೀವನ ಘಟನೆಗಳ ವಿಭಾಗದ ನಿರ್ದೇಶಕ ಬೆನ್ ಹಂಬರ್‌ಸ್ಟೋನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X