Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು: ಕಂಡ ಕಂಡವರ ಮೇಲೆ ಚೂರಿ ಇರಿದ...

ಬೆಂಗಳೂರು: ಕಂಡ ಕಂಡವರ ಮೇಲೆ ಚೂರಿ ಇರಿದ ದುಷ್ಕರ್ಮಿ; ಓರ್ವ ಮೃತ್ಯು

ಐವರಿಗೆ ಗಂಭೀರ ಗಾಯ

ವಾರ್ತಾಭಾರತಿವಾರ್ತಾಭಾರತಿ18 Oct 2020 8:09 PM IST
share
ಬೆಂಗಳೂರು: ಕಂಡ ಕಂಡವರ ಮೇಲೆ ಚೂರಿ ಇರಿದ ದುಷ್ಕರ್ಮಿ; ಓರ್ವ ಮೃತ್ಯು

ಬೆಂಗಳೂರು, ಅ. 18: ಕೂಲಿ ಕಾರ್ಮಿಕನೊಬ್ಬ ಏಕಾಏಕಿ ಅಪರಿಚಿತರ ಮೇಲೆ ಚಾಕುವಿನಿಂದ ಮನಬಂದಂತೆ ದಾಳಿ ಮಾಡಿದ ಪರಿಣಾಮ ಒಬ್ಬ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಕಾಟನ್‍ಪೇಟೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮಾರಿ(30) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ವೇಲಾಯುಧನ್, ಮುನಿಸ್ವಾಮಿ ಎಂಬುವವರು ಐಸಿಯುಗೆ ದಾಖಲಾಗಿದ್ದರೆ, ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಎಂ.ಗಣೇಶ್(35)ನನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯು ಕಾಟನ್‍ಪೇಟೆ ಮಂಡಿಯಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ರವಿವಾರ ಬೆಳಗ್ಗೆ ಅಂಗಡಿಗೆ ಮಟನ್ ತರಲು ಹೋದ ಆರೋಪಿ ಎಂ.ಗಣೇಶ್ ಅಲ್ಲಿಯೇ ಇದ್ದ ಚಾಕುವನ್ನು ತೆಗೆದುಕೊಂಡು ಬಂದಿದ್ದಾನೆ. ಬಳಿಕ ಬೆಳಗ್ಗೆ 8.30ರ ಸುಮಾರಿಗೆ ಕಾಟನ್‍ಪೇಟೆಯ ಸುತ್ತಮುತ್ತ ಸುಮಾರು ಎರಡು ಕೀ.ಮೀವರೆಗೂ ಸುತ್ತಾಡಿ ಕಂಡ ಕಂಡವರ ಮೇಲೆ ಚಾಕುವಿನಿಂದ ತಿವಿದಿದ್ದಾನೆ. ಇದರಿಂದ, ಒಬ್ಬರು ಮೃತಪಟ್ಟರೆ, ಐವರು ಗಾಯಗೊಂಡಿದ್ದಾರೆ. ಈ ಏಕಾಏಕಿ ದಾಳಿಯನ್ನು ಕಂಡ ಹಲವರು ಭಯಭೀತರಾಗಿ ಮನೆಯ ಬಾಗಿಲನ್ನು ಹಾಕಿಕೊಂಡರೆ, ಇನ್ನು ಕೆಲವರು ಆರೋಪಿಗೆ ಕಾಣದ ಹಾಗೇ ಮರೆಯಾಗಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳಿಗೂ ಆರೋಪಿಗೂ ಯಾವುದೇ ಸಂಬಂಧವಿಲ್ಲ. ವೈಯಕ್ತಿಕ ದ್ವೇಷ ಕೂಡ ಇಲ್ಲ. ಎದುರಿಗೆ ಸಿಕ್ಕ ಕಾರಣಕ್ಕಾಗಿಯೇ ಚಾಕುವಿನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದ್ದು, ಆರೋಪಿಯ ದಾಳಿಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ಚಾಕುವನ್ನು ವಶಕ್ಕೆ ಪಡೆದಿದ್ದಾರೆ.

ಕೃತ್ಯಕ್ಕೆ ಕಾರಣ ಏನೆಂಬುದು ಪೊಲೀಸರಿಗೆ ಸ್ಪಷ್ಟ ಮಾಹಿತಿ ದೊರಕ್ಕಿಲ್ಲ. ಮದ್ಯ ಸೇವಿಸಿದ್ದನೆ, ಗಾಂಜಾ ಮತ್ತಿನಲ್ಲಿ ಈ ಕೃತ್ಯ ಎಸಗಿರಬಹುದೆ, ಮಾನಸಿಕ ರೋಗಿಯೇ ಎಂಬಿತ್ಯಾದಿ ಅಂಶಗಳನ್ನಿಟ್ಟುಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆರೋಪಿ ಗಣೇಶ್, ಆಂಜನಪ್ಪಗಾರ್ಡ್ ನ ನಿವಾಸಿಯಾಗಿದ್ದು, ಎರಡು ವರ್ಷಗಳ ಹಿಂದೆ ಪತ್ನಿ ಬಿಟ್ಟು ಹೋಗಿದ್ದಾಳೆ. ತಾಯಿ ಜತೆ ವಾಸವಾಗಿದ್ದ ಗಣೇಶ್ ಆಕೆಯ ಜತೆಗೂ ಪದೇ ಪದೇ ಜಗಳವಾಡಿ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಾಟನ್‍ಪೇಟೆ ಠಾಣೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X