Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಯಾಂಕಿಗೆ ವಂಚನೆ: ದಂಪತಿ ವಿರುದ್ಧ...

ಬ್ಯಾಂಕಿಗೆ ವಂಚನೆ: ದಂಪತಿ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ18 Oct 2020 9:05 PM IST
share
ಬ್ಯಾಂಕಿಗೆ ವಂಚನೆ: ದಂಪತಿ ವಿರುದ್ಧ ಪ್ರಕರಣ ದಾಖಲು

ಶಂಕರನಾರಾಯಣ, ಅ.18: ಎರಡು ಆಡಿಟ್ ವರದಿಗಳನ್ನು ತಯಾರಿಸಿ, ಬ್ಯಾಂಕಿನಿಂದ ಸಾಲ ಪಡೆದು ಮರುಪಾವತಿಸದೆ ವಂಚಿಸಿರುವ ದಂಪತಿ ವಿರುದ್ಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ಧಾಪುರದ ಗಜಾನನಾ ಕ್ಯಾಶೂ ಇಂಡಸ್ಟ್ರೀಸ್‌ನ ರಾಘವೇಂದ್ರ ಹೆಮ್ಮಣ್ಣ ಹಾಗೂ ಅವರ ಪತ್ನಿ ಆಶಾಕಿರಣ ಎಂಬವರು ಶಂಕರನಾರಾಯಣ ಎಂಬಲ್ಲಿ 2015ರ ಜೂ.13ರಂದು ಹೆಮ್ಸ್ ಫುಡ್ಸ್ ಪ್ರೈ ಲಿಮಿಟೆಡ್ ಕಂಪೆನಿಯನ್ನು ತೆರೆದಿದ್ದು, ಈ ಕಂಪೆನಿಗೆ ಕರ್ಣಾಟಕ ಬ್ಯಾಂಕ್‌ನ ಸಿದ್ದಾಪುರ ಶಾಖೆಯಲ್ಲಿ ಸಾಲ ಪಡೆಯಲು ಅರ್ಜಿ ಹಾಗೂ ಸಂಬಧಿಸಿದ ದಾಖಲೆ ಪತ್ರ ಸಲ್ಲಿಸಿದ್ದರು. ಈ ವೇಳೆ ಕಂಪೆನಿಯ ವಾರ್ಷಿಕ ವ್ಯಾಪಾರ ವಹಿವಾಟು 10,90,60,855ರೂ. ಎಂದು ತೋರಿಸಿ ಆಡಿಟ್ ವರದಿಯನ್ನು ನೀಡಿದ್ದರು.

ಅದನ್ನು ಪರಿಗಣಿಸಿ ಇವರಿಗೆ ಬ್ಯಾಂಕಿನವರು ಒವರ್ ಡ್ರಾಷ್ಟ್ ಸಾಲವಾಗಿ 3,75,00,000ರೂ. ಹಾಗೂ ಮೆಶೀನ್ ಖರೀದಿಗೆ 2,70,00,000 ರೂ. ಮತ್ತು ಹೊಸ ಕಟ್ಟಡ ಕಟ್ಟಲು 25,00,000ರೂ. ಸಾಲವನ್ನು ನೀಡಿದ್ದರು. ಆ ಬಳಿಕ ಆರೋಪಿಗಳು ಸಾಲದ ಕಂತನು ಸರಿಯಾಗಿ ಕಟ್ಟದೆ ಇದ್ದುದರಿಂದ ಬ್ಯಾಂಕಿನವರು ಇವರ ಕಂಪೆನಿಯ ವೆಬ್‌ಸೈಟ್ ಪರೀಶಿಲಿಸಿದರು. ಅದರಲ್ಲಿ ಕಂಪೆನಿಯ ವಾರ್ಷಿಕ ವ್ಯಾಪಾರ ವಹಿವಾಟು 15,08.432.83ರೂ. ಎಂಬುದಾಗಿತ್ತು.

ಇವರು ಬ್ಯಾಂಕಿಗೆ ಮೋಸ ಮಾಡುವ ಉದ್ದೇಶದಿಂದ ಒಂದೆ ಕಂಪೆನಿಯ ಹೆಸರಿನಲ್ಲಿ ಎರಡು ಆಡಿಟ್ ವರದಿಯನ್ನು ತಯಾರು ಮಾಡಿರುವುದು ಕಂಡು ಬಂತು. ಇವರು 2020ರ ಜು.1ಕ್ಕೆ ಒಟ್ಟು 6,74,77,414.31ರೂ. ಸಾಲ ಬಾಕಿ ಇರಿಸಿದ್ದು, ಕಂಪೆನಿಯ ದಾಸ್ತಾನು 5,27,00,000ರೂ. ಎಂದು ತೋರಿಸಿದ್ದಾರೆ. ದಾಸ್ತಾನು ಕೊಠಡಿ ಪರಿಶೀಲಿಸಿದಾಗ ಕಂಪೆನಿಯ ಯಾವುದೇ ಉತ್ಪನಗಳು ದಾಸ್ತಾನು ಇಟ್ಟಿರುವುದಿಲ್ಲ ಎಂದು ಶಾಖಾ ಪ್ರಬಂಧಕ ಶ್ರೀನಿವಾಸ ಶೆಣೈ ದೂರಿನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X