Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇನ್ನೂ ನಾಲ್ಕೈದು ದಿನ ಮಳೆಯ ಮುನ್ಸೂಚನೆ:...

ಇನ್ನೂ ನಾಲ್ಕೈದು ದಿನ ಮಳೆಯ ಮುನ್ಸೂಚನೆ: ಪ್ರವಾಹ ತಗ್ಗಿದರೂ ತಪ್ಪದ ಸಂತ್ರಸ್ತರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ19 Oct 2020 9:39 PM IST
share
ಇನ್ನೂ ನಾಲ್ಕೈದು ದಿನ ಮಳೆಯ ಮುನ್ಸೂಚನೆ: ಪ್ರವಾಹ ತಗ್ಗಿದರೂ ತಪ್ಪದ ಸಂತ್ರಸ್ತರಲ್ಲಿ ಆತಂಕ

ಬೆಂಗಳೂರು, ಅ.19: ಒಂದು ವಾರದಿಂದ ಅಬ್ಬರಿಸಿ ಬೊಬ್ಬಿರಿದಿದ್ದ ಕೃಷ್ಣಾ ಮತ್ತು ಭೀಮಾ ನದಿ ಪ್ರವಾಹದ ಅಬ್ಬರ ಕೊಂಚ ತಗ್ಗಿದೆ. ಆದರೆ, ಹವಾಮಾನ ಇಲಾಖೆ ಇನ್ನೂ ನಾಲ್ಕೈದು ದಿನ ಮಳೆ ಸುರಿಯಲಿದೆ ಎಂಬ ಮುನ್ಸೂಚನೆ ನೀಡಿದ್ದು, ರಾಜ್ಯದ ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಸಂತ್ರಸ್ತರಲ್ಲಿ ಆತಂಕ ಮನೆ ಮಾಡಿದೆ.

ಈ ನಡುವೆ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಖುದ್ದು ಪರಿಶೀಲನೆ ನಡೆಸಿದ ಕಂದಾಯ ಸಚಿವ ಆರ್. ಅಶೋಕ್, `ಪ್ರವಾಹ ಸಂತ್ರಸ್ತರಿಗೆ ಕೂಡಲೇ ಪರಿಹಾರ ಮತ್ತು ವಸತಿ ಸೌಲಭ್ಯ ಕಲ್ಪಿಸಲು ಸರಕಾರ ಕ್ರಮ ಕೈಗೊಳ್ಳಲಿದೆ' ಎಂದು ಅಭಯ ನೀಡಿದ್ದಾರೆ. ಅಲ್ಲದೆ, `ಕಾಳಜಿ ಕೇಂದ್ರಗಳಲ್ಲಿ ಜಾತೀಯತೆ ಸೇರಿದಂತೆ ಯಾವುದೇ ರೀತಿಯ ತಾರತಮ್ಯ, ಕರ್ತವ್ಯ ನಿರ್ಲಕ್ಷ್ಯವನ್ನು ಸರಕಾರ ಸಹಿಸುವುದಿಲ್ಲ' ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

`ಪ್ರವಾಹ ಪರಿಸ್ಥಿತಿ ಇರುವಾಗ ವೈಮಾನಿಕ ಸಮೀಕ್ಷೆ ಮಾಡುವುದು ಸರಿ. ಆದರೆ, ಈಗ ಪ್ರವಾಹ ಪೀಡಿತ ಸ್ಥಳಗಳಿಗೆ ರಸ್ತೆ ಮೂಲಕ ಸಂಚರಿಸಲು, ನಿರಾಶ್ರಿತ ಕೇಂದ್ರಗಳಲ್ಲಿರುವ ಜನರನ್ನು ಭೇಟಿ ಮಾಡಲು ಅವಕಾಶವಿದ್ದಾಗ್ಯೂ ಸಿಎಂ ಯಡಿಯೂರಪ್ಪ ವಿಮಾನದಲ್ಲೇ ಸಮೀಕ್ಷೆ ಮಾಡಿದರೆ ಜನರ ಕಷ್ಟ ಏನು ಅಂತ ಹೇಗೆ ತಿಳಿಯುತ್ತೆ' ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅ.21ರಂದು ವೈಮಾನಿಕ ಸಮೀಕ್ಷೆ ಜೊತೆಗೆ ಕಲಬುರಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿ ವಾಸ್ತವ ಪರಿಸ್ಥಿತಿಯನ್ನು ಅರಿತುಕೊಳ್ಳಲಿದ್ದಾರೆಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

ಅಸಮಾಧಾನ: ರಾಜ್ಯದ ಕಲಬುರಗಿ ಜಿಲ್ಲೆ ಸೇರಿದಂತೆ ವಿವಿಧೆಡೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸರಕಾರ ಸ್ಥಾಪಿಸಿರುವ ಕಾಳಜಿ ಕೇಂದ್ರಗಳಲ್ಲಿ `ಜಾತಿ ತಾರತಮ್ಯ' ಆರೋಪ ಕೇಳಿಬಂದಿದೆ. ಅಲ್ಲದೆ, ಸಂತ್ರಸ್ತರಿಗೆ ಸಮರ್ಪಕವಾಗಿ ಊಟ-ಉಪಾಹಾರ, ಕುಡಿಯುವ ನೀರು, ಹಾಸಿಗೆ, ಹೊದಿಕೆ ನೀಡುತ್ತಿಲ್ಲ ಎಂಬ ಪ್ರವಾಹ ಸಂತ್ರಸ್ತರಿಂದ ಅಸಮಾಧಾನವೂ ವ್ಯಕ್ತವಾಗಿದೆ.

ಪಿಡಿಒ, ಲೆಕ್ಕಾಧಿಕಾರಿ ಅಮಾನತು: ಕಲಬುರಗಿಯ ಯಾತ್ರಿ ನಿವಾಸದಲ್ಲಿ ಪ್ರಾರಂಭಿಸಿರುವ ಕಾಳಜಿ ಕೇಂದ್ರದಲ್ಲಿನ ಪ್ರವಾಹ ಸಂತ್ರಸ್ತರಿಗೆ ಊಟ ಮತ್ತು ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಪರಿಗಣಿಸಿ ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ವಿ.ವಿ.ಜೋತ್ನ್ಯಾ ಆದೇಶ ಹೊರಡಿಸಿದ್ದಾರೆ.

ಅಫಜಲಪೂರ ತಾಲೂಕಿನ ದೇವಲ ಗಾಣಗಾಪೂರದ ಯಾತ್ರಿ ನಿವಾಸದಲ್ಲಿ ಸಂತ್ರಸ್ತರ ಕಾಳಜಿ ಕೇಂದ್ರದಕ್ಕೆ ಭೇಟಿ ನೀಡಿದ ವೇಳೆ ಸಂತ್ರಸ್ತರು ಜಿಲ್ಲಾಧಿಕಾರಿಗೆ ದೂರು ನೀಡಿದ ಹಿನ್ನೆಯಲ್ಲಿ ಕ್ರಮಕೈಗೊಳಲಾಗಿದೆ ಎಂದು ಗೊತ್ತಾಗಿದೆ. ಸಂತ್ರಸ್ತರಿಗೆ ಊಟ-ಉಪಹಾರ ಸರಿಯಾಗಿ ನೀಡುತ್ತಿಲ್ಲ, ಅನ್ನದಲ್ಲಿ ಹುಳು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬ ದೂರಿನ ಮೇರೆಗೆ ಕರ್ತವ್ಯ ಲೋಪಕ್ಕಾಗಿ ಪಿಡಿಒ ಗುರುನಾಥ ಹರಿದಾಸ ಮತ್ತು ಗ್ರಾಮ ಲೆಕ್ಕಾಧಿಕಾರಿ ಭಾಗ್ಯಶ್ರೀ ಯಳವಾರ ಅವರನ್ನು ಅಮಾನತುಗೊಳಿಸಿದ್ದಾರೆ.

ತಾಯಿ-ಮಗು ರಕ್ಷಣೆ: ಭೀಮಾ ನದಿ ತುಂಬಿ ಹರಿಯುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಪಿಎಸ್ಸೈ ಸಂಗಮೇಶ್ ಅಂಗಡಿ, ತಾಯಿ-ಮಗುವನ್ನು ರಕ್ಷಿಸಿ ದಡಕ್ಕೆ ಸೇರಿಸಿದರು. ಭೀಮಾನದಿಯ ಭಾರಿ ಪ್ರವಾಹದ ಹಿನ್ನೆಲೆಯಲ್ಲಿ ತಾಲೂಕಿನ ನದಿ ಪಕ್ಕದಲ್ಲಿರುವ ಗ್ರಾಮಗಳು ಮುಳುಗಡೆಯಾಗಿದ್ದು, ಗ್ರಾಮದಲ್ಲಿರುವ ಸಾರ್ವಜನಿಕರನ್ನು ಬೇರೆ ಕಡೆಗೆ ಸ್ಥಳಾಂತರಿಸಲು ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಸಾಂಕ್ರಾಮಿಕ ರೋಗದ ಭೀತಿ: ಪ್ರವಾಹ ಕೊಂಚ ಇಳಿಮುಖವಾಗಿದ್ದು, ನೀರು ನಿಂತ ರಸ್ತೆ, ಮನೆ, ಹೊಲ ಗದ್ದೆಗಳಲ್ಲಿ ಕೆಸರು, ಹೊಸಲು ತುಂಬಿಗೊಂಡಿದ್ದು, ಎಲ್ಲಡೆ ಗಬ್ಬು ವಾಸನೆ ಬೀರುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿ ಜನರಲ್ಲಿದೆ. ನೂರಾರು ಕುಟುಂಬಗಳು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದು, ಜಮೀನುಗಳಿಗೆ ನೀರು ನುಗ್ಗಿ ಸಾವಿರಾರು ಎಕರೆಗಳಲ್ಲಿ ಬೆಳೆದ ಬೆಳೆ ಸಂಪೂರ್ಣ ನಾಶವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X